Homeಅಂಕಣಗಳುಸಾರ್ವಜನಿಕ ನೀತಿಗಳು ಮತ್ತು ಕಪ್ಪುಹಣ

ಸಾರ್ವಜನಿಕ ನೀತಿಗಳು ಮತ್ತು ಕಪ್ಪುಹಣ

- Advertisement -
- Advertisement -

ಹೆಚ್.ಎಸ್.ದೊರೆಸ್ವಾಮಿ |

ಪ್ರಜಾಪ್ರಭುತ್ವದಲ್ಲಿ ಜನರ ಅಭ್ಯರ್ಥಿಗಳು ಚುನಾವಣೆಗೆ ನಿಲ್ಲಬೇಕು. ನಮ್ಮ ಸಂವಿಧಾನದಲ್ಲಿ ಪಕ್ಷಗಳ ಪ್ರಸ್ತಾಪವೇ ಇಲ್ಲದಿದ್ದರೂ ರಾಜಕೀಯ ಪಕ್ಷಗಳು ಎಲ್ಲೆಡೆ ವೃದ್ಧಿಯಾಗುತ್ತಲೇ ಇವೆ. ಜನರ ಪ್ರತಿನಿಧಿಯಾರೂ ಆಯ್ಕೆಯಾಗುತ್ತಿಲ್ಲ; ರಾಜಕೀಯ ಪಕ್ಷದ ಅಭ್ಯರ್ಥಿಗಳೆ ಸ್ಪರ್ಧಿಸಿ ಆಯ್ಕೆಯಾಗುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ, ಕಮ್ಯೂನಿಸ್ಟ್ ಪಕ್ಷಗಳು ಹೀಗೆ ಇತರೆ ಪಕ್ಷಗಳ ಅಭ್ಯರ್ಥಿಗಳೇ ಆಯ್ಕೆಯಾಗುತ್ತಿದ್ದಾರೆ. ಜನರ ಪ್ರತಿನಿಧಿಗಳು ಎಲ್ಲಿ? ಜನರ ಮತಗಳಿಂದಲೇ ಆಯ್ಕೆಯಾದರೂ ಪಕ್ಷಗಳ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗುತ್ತಿದ್ದಾರೆ. ಹಾಗಾಗಿ ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಜನರ ಪ್ರತಿನಿಧಿಗಳೇ ಇಲ್ಲ.
ಒಂದು, ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ರಾಜಕೀಯ ಪಕ್ಷಗಳನ್ನು ನಿರ್ಬಂಧಿಸಬೇಕು ಇಲ್ಲವೇ ಪರ್ಯಾಯವಾಗಿ ಅಥವಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ಮತದಾರರ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಮತದಾರರ ಕೌನ್ಸಿಲ್‍ಗಳ ರಚನೆಯಾಗಬೇಕು.
ಪಂಚವಾರ್ಷಿಕ ಯೋಜನೆಗಳು
ದೇಶದ ಮೊದಲ ಪ್ರಧಾನಿ ನೆಹರು ಅವರು ಪರಿಚಯಿಸಿದ ಪಂಚವಾರ್ಷಿಕ ಯೋಜನೆಗಳು ಯಶಸ್ವಿಯಾಗಲಿಲ್ಲ. ಈ ಯೋಜನೆಗಳು ಸಾರ್ವಜನಿಕ ನೀತಿಗಳ ಚೈತನ್ಯದ ವಿರುದ್ಧವಾಗಿದ್ದವು. 65 ವರ್ಷಗಳಲ್ಲಿ 13 ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಒಂದೊಂದು ಪಂಚವಾರ್ಷಿಕ ಯೋಜನೆಗಳಲ್ಲಿ ಕೋಟ್ಯಾಂತರ ರೂಪಾಯಿಗಳನ್ನು ವ್ಯಯಿಸಲಾಯಿತು. ಆದರೆ ಅದರ ಫಲಿತಾಂಶ : ಶ್ರೀಮಂತರು ಇನ್ನಷ್ಟು ಶ್ರೀಮಂತರಾದರೆ ಬಡವರು ಹೆಚ್ಚಿನ ಬಡತನಕ್ಕೆ ದೂಡಲ್ಪಟ್ಟರು. ಈ ಪ್ರಯೋಗ ಬಡತನದ ರೇಖೆಯ ಕೆಳಗೆ 33% ಜನರನ್ನು ಸೃಷ್ಟಿಸಿತು. ದೇಶಕ್ಕೆ ಸ್ವಾತಂತ್ರ ಬಂದಕೂಡಲೇ ಬಡತನವನ್ನು ನಿರ್ಮೂಲನೆ ಮಾಡಬೇಕು ಎಂದು ಗಾಂಧೀಜಿಯವರು ಪಣತೊಟ್ಟಿದ್ದರು. ಆದರೆ ಸ್ವಾತಂತ್ರಾನಂತರ ಬಂದ ಸರಕಾರಗಳ ನೀತಿಗಳಿಂದಾಗಿ ಇದು ಆಗಲಿಲ್ಲ. ಸ್ವಾತಂತ್ರ ಸಿಕ್ಕ ಕೂಡಲೇ ಬಡತನ ನಿರ್ಮೂಲನೆಗಾಗಿ ಸಾರ್ವಜನಿಕ ನೀತಿಯೊಂದನ್ನು ರೂಪಿಸಿದ್ದರೆ, ಇಂದು ನಾವು ಒಂದು ಸಮಾನಾವಕಾಶವುಳ್ಳ (egಚಿಟiಣಚಿಡಿiಚಿಟಿ) ಸಮಾಜವನ್ನು ಸೃಷ್ಟಿಸಿರುತ್ತಿದ್ದೆವು.
