Homeಅಂಕಣಗಳುಸಾರ್ವಜನಿಕ ನೀತಿಗಳು ಮತ್ತು ಕಪ್ಪುಹಣ

ಸಾರ್ವಜನಿಕ ನೀತಿಗಳು ಮತ್ತು ಕಪ್ಪುಹಣ

- Advertisement -
- Advertisement -

ಹೆಚ್.ಎಸ್.ದೊರೆಸ್ವಾಮಿ |

ಪ್ರಜಾಪ್ರಭುತ್ವದಲ್ಲಿ ಜನರ ಅಭ್ಯರ್ಥಿಗಳು ಚುನಾವಣೆಗೆ ನಿಲ್ಲಬೇಕು. ನಮ್ಮ ಸಂವಿಧಾನದಲ್ಲಿ ಪಕ್ಷಗಳ ಪ್ರಸ್ತಾಪವೇ ಇಲ್ಲದಿದ್ದರೂ ರಾಜಕೀಯ ಪಕ್ಷಗಳು ಎಲ್ಲೆಡೆ ವೃದ್ಧಿಯಾಗುತ್ತಲೇ ಇವೆ. ಜನರ ಪ್ರತಿನಿಧಿಯಾರೂ ಆಯ್ಕೆಯಾಗುತ್ತಿಲ್ಲ; ರಾಜಕೀಯ ಪಕ್ಷದ ಅಭ್ಯರ್ಥಿಗಳೆ ಸ್ಪರ್ಧಿಸಿ ಆಯ್ಕೆಯಾಗುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ, ಕಮ್ಯೂನಿಸ್ಟ್ ಪಕ್ಷಗಳು ಹೀಗೆ ಇತರೆ ಪಕ್ಷಗಳ ಅಭ್ಯರ್ಥಿಗಳೇ ಆಯ್ಕೆಯಾಗುತ್ತಿದ್ದಾರೆ. ಜನರ ಪ್ರತಿನಿಧಿಗಳು ಎಲ್ಲಿ? ಜನರ ಮತಗಳಿಂದಲೇ ಆಯ್ಕೆಯಾದರೂ ಪಕ್ಷಗಳ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗುತ್ತಿದ್ದಾರೆ. ಹಾಗಾಗಿ ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಜನರ ಪ್ರತಿನಿಧಿಗಳೇ ಇಲ್ಲ.
ಒಂದು, ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ರಾಜಕೀಯ ಪಕ್ಷಗಳನ್ನು ನಿರ್ಬಂಧಿಸಬೇಕು ಇಲ್ಲವೇ ಪರ್ಯಾಯವಾಗಿ ಅಥವಾ ಚುನಾವಣೆಗಳಲ್ಲಿ ಸ್ಪರ್ಧಿಸಿ, ಮತದಾರರ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಮತದಾರರ ಕೌನ್ಸಿಲ್‍ಗಳ ರಚನೆಯಾಗಬೇಕು.
ಪಂಚವಾರ್ಷಿಕ ಯೋಜನೆಗಳು
ದೇಶದ ಮೊದಲ ಪ್ರಧಾನಿ ನೆಹರು ಅವರು ಪರಿಚಯಿಸಿದ ಪಂಚವಾರ್ಷಿಕ ಯೋಜನೆಗಳು ಯಶಸ್ವಿಯಾಗಲಿಲ್ಲ. ಈ ಯೋಜನೆಗಳು ಸಾರ್ವಜನಿಕ ನೀತಿಗಳ ಚೈತನ್ಯದ ವಿರುದ್ಧವಾಗಿದ್ದವು. 65 ವರ್ಷಗಳಲ್ಲಿ 13 ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಒಂದೊಂದು ಪಂಚವಾರ್ಷಿಕ ಯೋಜನೆಗಳಲ್ಲಿ ಕೋಟ್ಯಾಂತರ ರೂಪಾಯಿಗಳನ್ನು ವ್ಯಯಿಸಲಾಯಿತು. ಆದರೆ ಅದರ ಫಲಿತಾಂಶ : ಶ್ರೀಮಂತರು ಇನ್ನಷ್ಟು ಶ್ರೀಮಂತರಾದರೆ ಬಡವರು ಹೆಚ್ಚಿನ ಬಡತನಕ್ಕೆ ದೂಡಲ್ಪಟ್ಟರು. ಈ ಪ್ರಯೋಗ ಬಡತನದ ರೇಖೆಯ ಕೆಳಗೆ 33% ಜನರನ್ನು ಸೃಷ್ಟಿಸಿತು. ದೇಶಕ್ಕೆ ಸ್ವಾತಂತ್ರ ಬಂದಕೂಡಲೇ ಬಡತನವನ್ನು ನಿರ್ಮೂಲನೆ ಮಾಡಬೇಕು ಎಂದು ಗಾಂಧೀಜಿಯವರು ಪಣತೊಟ್ಟಿದ್ದರು. ಆದರೆ ಸ್ವಾತಂತ್ರಾನಂತರ ಬಂದ ಸರಕಾರಗಳ ನೀತಿಗಳಿಂದಾಗಿ ಇದು ಆಗಲಿಲ್ಲ. ಸ್ವಾತಂತ್ರ ಸಿಕ್ಕ ಕೂಡಲೇ ಬಡತನ ನಿರ್ಮೂಲನೆಗಾಗಿ ಸಾರ್ವಜನಿಕ ನೀತಿಯೊಂದನ್ನು ರೂಪಿಸಿದ್ದರೆ, ಇಂದು ನಾವು ಒಂದು ಸಮಾನಾವಕಾಶವುಳ್ಳ (egಚಿಟiಣಚಿಡಿiಚಿಟಿ) ಸಮಾಜವನ್ನು ಸೃಷ್ಟಿಸಿರುತ್ತಿದ್ದೆವು.
