Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...