13 ಪಂಚವಾರ್ಷಿಕ ಯೋಜನೆಗಳಲ್ಲಿ ಎರಡು ಅಥವಾ ಮೂರು ಯೋಜನೆಗಳನ್ನಷ್ಟೇ ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೂ, ಭಾರತದ ಪರಿಸ್ಥಿತಿ ಬೇರಯೇ ಆಗಿರುತ್ತಿತ್ತು.
ಸಾರ್ವಜನಿಕ ನೀತಿಗಳೆಂದರೆ, ಸಂವಿಧಾನದ ನಿಬಂಧನೆಗಳ ವಿರುದ್ಧವಿರದ, ಸಾರ್ವಜನಿಕರಿಗೆ ಒಪ್ಪಿಗೆಯಾಗುವ ಸರಕಾರದ ನೀತಿಗಳು ಎಂದು ವ್ಯಾಖ್ಯಾನಿಸಬಹುದು.
ಸಾರ್ವಜನಿಕ ನೀತಿ ಎಂದರೆ, ಕಾನೂನು ಮತ್ತು ಸಾಂಸ್ಥಿಕ ಪದ್ಧತಿಗಳೊಂದಿಗೆ ಅನುಗುಣವಾಗಿರುವಂತೆ, ಎದುರಿಗಿರುವ ಸಮಸ್ಯೆ/ವಿಷಯಗಳನ್ನು ನಿವಾರಿಸಲು ಸರಕಾರದ ಆಡಳಿತದ ಕಾರ್ಯಾಂಗಗಳು ತೆಗೆದುಕೊಳ್ಳುವ ಕ್ರಮಗಳಿಗೆ ಇರಬೇಕಾದ ತತ್ವಾಧಾರಿತ ಮಾರ್ಗದರ್ಶಿ ಎನ್ನಬಹುದು.
ಇನ್ನೂ ಕೆಲವು ವಿದ್ವಾಂಸರು ಸಾರ್ವಜನಿಕ ನೀತಿ ಎಂದರೆ,, a system of courses of actions, regulatory measures, laws and funding priorities, concerning a given topic promulgated by government entity or it’s representatives’ . ಸರಕಾರ ಅಥವಾ ಅದರ ಪ್ರತಿನಿಧಿಗಳಿಂದ ಒಂದು ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿದಂತೆ ಅನುಸರಿಸುವ ಕ್ರಮಗಳು, ನಿಯಂತ್ರಕ ಕ್ರಮಗಳು ಹಾಗೂ ಬಂಡವಾಳ ಒದಗಿಸುವ ವ್ಯವಸ್ಥೆ. ಸಂವಿಧಾನದಲ್ಲಿ, ಶಾಸನಬದ್ಧ ಕ್ರಮಗಳಲ್ಲಿ ಹಾಗೂ ನ್ಯಾಯಾಂಗದಲ್ಲಿ ಸಾರ್ವಜನಿಕ ನೀತಿಗಳು ಸಾಮಾನ್ಯವಾಗಿ ಸಾಕಾರಗೊಳ್ಳುತ್ತವೆ.
