Homeಮುಖಪುಟಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

ಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

- Advertisement -
- Advertisement -

12 ಅಂಕಿಗಳ ಆಧಾರ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳ ಅವರವರ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಲು ನಿರ್ದೇಶನ ನೀಡಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಆಧಾರ್ ನಂಬರನ್ನು ಸಾಮಾಜಿಕ ಜಾಲತಾಣಗಳ ಖಾತೆಗೆ ಲಿಂಕ್ ಮಾಡುವ ವಿಚಾರದ ಬಗ್ಗೆ ಈಗಾಗಲೇ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಹಾಗಾಗಿ ಅಂತದ್ದೇ ಪ್ರಕರಣವನ್ನು ನಾನು ಮತ್ತೆ ಕೈಗೆತ್ತಿಕೊಳ್ಳಲಾರೆ. ನೀವು ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಂದು ದೂರುದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

ಬಹು ದಿನಗಳಿಂದ ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ನಂಬರ್ ಲಿಂಕ್ ವಿಚಾರ ಸುದ್ದಿಯಲ್ಲಿದೆ. ಆನ್ ಲೈನ್ ಕಿರುಕುಳ, ನಿಂದನೆ, ಸುಳ್ಳು ಸುದ್ದಿ ಹಾಗೂ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಸಮಾಜದ ಸ್ವಾಸ್ಥ್ಯ ಕೆಡಿಸುವ ಪೋಸ್ಟ್ ಹಾಕುವುದನ್ನು ತಡೆಯಲು ಫೇಸ್ ಬುಕ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಆಧಾರ್ ಲಿಂಕ್ ಮಾಡಬೇಕೆಂಬುದು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರ ವಾದವಾಗಿತ್ತು.

`ಎಲ್ಲಾ ಕೇಸ್ ಗಳು, ವಿಷಯಗಳನ್ನು ಸುಪ್ರೀಂಕೋರ್ಟ್ ಗೆ ತರಬೇಕು ಎಂದೇನಿಲ್ಲ. ಆಧಾರ್ ವಿಚಾರವಾಗಿ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ನೀವು ಅಲ್ಲಿಗೆ ಹೋಗಿ’ ಎಂದು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಮದ್ರಾಸ್ ಹೈಕೋರ್ಟಿನ ಮುಂದೆ ಇದೇ ವಿಷಯಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ವಿಚಾರಣೆಯಲ್ಲಿವೆ. ಈಗಾಗಲೇ ‘ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ಲಿಂಕ್ ಮಾಡುವ ಅಗತ್ಯವಿಲ್ಲ. ಆದರೆ ಕೆಲ ಸಂದೇಶಗಳ ಮೂಲಗಳನ್ನು ಪತ್ತೆ ಹಚ್ಚುವ ಸಂಭಾವ್ಯತೆಗೆ ಸಂಬಂಧಿಸಿದಂತೆ ಅರ್ಜಿಯನ್ನು ವಿಸ್ತರಿಸಬಹುದು’ ಎಂದು ಹೇಳಿರುವ ಹೈಕೋರ್ಟ್ ಆ ದಿಶೆಯಲ್ಲೇ ವಿಚಾರಣೆ ನಡೆಸುತ್ತಿದೆ. ಅಂದಹಾಗೆ, ಬಾಂಬೆ ಮತ್ತು ಮಧ್ಯಪ್ರದೇಶ ಹೈಕೋರ್ಟ್ ಗಳ ಮುಂದೆಯೂ ಇಂತಜಹ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.

ಇದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಫೇಸ್ ಬುಕ್ ಸಂಸ್ಥೆ `ಬೇರೆಬೇರೆ ಹೈಕೋರ್ಟುಗಳಲ್ಲಿ ಒಂದೇ ಬಗೆಯ ಪ್ರಕರಣಗಳು ವಿಚಾರಣೆ ನಡೆದು, ವ್ಯತಿರಿಕ್ತ ತೀರ್ಪುಗಳು ಬರುವುದರ ಬದಲು ಎಲ್ಲವನ್ನೂ ಒಟ್ಟುಗೂಡಿಸಿ ಸರ್ವೋಚ್ಛ ನ್ಯಾಯಾಲಯವೇ ಕೈಗೆತ್ತಿಕೊಳ್ಳಬೇಕು’ ಎಂಬ ಮನವಿ ಮಾಡಿಕೊಂಡಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನೂ ಪುರಸ್ಕರಿಸಿಲ್ಲ.

ಇನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದ ಮುಂದೆ ಹಾಜರಾಗಿ ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ನಿಯಮಾವಳಿಗಳನ್ನು ರೂಪಿಸುತ್ತಿರುವ ಪ್ರಕ್ರಿಯೆಯನ್ನು ವಿವರಿಸಿದರು, ಆದರೆ ಅದನ್ನು ಅಂತಿಮಗೊಳಿಸಲು ಎಷ್ಟು ಕಾಲಾವಧಿ ಬೇಕಾಗುವುದು ಎಂಬುದನ್ನು ಈಗಲೇ ಹೇಳಲು ಸಾಧ್ಯವಾಗದು ಎಂದಿದ್ದಾರೆ. ಇತ್ತ ತಮಿಳುನಾಡು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು `ಹೈಕೋರ್ಟ್ ನ ಮುಂದೆ ನಡೆಯುತ್ತಿರುವ ವಿಚಾರಣೆಗೆ ಪದೇಪದೇ ಗೈರು ಹಾಜರಾಗುತ್ತಿರುವ ಸೋಶಿಯಲ್ ಮೀಡಿಯಾ ಕಂಪನಿಗಳು ಈಗ ಪ್ರಕರಣವನ್ನು ಸುಪ್ರೀಂ ಕೋರ್ಟಿಗೆ ವರ್ಗಾಯಿಸಬೇಕೆಂದು ಮನವಿ ಸಲ್ಲಿಸಿವೆ. ಆದರೆ  ಹೈಕೋರ್ಟ್ ಗಳೇ  ವಿಚಾರಣೆ ನಡೆಸಲು ಸರ್ವೋಚ್ಛ ನ್ಯಾಯಾಲಯ ಅನುವು ಮಾಡಿಕೊಡಬೇಕು’ ಎಂಬ ವಾದ ಮಂಡಿಸಿದ್ದರು. ಅವರ ವಾದವನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಹೈಕೋರ್ಟುಗಳಿಗೇ ತೆರಳುವಂತೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...