13 ಪಂಚವಾರ್ಷಿಕ ಯೋಜನೆಗಳಲ್ಲಿ ಎರಡು ಅಥವಾ ಮೂರು ಯೋಜನೆಗಳನ್ನಷ್ಟೇ ಬಡತನ ನಿರ್ಮೂಲನೆಗಾಗಿ ಮೀಸಲಿಟ್ಟಿದ್ದರೂ, ಭಾರತದ ಪರಿಸ್ಥಿತಿ ಬೇರಯೇ ಆಗಿರುತ್ತಿತ್ತು.
ಸಾರ್ವಜನಿಕ ನೀತಿಗಳೆಂದರೆ, ಸಂವಿಧಾನದ ನಿಬಂಧನೆಗಳ ವಿರುದ್ಧವಿರದ, ಸಾರ್ವಜನಿಕರಿಗೆ ಒಪ್ಪಿಗೆಯಾಗುವ ಸರಕಾರದ ನೀತಿಗಳು ಎಂದು ವ್ಯಾಖ್ಯಾನಿಸಬಹುದು.
ಸಾರ್ವಜನಿಕ ನೀತಿ ಎಂದರೆ, ಕಾನೂನು ಮತ್ತು ಸಾಂಸ್ಥಿಕ ಪದ್ಧತಿಗಳೊಂದಿಗೆ ಅನುಗುಣವಾಗಿರುವಂತೆ, ಎದುರಿಗಿರುವ ಸಮಸ್ಯೆ/ವಿಷಯಗಳನ್ನು ನಿವಾರಿಸಲು ಸರಕಾರದ ಆಡಳಿತದ ಕಾರ್ಯಾಂಗಗಳು ತೆಗೆದುಕೊಳ್ಳುವ ಕ್ರಮಗಳಿಗೆ ಇರಬೇಕಾದ ತತ್ವಾಧಾರಿತ ಮಾರ್ಗದರ್ಶಿ ಎನ್ನಬಹುದು.
ಇನ್ನೂ ಕೆಲವು ವಿದ್ವಾಂಸರು ಸಾರ್ವಜನಿಕ ನೀತಿ ಎಂದರೆ,, a system of courses of actions, regulatory measures, laws and funding priorities, concerning a given topic promulgated by government entity or it’s representatives’ . ಸರಕಾರ ಅಥವಾ ಅದರ ಪ್ರತಿನಿಧಿಗಳಿಂದ ಒಂದು ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿದಂತೆ ಅನುಸರಿಸುವ ಕ್ರಮಗಳು, ನಿಯಂತ್ರಕ ಕ್ರಮಗಳು ಹಾಗೂ ಬಂಡವಾಳ ಒದಗಿಸುವ ವ್ಯವಸ್ಥೆ. ಸಂವಿಧಾನದಲ್ಲಿ, ಶಾಸನಬದ್ಧ ಕ್ರಮಗಳಲ್ಲಿ ಹಾಗೂ ನ್ಯಾಯಾಂಗದಲ್ಲಿ ಸಾರ್ವಜನಿಕ ನೀತಿಗಳು ಸಾಮಾನ್ಯವಾಗಿ ಸಾಕಾರಗೊಳ್ಳುತ್ತವೆ.