ನಮ್ಮೆದುರಿಗೆ ಈಗ ಇನ್ನೊಂದು ಸಮಸ್ಯೆಯಿದೆ, ಲೋಕಸಭೆಯಲ್ಲಿ ಹಾಗೂ ವಿಧಾನಸಭೆಯಲ್ಲಿಯ ಕಾರ್ಯಕಲಾಪಗಳು ನಾಚಿಕೆ ಹುಟ್ಟಿಸುವಂತಿವೆ. ವಿರೋಧ ಪಕ್ಷಗಳು ನಡೆದುಕೊಳ್ಳುವ ರೀತಿ ಅಸಹ್ಯವಾಗಿದೆ. ತಮ್ಮನ್ನು ಜನರ ಸೇವೆಗಾಗಿ ಆಯ್ಕೆ ಮಾಡಲಾಗಿದೆ ಎನ್ನುವುದು ಅವರುಗಳು ಮರೆತಂತಿದೆ. ಸಭೆಯಲ್ಲಿ ಅವರು ಗೊಂದಲ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲು ಇವರುಗಳು ಅವಕಾಶವೇ ನೀಡುತ್ತಿಲ್ಲ. ಅವರೆದುರಿಗಿರಿಸಿದ ಬಿಲ್‍ಗಳನ್ನು ಯಾವುದೇ ಚರ್ಚೆಯಿಲ್ಲದೇ ಪಾಸ್ ಮಾಡುತ್ತಿದ್ದಾರೆ. ವಿಧೇಯಕವನ್ನು ಅಂಗೀಕರಿಸುವ ಸಮಯದಲ್ಲಿ, ಸದನದಿಂದ ಹೊರನಡೆಯುತ್ತಾರೆ ಹಾಗೂ ಆಗ ಆಡಳಿತ ಪಕ್ಷದ ಸದಸ್ಯರು ವಿಧೇಯಕದ ಪರವಾಗಿ ತಮ್ಮ ಧ್ವನಿಯೆತ್ತುತ್ತಾರೆ ಆಗ ಸದನದ ಸ್ಪೀಕರ್ ವಿಧಾಯಕ ಅಂಗೀಕರಿಸಲಾಗಿದೆ ಎಂದು ಘೋಷಿಸುತ್ತಾರೆ. ಕಳೆದ 10-15 ವರ್ಷದಿಂದ ಈ ಪ್ರಹಸನ ನಡೆಯುತ್ತಲೇ ಇದೆ. ಹಿರಿಯ ಸಭಾಪತಿಗಳಾದ ಸೋಮನಾಥ್ ಚಟರ್ಜಿಗೆ ಕೂಡ ಎಮ್‍ಪಿಗಳ ಮಾಬ್ ಮನಸ್ಥಿತಿಯನ್ನು ಹದ್ದುಬಸ್ತಿನಲ್ಲಿಡಲು ಆಗಲಿಲ್ಲ. ಇಂತಹ ಅವ್ಯವಸ್ಥೆಗಳಲ್ಲಿ ತೊಡಗಿದ್ದಾಗಲೇ, ತಮ್ಮ ಸಂಬಳ ಮತ್ತು ಸವಲತ್ತುಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಏಳು ಸಲ ಏರಿಸಿಕೊಂಡರು. ಅದೂ ಯಾವುದೇ ಚರ್ಚೆ, ವಿರೋಧವಿಲ್ಲದೇ.
