Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....