Homeಮುಖಪುಟಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

ಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

- Advertisement -
- Advertisement -

| ಡಾ. ಬಿ.ಆರ್.ಮಂಜುನಾಥ್ |
(ಲೇಖಕರು, ಸುದೀರ್ಘ ಕಾಲ ಎಡಪಕ್ಷದ ಮುಂಚೂಣಿ ಸ್ಥಾನದಲ್ಲಿದ್ದವರು)

ಮತ್ತೊಮ್ಮೆ ಕಮ್ಯುನಿಸ್ಟ್ ಪಕ್ಷಗಳ ವಿಲೀನದ ಪ್ರಶ್ನೆ ಗಾಳಿಯಲ್ಲಿದೆ. ಸಿಪಿಐ ಪಕ್ಷವು ಇದನ್ನು ಮೂವತ್ತು ವರ್ಷಗಳಿಂದಲೂ ಪ್ರಸ್ತಾಪಿಸುತ್ತಲೇ ಬಂದಿದೆ. ಆದಕ್ಕೆ ಇನ್ನೊಂದು ದೊಡ್ಡ ಪಕ್ಷವಾದ ಸಿಪಿಐ ಎಮ್ ಸ್ಪಂದಿಸಿರಲಿಲ್ಲ. 2015ರಲ್ಲಿ ಆ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಂ ಯಚೂರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ವಿಲೀನದ ಪ್ರಕ್ರಿಯೆಯೇನೂ ಚುರುಕಾಗಿರಲಿಲ್ಲ. ಈ ಬಾರಿ ಚುನಾವಣೆ ಮುಗಿದ ಮೇಲೆ ಸಿಪಿಐ ಮಗದೊಮ್ಮೆ ಪ್ರಸ್ತಾಪಿಸಿದೆ. ಹಾಗಾಗಿ ವಿಷಯ ಮುನ್ನೆಲೆಗೆ ಬಂದಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಡ ಪಕ್ಷಗಳು ವಿಪರೀತ ಪೆಟ್ಟು ತಿಂದಿವೆ. ಅವುಗಳ ಮೂಲ ನೆಲೆಗಳೇ ಧ್ವಂಸವಾಗಿವೆ. ಈ ಬೆಳವಣಿಗೆಯು ಕಾರ್ಯಕರ್ತರಲ್ಲೂ, ಪಕ್ಷದ ಬೆಂಬಲಿಗರಲ್ಲೂ ತೀವ್ರವಾದ ನಿರಾಶೆ, ನೋವುಗಳನ್ನು ಉಂಟು ಮಾಡುವಂಥದ್ದು. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಒಂದು ಹೊಸ ಉತ್ಸಾಹ, ಆಶಾವಾದವನ್ನು ಸೃಷ್ಟಿಸಲು ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳಲ್ಲಿ ವಿವಿಧ ಪಕ್ಷಗಳನ್ನು ಒಂದುಗೂಡಿಸುವುದೂ ಒಂದು ಎಂಬ ಭಾವನೆ ಮೂಡಿದೆ.

ಸಿಪಿಐ ಪಕ್ಷವು ಅನೇಕ ಬಾರಿ ವಿಲೀನಕ್ಕೆ ಅಡ್ಡಿಯಾಗುವಂಥ ಯಾವ ಸೈದ್ಧಾಂತಿಕ ಪ್ರಶ್ನೆಗಳೂ ಉಳಿದಿಲ್ಲ ಎಂದು ಸಾರುತ್ತಾ ಬಂದಿದೆ. ಈ ಮಾತು ಈಗ ಅನೇಕರಿಗೆ ಒಪ್ಪಿಗೆಯಾಗಬಹುದು. ಸೋವಿಯತ್ ಕಮ್ಯುನಿಸ್ಟ್ ಪಕ್ಷದ ಇಪ್ಪತ್ತನೆಯ ಮಹಾಧಿವೇಶನದ ನಂತರ ಉದ್ಭವಿಸಿದ್ದ ಪರಿಷ್ಕರಣವಾದಿ ತೀರ್ಮಾನಗಳ ಕುರಿತಾದ ಚರ್ಚೆ ಈಗ ಹಿಂದಕ್ಕೆ ಸರಿದಿದೆ. ಇನ್ನೊಂದು ಕಡೆ ಚೀನಾ ಕಮ್ಯುನಿಸ್ಟ್ ಪಕ್ಷ ಸಂಪೂರ್ಣವಾಗಿ ಮಾರುಕಟ್ಟೆ ಆರ್ಥಿಕತೆಗೆ ಒಲಿದು, ತನ್ನ ಸದಸ್ಯತ್ವವನ್ನು ಬಂಡವಾಳಗಾರರಿಗೂ ತೆರೆದನಂತರ ಆ ಪಕ್ಷದ ನಿಲುವಿನೊಂದಿಗೆ ಚರ್ಚೆಗಿಳಿಯುವ ಉತ್ಸಾಹವೂ ಯಾವ ಕಮ್ಯುನಿಸ್ಟರಲ್ಲೂ ಉಳಿದಿರಲಿಕ್ಕಿಲ್ಲ!