1935 ರಲ್ಲಿ ಗಾಂಧೀಜಿಯವರು ಸ್ವದೇಶಿ ಆಂದೋಲನ ಶುರುಮಾಡಿದಾಗ ಭಾರತದಲ್ಲಿ ಬರೀ ಒಂದು ವಿದೇಶಿ ಕಂಪನಿ ಇತ್ತು; ಈಸ್ಟ್ ಇಂಡಿಯಾ ಕಂಪನಿ. ಅವರು ಹಡಗುಗಳಲ್ಲಿ ತುಂಬಿಸಿ ಹತ್ತಿಯನ್ನು ಇಂಗ್ಲೆಂಡಿಗೆ ಒಯ್ದು, ಭಾರತೀಯರಿಗೆ ಮಾರಲು ಹತ್ತಿಯ ಬಟ್ಟೆಯನ್ನು ಮರಳಿ ತರುತ್ತಿದ್ದರು. ಒಂದು ವೇಳೆ ಬ್ರಿಟಿಷರಿಗೆ ತಮ್ಮ ಉತ್ಪನ್ನಗಳನ್ನು ಭಾರತದಲ್ಲಿ ಮಾರಲು ಅವಕಾಶ ನೀಡಿದಲ್ಲಿ, ಅವರು ತಮ್ಮ ಯಂತ್ರಗಳೊಂದಿಗೆ ಇಲ್ಲಿಗೆ ಬಂದು ಕಾರ್ಖಾನೆಗಳನ್ನು ಪ್ರಾರಂಭಿಸುವ ದಿನಗಳು ದೂರವಿಲ್ಲ ಎಂದು ಗಾಂಧೀಜಿ ಭವಿಷ್ಯ ನುಡಿದಿದ್ದರು. ಹಾಗಾಗಿ ಅವರ ವಸ್ತುಗಳಿಗೆ ಇಂದೇ ಬಹಿಷ್ಕಾರ ಹಾಕಬೇಕು ಎಂದರು. ಹೊರದೇಶದಿಂದ ಭಾರತಕ್ಕೆ ಬರುವ ವಸ್ತುಗಳನ್ನು ಸುಟ್ಟುಹಾಕುವ ಅತ್ಯಂತ ಯಶಸ್ವೀ ಚಳವಳಿಯನ್ನು ಗಾಂಧೀಜಿ ಪ್ರಾರಂಭಿಸಿದರು. ಈ ಚಳವಳಿ ಕಾಳ್ಗಿಚ್ಚಿನಂತೆ ಭಾರತದೆಲ್ಲೆಡೆ ಹಬ್ಬಿತು. ಒಂದೇ ಒಂದು ವಿದೇಶಿ ಕಂಪನಿ ಕೂಡ ಭಾರತಕ್ಕೆ ಬಂದು, ಇಲ್ಲಿಯ ಜನರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಗಾಂಧೀಜಿ ಹೇಳಿದ್ದರು.
ಯಾವುದೇ ಅನುಮಾನವಿಲ್ಲದೆ ವೇಗವಾಗಿ ಆರ್ಥಿಕ ಬೆಳವಣಿಗೆ ಆಗುತ್ತಿದೆ ಆದರೆ ಅದರ ಜೊತೆಜೊತೆಗೆ ಬಡವರು ಮತ್ತು ಶ್ರೀಮಂತರ ಅಂತರವೂ ಸಹ ಬೆಳೆಯುತ್ತಲೇ ಇದೆ. ಶ್ರೀಮಂತರು ಹೆಚ್ಚು ಶ್ರೀಮಂತರಾಗುತ್ತಿದ್ದಾರೆ ಮತ್ತು ಬಡವರು ಇನ್ನಷ್ಟು ಬಡವರಾಗುತ್ತಿದ್ದಾರೆ. ಇಂತಹ ಅನಾರೋಗ್ಯಕರ ಬೆಳವಣಿಗೆ ಆಗುತ್ತಿರುವ ಈ ಕಾಲಘಟ್ಟದಲ್ಲಿ ವಿಶೇಷವಾಗಿ ಮೋದಿ ಸರ್ಕಾರವು ಕೋಟ್ಯಾಧಿಪತಿಗಳ ಪೋಷಣೆ ಮಾಡುತ್ತಿದ್ದಾರೆ ಇದು ಸಾಮಾನ್ಯ ಜನರ ಗಂಡಾಂತರಕ್ಕೆ ಕಾರಣವಾಗಬಹುದೇ?
ಹಣಬಲ: ನಿಯಂತ್ರಿಸುವುದು ಹೇಗೆ?
ಹಣಬಲ- ಒಂದು ಜಾಗತಿಕ ವಿದ್ಯಮಾನ. ಹಣವು ಒಂದು ನಿರ್ಜೀವ ವಸ್ತುವಾಗಿದೆ. ಅದಕ್ಕೆ ನಾವು ಜೀವ ಮತ್ತು ಚಲನೆಯನ್ನು ನೀಡುತ್ತೇವೆ. ಹಣವನ್ನು ಜನರು ಮತ್ತು ಸರ್ಕಾರಗಳೂ ನಿಯಂತ್ರಿಸುವಂತಿರಬೇಕಿತ್ತು. ಆದರೆ ಇಂದು ಹಣ ಮತ್ತು ಹಣವಂತರು ಜನರನ್ನು ಹಾಗೂ ಸಮುದಾಯಗಳನ್ನು ನಿಯಂತ್ರಿಸುತ್ತಿದೆ. ಅಷ್ಟೇ ಅಲ್ಲದೆ ಮಂತ್ರಿಗಳನ್ನು, ಸರ್ಕಾರದ ಬೇರೆ ಬೇರೆ ಪ್ರತಿನಿಧಿಗಳನ್ನು ನಿಭಾಯಿಸುತ್ತಿದೆ. ನಾಯಿ ಬಾಲವನ್ನು ಅಲುಗಾಡಿಸುವ ಬದಲಿಗೆ ಬಾಲವೇ ನಾಯಿಯನ್ನು ಅಲ್ಲಾಡಿಸುತ್ತಿರುವಂತಿದೆ.
