Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...