Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...