ಹಣವು ವ್ಯಕ್ತಿಗಳನ್ನು ಮತ್ತು ಸರ್ಕಾರವನ್ನು ಕೊಂಡುಕೊಳ್ಳಬಹುದಾಗಿದೆ. ನಾವುಗಳು ಹಣ ಮತ್ತು ಹಣವಂತ ವರ್ಗಕ್ಕೆ ಗುಲಾಮರಾಗಿದ್ದೇವೆ. ಇದರಿಂದ ಹೇಗೆ ಹೊರಬರಬೇಕು ಅನ್ನುವುದೇ ಇಡೀ ಜಗತ್ತಿಗೆ ದೊಡ್ಡ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.
ನಾನು ಕಪ್ಪು ಹಣದ ಉತ್ಪತ್ತಿಯ ಬಗ್ಗೆ ಒಂದು ಉದಾಹರಣೆ ಕೊಡುತ್ತೇನೆ. ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ತುಂಬಿಹೋಗಿವೆ ಎಂಬುದು ನಿಮಗೆ ಗೊತ್ತಿದೆ; ಕೆಲವು ಗುಂಡಿಗಳು ಚಿಕ್ಕವು, ಕೆಲವು ಆಳವಾದವು, ಭಯಂಕರವಾದವು. ಮಳೆ ಬಂದಾಗ ಈ ಗುಂಡಿಗಳೆಲ್ಲ ನೀರಿನಿಂದ ತುಂಬಿಹೋಗುತ್ತವೆ. ಕೆಲವು ದಿನಗಳ ನಂತರ ಈ ನೀರು ಕಲುಷಿತಗೊಳ್ಳುತ್ತದೆ, ಅದರಲ್ಲಿ ರೋಗಾಣುಗಳು ಸೇರಿಕೊಳ್ಳುತ್ತವೆ ಮತ್ತು ಅದರಿಂದ ಇಡೀ ಬೆಂಗಳೂರಿಗೆ ಕಾಯಿಲೆ ಹರಡುತ್ತದೆ. ಕಪ್ಪು ಹಣದ ವಿಚಾರವೂ ಹೀಗೆಯೇ. ಯಾವಾಗ ಹಣವು ಹರಿವಿನಲ್ಲಿಲ್ಲದೆ ನಿಂತಲ್ಲೇ ನಿಲ್ಲುತ್ತದೋ ಆಗ ಅದು ಕಪ್ಪು ಹಣವಾಗುತ್ತದೆ. ಹಣ ಇರುವುದೇ ಹರಿಯುವುದಕ್ಕಾಗಿ. ಅದು ಕೈಯಿಂದ ಕೈಗೆ ನಿರಂತರವಾಗಿ ಹರಿದಾಡುತ್ತಲೇ ಇರಬೇಕು. ಅದಕ್ಕಾಗಿಯೇ ಹಣವನ್ನು ಕರೆನ್ಸಿ ಎಂದು ಕರೆದಿರುವುದು. ಹಣವನ್ನು ಈ ರೀತಿ ಕರೆಂಟಿನಂತೆ ಹರಿದಾಡುವ ಹಾಗೆ ಮಾಡುವುದು ಹೇಗೆ? ಸಾರ್ವಜನಿಕ ನೀತಿ ನಿರೂಪಣೆಯ ಕೇಂದ್ರಗಳು ಈ ಸಂಕೀರ್ಣ ವಿಚಾರದ ಬಗ್ಗೆ ಗಂಭೀರವಾದ ಚಿಂತನೆ ನಡೆಸಿ, ಸೂಕ್ತ ಪರಿಹಾರೋಪಾಯವನ್ನು ಕಂಡುಕೊಳ್ಳಬೇಕು. ಇದು ಸಾಧ್ಯವಾದಾಗಲೇ ಹಣವನ್ನು ನಿಯಂತ್ರಣಕ್ಕೆ ತರಬಹುದು ಮತ್ತು ನಾವು ಅದನ್ನು ಬೇಕಾದಂತೆ ಆಡಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...