ನಮ್ಮೆದುರಿಗೆ ಈಗ ಇನ್ನೊಂದು ಸಮಸ್ಯೆಯಿದೆ, ಲೋಕಸಭೆಯಲ್ಲಿ ಹಾಗೂ ವಿಧಾನಸಭೆಯಲ್ಲಿಯ ಕಾರ್ಯಕಲಾಪಗಳು ನಾಚಿಕೆ ಹುಟ್ಟಿಸುವಂತಿವೆ. ವಿರೋಧ ಪಕ್ಷಗಳು ನಡೆದುಕೊಳ್ಳುವ ರೀತಿ ಅಸಹ್ಯವಾಗಿದೆ. ತಮ್ಮನ್ನು ಜನರ ಸೇವೆಗಾಗಿ ಆಯ್ಕೆ ಮಾಡಲಾಗಿದೆ ಎನ್ನುವುದು ಅವರುಗಳು ಮರೆತಂತಿದೆ. ಸಭೆಯಲ್ಲಿ ಅವರು ಗೊಂದಲ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲು ಇವರುಗಳು ಅವಕಾಶವೇ ನೀಡುತ್ತಿಲ್ಲ. ಅವರೆದುರಿಗಿರಿಸಿದ ಬಿಲ್‍ಗಳನ್ನು ಯಾವುದೇ ಚರ್ಚೆಯಿಲ್ಲದೇ ಪಾಸ್ ಮಾಡುತ್ತಿದ್ದಾರೆ. ವಿಧೇಯಕವನ್ನು ಅಂಗೀಕರಿಸುವ ಸಮಯದಲ್ಲಿ, ಸದನದಿಂದ ಹೊರನಡೆಯುತ್ತಾರೆ ಹಾಗೂ ಆಗ ಆಡಳಿತ ಪಕ್ಷದ ಸದಸ್ಯರು ವಿಧೇಯಕದ ಪರವಾಗಿ ತಮ್ಮ ಧ್ವನಿಯೆತ್ತುತ್ತಾರೆ ಆಗ ಸದನದ ಸ್ಪೀಕರ್ ವಿಧಾಯಕ ಅಂಗೀಕರಿಸಲಾಗಿದೆ ಎಂದು ಘೋಷಿಸುತ್ತಾರೆ. ಕಳೆದ 10-15 ವರ್ಷದಿಂದ ಈ ಪ್ರಹಸನ ನಡೆಯುತ್ತಲೇ ಇದೆ. ಹಿರಿಯ ಸಭಾಪತಿಗಳಾದ ಸೋಮನಾಥ್ ಚಟರ್ಜಿಗೆ ಕೂಡ ಎಮ್‍ಪಿಗಳ ಮಾಬ್ ಮನಸ್ಥಿತಿಯನ್ನು ಹದ್ದುಬಸ್ತಿನಲ್ಲಿಡಲು ಆಗಲಿಲ್ಲ. ಇಂತಹ ಅವ್ಯವಸ್ಥೆಗಳಲ್ಲಿ ತೊಡಗಿದ್ದಾಗಲೇ, ತಮ್ಮ ಸಂಬಳ ಮತ್ತು ಸವಲತ್ತುಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಏಳು ಸಲ ಏರಿಸಿಕೊಂಡರು. ಅದೂ ಯಾವುದೇ ಚರ್ಚೆ, ವಿರೋಧವಿಲ್ಲದೇ.