ಇನ್ನು ದೇಶದ ಎಡ ವಲಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಗ್ರಹಿಸಬೇಕು ಎಂಬುದನ್ನು ಕುರಿತಂತೆ ವಿಭಿನ್ನ ಅಭಿಪ್ರಾಯಗಳಿವೆ. ಕೇರಳದಲ್ಲಿ ಕಾಂಗ್ರೆಸ್‍ಅನ್ನೇ ಮುಖ್ಯ ಪ್ರತಿಸ್ಪರ್ಧಿಯಾಗಿ ಎದುರಿಸಬೇಕಾದ ಅನಿವಾರ್ಯತೆ ಇರುವುದು ಆ ಪಕ್ಷದೊಂದಿಗಿನ ಮೈತ್ರಿಗೆ ತೊಡಕಾಗುವ ಅಂಶ. ಕಾಂಗ್ರೆಸ್ ಜೊತೆ ಸೇರಿದರೆ ಮುಂದೆ ಅಲ್ಲಿ ಬಿಜೆಪಿ ಬಲವಾಗಬಹುದು ಎಂಬ ಆತಂಕ ಕಾಡುತ್ತದೆ. ಬಂಗಾಳದಲ್ಲಿ ಪರಿಸ್ಥಿತಿ ಹಾಗಿಲ್ಲ. ಅಲ್ಲಿ ಎಡ ಪಕ್ಷಗಳು ಬದುಕುಳಿಯುವುದೇ ಇಂದು ದೊಡ್ಡ ಸವಾಲು.

ಅರವತ್ತು- ಎಪ್ಪತ್ತರ ದಶಕದಲ್ಲಿ ಎಡಪಕ್ಷಗಳ ಮಧ್ಯದ ಚರ್ಚೆ, ಪಾಲೆಮಿಕ್ಸ್ ಅನವಶ್ಯಕವಾಗಿ ತಾರಕಕ್ಕೆ ಹೋಗುತ್ತಿತ್ತು. ಆಗ “ನೀನು ಟ್ರಾಟ್ಸ್ಕಿ, ನೀನು ಬುಖಾರಿನ್” ಎಂದು, “ನೀನು ಲಿನ್ ಪಿಯಾವೊನಂತಹ ಎಡ ದುಸ್ಸಾಹಸವಾದಿ”, ನೀನು ಲಿಯು ಶಾವೊ ಕಿ ಯಂತಹ ಬಲ ಪರಿಷ್ಕರಣವಾದಿ” ಎಂದು ಬಯ್ಯುವುದು, ಅದನ್ನು ನಂಬುವುದು ಸಾಮಾನ್ಯವಾಗಿತ್ತು! ಈಗ ಆ ಚಾಳಿ ಕೆಲವೊಂದು ತೀವ್ರಪಂಥೀಯವಾದಿಗಳಾದ ಚಿಕ್ಕ ಪುಟ್ಟ ಪಕ್ಷಗಳಲ್ಲಿ ಉಳಿದಿದೆ. ಈ ಪಕ್ಷಗಳು ನಮ್ಮ ಪಕ್ಷ ಮಾತ್ರ ಭಾರತದ ಕಾರ್ಮಿಕ ವರ್ಗದ ಪಕ್ಷ, ಉಳಿದವು ಪೆಟಿ ಬೂಶ್ರ್ವಾ ಪಕ್ಷಗಳು ಎಂಬ ನಿಲುವನ್ನು ತಾಳುತ್ತವೆ. ಅದು ಅವುಗಳ ಅಸ್ತಿತ್ವದ ಕಾರಣ ಮಾತ್ರವಲ್ಲ, ಅವರವರ ಪ್ರಾಮಾಣಿಕ ನಂಬುಗೆ ಸಹ. ಇನ್ನು ಸಶಸ್ತ್ರ ಹೋರಾಟದಲ್ಲಿರುವ ಸಂಘಟನೆಗಳು ಸಹ ಹೀಗೇ ಭಾವಿಸುತ್ತವೆ. ಅಲ್ಲದೆ ಅವರ ಸಂಘಟನಾತ್ಮಕ ವಿಧಾನಗಳೂ ಯಾರೊಡನೆಯೂ ಹೊಂದಿಕೆಯಾಗದಿರುವುದರಿಂದ ಅವರು ಚರ್ಚೆಯ ಪರಿಧಿಯಿಂದ ಹೊರಗೇ ಉಳಿಯುತ್ತಾರೆ.

