Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...