1935 ರಲ್ಲಿ ಗಾಂಧೀಜಿಯವರು ಸ್ವದೇಶಿ ಆಂದೋಲನ ಶುರುಮಾಡಿದಾಗ ಭಾರತದಲ್ಲಿ ಬರೀ ಒಂದು ವಿದೇಶಿ ಕಂಪನಿ ಇತ್ತು; ಈಸ್ಟ್ ಇಂಡಿಯಾ ಕಂಪನಿ. ಅವರು ಹಡಗುಗಳಲ್ಲಿ ತುಂಬಿಸಿ ಹತ್ತಿಯನ್ನು ಇಂಗ್ಲೆಂಡಿಗೆ ಒಯ್ದು, ಭಾರತೀಯರಿಗೆ ಮಾರಲು ಹತ್ತಿಯ ಬಟ್ಟೆಯನ್ನು ಮರಳಿ ತರುತ್ತಿದ್ದರು. ಒಂದು ವೇಳೆ ಬ್ರಿಟಿಷರಿಗೆ ತಮ್ಮ ಉತ್ಪನ್ನಗಳನ್ನು ಭಾರತದಲ್ಲಿ ಮಾರಲು ಅವಕಾಶ ನೀಡಿದಲ್ಲಿ, ಅವರು ತಮ್ಮ ಯಂತ್ರಗಳೊಂದಿಗೆ ಇಲ್ಲಿಗೆ ಬಂದು ಕಾರ್ಖಾನೆಗಳನ್ನು ಪ್ರಾರಂಭಿಸುವ ದಿನಗಳು ದೂರವಿಲ್ಲ ಎಂದು ಗಾಂಧೀಜಿ ಭವಿಷ್ಯ ನುಡಿದಿದ್ದರು. ಹಾಗಾಗಿ ಅವರ ವಸ್ತುಗಳಿಗೆ ಇಂದೇ ಬಹಿಷ್ಕಾರ ಹಾಕಬೇಕು ಎಂದರು. ಹೊರದೇಶದಿಂದ ಭಾರತಕ್ಕೆ ಬರುವ ವಸ್ತುಗಳನ್ನು ಸುಟ್ಟುಹಾಕುವ ಅತ್ಯಂತ ಯಶಸ್ವೀ ಚಳವಳಿಯನ್ನು ಗಾಂಧೀಜಿ ಪ್ರಾರಂಭಿಸಿದರು. ಈ ಚಳವಳಿ ಕಾಳ್ಗಿಚ್ಚಿನಂತೆ ಭಾರತದೆಲ್ಲೆಡೆ ಹಬ್ಬಿತು. ಒಂದೇ ಒಂದು ವಿದೇಶಿ ಕಂಪನಿ ಕೂಡ ಭಾರತಕ್ಕೆ ಬಂದು, ಇಲ್ಲಿಯ ಜನರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಗಾಂಧೀಜಿ ಹೇಳಿದ್ದರು.
ಯಾವುದೇ ಅನುಮಾನವಿಲ್ಲದೆ ವೇಗವಾಗಿ ಆರ್ಥಿಕ ಬೆಳವಣಿಗೆ ಆಗುತ್ತಿದೆ ಆದರೆ ಅದರ ಜೊತೆಜೊತೆಗೆ ಬಡವರು ಮತ್ತು ಶ್ರೀಮಂತರ ಅಂತರವೂ ಸಹ ಬೆಳೆಯುತ್ತಲೇ ಇದೆ. ಶ್ರೀಮಂತರು ಹೆಚ್ಚು ಶ್ರೀಮಂತರಾಗುತ್ತಿದ್ದಾರೆ ಮತ್ತು ಬಡವರು ಇನ್ನಷ್ಟು ಬಡವರಾಗುತ್ತಿದ್ದಾರೆ. ಇಂತಹ ಅನಾರೋಗ್ಯಕರ ಬೆಳವಣಿಗೆ ಆಗುತ್ತಿರುವ ಈ ಕಾಲಘಟ್ಟದಲ್ಲಿ ವಿಶೇಷವಾಗಿ ಮೋದಿ ಸರ್ಕಾರವು ಕೋಟ್ಯಾಧಿಪತಿಗಳ ಪೋಷಣೆ ಮಾಡುತ್ತಿದ್ದಾರೆ ಇದು ಸಾಮಾನ್ಯ ಜನರ ಗಂಡಾಂತರಕ್ಕೆ ಕಾರಣವಾಗಬಹುದೇ?
ಹಣಬಲ: ನಿಯಂತ್ರಿಸುವುದು ಹೇಗೆ?
ಹಣಬಲ- ಒಂದು ಜಾಗತಿಕ ವಿದ್ಯಮಾನ. ಹಣವು ಒಂದು ನಿರ್ಜೀವ ವಸ್ತುವಾಗಿದೆ. ಅದಕ್ಕೆ ನಾವು ಜೀವ ಮತ್ತು ಚಲನೆಯನ್ನು ನೀಡುತ್ತೇವೆ. ಹಣವನ್ನು ಜನರು ಮತ್ತು ಸರ್ಕಾರಗಳೂ ನಿಯಂತ್ರಿಸುವಂತಿರಬೇಕಿತ್ತು. ಆದರೆ ಇಂದು ಹಣ ಮತ್ತು ಹಣವಂತರು ಜನರನ್ನು ಹಾಗೂ ಸಮುದಾಯಗಳನ್ನು ನಿಯಂತ್ರಿಸುತ್ತಿದೆ. ಅಷ್ಟೇ ಅಲ್ಲದೆ ಮಂತ್ರಿಗಳನ್ನು, ಸರ್ಕಾರದ ಬೇರೆ ಬೇರೆ ಪ್ರತಿನಿಧಿಗಳನ್ನು ನಿಭಾಯಿಸುತ್ತಿದೆ. ನಾಯಿ ಬಾಲವನ್ನು ಅಲುಗಾಡಿಸುವ ಬದಲಿಗೆ ಬಾಲವೇ ನಾಯಿಯನ್ನು ಅಲ್ಲಾಡಿಸುತ್ತಿರುವಂತಿದೆ.