ಹೀಗಾಗಿ ವಿವಿಧ ಕಮ್ಯುನಿಸ್ಟ್ ಪಕ್ಷಗಳ ವಿಲೀನ ಎಂಬುದು ಅಂತಿಮ ಲೆಕ್ಕಾಚಾರದಲ್ಲಿ ಸಿಪಿಐ ಮತ್ತು ಸಿಪಿಎಮ್ ಪಕ್ಷಗಳ ವಿಲೀನದ ಪ್ರಶ್ನೆಯಾಗಿ ಉಳಿಯುತ್ತದೆ. ಆದರೆ ಅದೂ ಸುಲಭವಲ್ಲ. ದಶಕಗಳಿಂದ ಬೆಳೆದು ಬಂದಿರುವ ನಿರಾಶೆ, ಅಪನಂಬುಗೆ, ತಳಮಟ್ಟದಲ್ಲಿ -ವಿಶೇಷವಾಗಿ ಯೂನಿಯನ್‍ಗಳಲ್ಲಿ – ತಲೆದೋರುವ ನಾಯಕತ್ವದ ಪ್ರಶ್ನೆ ಇವೆಲ್ಲ ಮೇಲೆ ಒಗ್ಗಟ್ಟು ಬಂದೊಡನೆ ಸ್ವಯಂಚಾಲಿತವಾಗಿ ಪರಿಹಾರ ಕಂಡುಕೊಳ್ಳುವ ಸಮಸ್ಯೆಗಳಲ್ಲ. ಇದಲ್ಲದೆ ದೃಷ್ಟಿಕೋನಗಳಲ್ಲೂ, ಕಾರ್ಯಶೈಲಿಯಲ್ಲೂ ಭಿನ್ನತೆಗಳಿರುತ್ತವೆ. ಒಬ್ಬರಿಗೆ ಇನ್ನೊಬ್ಬರ ನಿಲುವು ಗಡುಸು ಎನಿಸಿದರೆ, ಇನ್ನೊಬ್ಬರಿಗೆ ಮೊದಲಿನವರು ಸಡಿಲ ಎನಿಸಬಹುದು! “ಆಶೆಗಳೇ ಸವಾರಿಗೆ ಅಶ್ವಗಳಾಗುವುದಿಲ್ಲ”!!

ಹಾಗಿದ್ದರೆ ಕಾರ್ಯಸಾಧುವಾದ ಹೆಜ್ಜೆ ಯಾವುದು? ಎರಡೂ ಪಕ್ಷಗಳೂ ಎಲ್ಲ ಕಾರ್ಯಕ್ರಮ, ತೀರ್ಮಾನ ನೀತಿ ನಿರೂಪಣೆಗಳನ್ನು ಒಟ್ಟಾಗಿ ತೆಗೆದುಕೊಳ್ಳುವ ನಿರ್ಧಾರ ಮಾಡಬಹುದು. ಅದು ಗಟ್ಟಿಯಾಗುತ್ತಿದ್ದಂತೆ ಮುಂದೆ ವಿಲೀನಕ್ಕೆ ಭೂಮಿಕೆ ಸಿದ್ಧವಾಗುತ್ತದೆ. ಅದು ಅನೇಕ ವರ್ಷಗಳ ಪ್ರಕ್ರಿಯೆಯಾಗಬಹುದು. ಆದರೆ ಸಂಬಂಧಪಟ್ಟ ಪಕ್ಷಗಳ ದೃಷ್ಟಿಯಿಂದ ಅದು ಅತ್ಯಂತ ಮಹತ್ವದ ಹೆಜ್ಜೆ ಆಗುವುದರಲ್ಲಿ ಸಂದೇಹವಿಲ್ಲ.
ಅದೇನೇ ಇರಲಿ ಪ್ರತಿಗಾಮಿ ಪಕ್ಷಗಳು ವಿಜೃಂಭಿಸುತ್ತಿರುವ ಇಂದಿನ ಸಂದರ್ಭದಲ್ಲಿ ಎಡ ಪಕ್ಷಗಳು ಪರಸ್ಪರ ಹತ್ತಿರವಾಗಬೇಕಾದದ್ದು ಎಲ್ಲರಿಗೂ ಜೀವನ್ಮರಣದ ಪ್ರಶ್ನೆಯೇ. ಶೋಷಿತ ಸಮುದಾಯಗಳು ಇದಕ್ಕಾಗಿ ಹಂಬಲಿಸುತ್ತಾರೆ ಎಂಬುದನ್ನು ಮರೆಯಬಾರದು.