ಹಣವು ವ್ಯಕ್ತಿಗಳನ್ನು ಮತ್ತು ಸರ್ಕಾರವನ್ನು ಕೊಂಡುಕೊಳ್ಳಬಹುದಾಗಿದೆ. ನಾವುಗಳು ಹಣ ಮತ್ತು ಹಣವಂತ ವರ್ಗಕ್ಕೆ ಗುಲಾಮರಾಗಿದ್ದೇವೆ. ಇದರಿಂದ ಹೇಗೆ ಹೊರಬರಬೇಕು ಅನ್ನುವುದೇ ಇಡೀ ಜಗತ್ತಿಗೆ ದೊಡ್ಡ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.
ನಾನು ಕಪ್ಪು ಹಣದ ಉತ್ಪತ್ತಿಯ ಬಗ್ಗೆ ಒಂದು ಉದಾಹರಣೆ ಕೊಡುತ್ತೇನೆ. ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ತುಂಬಿಹೋಗಿವೆ ಎಂಬುದು ನಿಮಗೆ ಗೊತ್ತಿದೆ; ಕೆಲವು ಗುಂಡಿಗಳು ಚಿಕ್ಕವು, ಕೆಲವು ಆಳವಾದವು, ಭಯಂಕರವಾದವು. ಮಳೆ ಬಂದಾಗ ಈ ಗುಂಡಿಗಳೆಲ್ಲ ನೀರಿನಿಂದ ತುಂಬಿಹೋಗುತ್ತವೆ. ಕೆಲವು ದಿನಗಳ ನಂತರ ಈ ನೀರು ಕಲುಷಿತಗೊಳ್ಳುತ್ತದೆ, ಅದರಲ್ಲಿ ರೋಗಾಣುಗಳು ಸೇರಿಕೊಳ್ಳುತ್ತವೆ ಮತ್ತು ಅದರಿಂದ ಇಡೀ ಬೆಂಗಳೂರಿಗೆ ಕಾಯಿಲೆ ಹರಡುತ್ತದೆ. ಕಪ್ಪು ಹಣದ ವಿಚಾರವೂ ಹೀಗೆಯೇ. ಯಾವಾಗ ಹಣವು ಹರಿವಿನಲ್ಲಿಲ್ಲದೆ ನಿಂತಲ್ಲೇ ನಿಲ್ಲುತ್ತದೋ ಆಗ ಅದು ಕಪ್ಪು ಹಣವಾಗುತ್ತದೆ. ಹಣ ಇರುವುದೇ ಹರಿಯುವುದಕ್ಕಾಗಿ. ಅದು ಕೈಯಿಂದ ಕೈಗೆ ನಿರಂತರವಾಗಿ ಹರಿದಾಡುತ್ತಲೇ ಇರಬೇಕು. ಅದಕ್ಕಾಗಿಯೇ ಹಣವನ್ನು ಕರೆನ್ಸಿ ಎಂದು ಕರೆದಿರುವುದು. ಹಣವನ್ನು ಈ ರೀತಿ ಕರೆಂಟಿನಂತೆ ಹರಿದಾಡುವ ಹಾಗೆ ಮಾಡುವುದು ಹೇಗೆ? ಸಾರ್ವಜನಿಕ ನೀತಿ ನಿರೂಪಣೆಯ ಕೇಂದ್ರಗಳು ಈ ಸಂಕೀರ್ಣ ವಿಚಾರದ ಬಗ್ಗೆ ಗಂಭೀರವಾದ ಚಿಂತನೆ ನಡೆಸಿ, ಸೂಕ್ತ ಪರಿಹಾರೋಪಾಯವನ್ನು ಕಂಡುಕೊಳ್ಳಬೇಕು. ಇದು ಸಾಧ್ಯವಾದಾಗಲೇ ಹಣವನ್ನು ನಿಯಂತ್ರಣಕ್ಕೆ ತರಬಹುದು ಮತ್ತು ನಾವು ಅದನ್ನು ಬೇಕಾದಂತೆ ಆಡಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....