ಇದಕ್ಕಾಗಿ ಅನೇಕ ಸಣ್ಣ ಪುಟ್ಟ ಹೆಜ್ಜೆಗಳನ್ನು ಎಲ್ಲರೂ ತೆಗೆದುಕೊಳ್ಳಬೇಕು. ಏನೇ ಭಿನ್ನಾಭಿಪ್ರಾಯಗಳಿರಲಿ ಅದನ್ನು ಸೂಕ್ತವಾದ ವೇದಿಕೆಗಳಲ್ಲಿ ಬಗೆಹರಿಸಿಕೊಳ್ಳುವುದು, ಟೀಕೆ ಅನಗತ್ಯವಾಗಿ ಕಟುವಾಗದಂತೆ ಎಚ್ಚರವಹಿಸುವುದು ಅಗತ್ಯ. ಒಬ್ಬರು ಇನ್ನೊಬ್ಬರ ತ್ಯಾಗ- ಬಲಿದಾನಗಳನ್ನು ಗೌರವಿಸುವುದು, ಪ್ರಯತ್ನಗಳನ್ನು ಮೆಚ್ವಿಕೊಳ್ಳುವುದು, ತಾತ್ವಿಕ ಸಹನೆಯನ್ನು ಹೊಂದಿರುವುದೂ ಸಹ ಅತ್ಯಗತ್ಯ. ಸ್ನೇಹ ವಿಶ್ವಾಸಗಳನ್ನು ಬೆಳೆಸಿಕೊಳ್ಳುತ್ತಾ, ಪರಸ್ಪರ ವಿನಯದಿಂದ ಕಲಿಯುತ್ತಾ ಮುಂದೆ ಸಾಗಬೇಕು. ಇದರ ಅರ್ಥ ಸೈದ್ಧಾಂತಿಕವಾಗಿ ರಾಜಿಯಾಗಬೇಕು ಎಂದಲ್ಲ. ಯಾವ ಭಿನ್ನಾಭಿಪ್ರಾಯವನ್ನು ಎಷ್ಡು ದೂರ ಒಯ್ಯಬೇಕು, ಎಲ್ಲಿಗೆ ನಿಲ್ಲಿಸಬೇಕು ಎಂಬ ಯುಕ್ತಾಯುಕ್ತ ಪರಿಜ್ಞಾನ ಅಷ್ಟೇ. ಸ್ಟಾಲಿನ್ ಅವರು ಲೆನಿನ್ ವ್ಯಕ್ತಿತ್ವವನ್ನು ಮೆಚ್ಚಿಕೊಳ್ಳುತ್ತಾ ಹೇಳಿದ ಮಾತು ಸ್ಮರಣಾರ್ಹ: “ತಾತ್ವಿಕತೆಯಲ್ಲಿ ನಿಷ್ಠೆ, ಅನುಷ್ಠಾನದಲ್ಲಿ ಬಾಗಿ ಬಳುಕುವ ಆಸ್ಥೆ”!

ಒಟ್ಟಿನಲ್ಲಿ ಕ್ರಾಂತಿಕಾರಿ ರಾಜಕೀಯದಲ್ಲಿ ಆದರ್ಶವನ್ನು ಧ್ರುವ ನಕ್ಷತ್ರದಂತೆ ಪರಿಭಾವಿಸುತ್ತಲೇ ದೈನಂದಿನ ಹೋರಾಟದಲ್ಲಿ ಸತತವಾಗಿ ಕಾರ್ಯಕ್ಷಮತೆಗೆ, ಸಾಧ್ಯಾಸಾಧ್ಯತೆಗೆ ಗಮನಕೊಡುತ್ತಾ ಮುನ್ನಡೆಯಬೇಕು. ಬೂಶ್ರ್ವಾ ಪಕ್ಷಗಳೊಂದಿಗೆ ಸಹ ಹೋರಾಟಗಳಲ್ಲಿ ಹೆಜ್ಜೆ ಹಾಕಬೇಕಾಗಬಹುದು. ಗಯಟೆ ಮಹಾ ಕವಿಯ ಈ ಸಾಲುಗಳು ಮಾಕ್ರ್ಸ್‍ಗೆ ತುಂಬಾ ಪ್ರಿಯವಾಗಿತ್ತು:
“ಒಣ ಸಿದ್ಧಾಂತ ಬರಡು ಗೆಳೆಯ! ಬದುಕು ಮಾತ್ರ ನಿತ್ಯ ಹರಿದ್ವರ್ಣ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...