Homeಮುಖಪುಟಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

ಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

- Advertisement -
- Advertisement -

| ಡಾ. ಬಿ.ಆರ್.ಮಂಜುನಾಥ್ |
(ಲೇಖಕರು, ಸುದೀರ್ಘ ಕಾಲ ಎಡಪಕ್ಷದ ಮುಂಚೂಣಿ ಸ್ಥಾನದಲ್ಲಿದ್ದವರು)

ಮತ್ತೊಮ್ಮೆ ಕಮ್ಯುನಿಸ್ಟ್ ಪಕ್ಷಗಳ ವಿಲೀನದ ಪ್ರಶ್ನೆ ಗಾಳಿಯಲ್ಲಿದೆ. ಸಿಪಿಐ ಪಕ್ಷವು ಇದನ್ನು ಮೂವತ್ತು ವರ್ಷಗಳಿಂದಲೂ ಪ್ರಸ್ತಾಪಿಸುತ್ತಲೇ ಬಂದಿದೆ. ಆದಕ್ಕೆ ಇನ್ನೊಂದು ದೊಡ್ಡ ಪಕ್ಷವಾದ ಸಿಪಿಐ ಎಮ್ ಸ್ಪಂದಿಸಿರಲಿಲ್ಲ. 2015ರಲ್ಲಿ ಆ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಂ ಯಚೂರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ವಿಲೀನದ ಪ್ರಕ್ರಿಯೆಯೇನೂ ಚುರುಕಾಗಿರಲಿಲ್ಲ. ಈ ಬಾರಿ ಚುನಾವಣೆ ಮುಗಿದ ಮೇಲೆ ಸಿಪಿಐ ಮಗದೊಮ್ಮೆ ಪ್ರಸ್ತಾಪಿಸಿದೆ. ಹಾಗಾಗಿ ವಿಷಯ ಮುನ್ನೆಲೆಗೆ ಬಂದಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಡ ಪಕ್ಷಗಳು ವಿಪರೀತ ಪೆಟ್ಟು ತಿಂದಿವೆ. ಅವುಗಳ ಮೂಲ ನೆಲೆಗಳೇ ಧ್ವಂಸವಾಗಿವೆ. ಈ ಬೆಳವಣಿಗೆಯು ಕಾರ್ಯಕರ್ತರಲ್ಲೂ, ಪಕ್ಷದ ಬೆಂಬಲಿಗರಲ್ಲೂ ತೀವ್ರವಾದ ನಿರಾಶೆ, ನೋವುಗಳನ್ನು ಉಂಟು ಮಾಡುವಂಥದ್ದು. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಒಂದು ಹೊಸ ಉತ್ಸಾಹ, ಆಶಾವಾದವನ್ನು ಸೃಷ್ಟಿಸಲು ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳಲ್ಲಿ ವಿವಿಧ ಪಕ್ಷಗಳನ್ನು ಒಂದುಗೂಡಿಸುವುದೂ ಒಂದು ಎಂಬ ಭಾವನೆ ಮೂಡಿದೆ.

ಸಿಪಿಐ ಪಕ್ಷವು ಅನೇಕ ಬಾರಿ ವಿಲೀನಕ್ಕೆ ಅಡ್ಡಿಯಾಗುವಂಥ ಯಾವ ಸೈದ್ಧಾಂತಿಕ ಪ್ರಶ್ನೆಗಳೂ ಉಳಿದಿಲ್ಲ ಎಂದು ಸಾರುತ್ತಾ ಬಂದಿದೆ. ಈ ಮಾತು ಈಗ ಅನೇಕರಿಗೆ ಒಪ್ಪಿಗೆಯಾಗಬಹುದು. ಸೋವಿಯತ್ ಕಮ್ಯುನಿಸ್ಟ್ ಪಕ್ಷದ ಇಪ್ಪತ್ತನೆಯ ಮಹಾಧಿವೇಶನದ ನಂತರ ಉದ್ಭವಿಸಿದ್ದ ಪರಿಷ್ಕರಣವಾದಿ ತೀರ್ಮಾನಗಳ ಕುರಿತಾದ ಚರ್ಚೆ ಈಗ ಹಿಂದಕ್ಕೆ ಸರಿದಿದೆ. ಇನ್ನೊಂದು ಕಡೆ ಚೀನಾ ಕಮ್ಯುನಿಸ್ಟ್ ಪಕ್ಷ ಸಂಪೂರ್ಣವಾಗಿ ಮಾರುಕಟ್ಟೆ ಆರ್ಥಿಕತೆಗೆ ಒಲಿದು, ತನ್ನ ಸದಸ್ಯತ್ವವನ್ನು ಬಂಡವಾಳಗಾರರಿಗೂ ತೆರೆದನಂತರ ಆ ಪಕ್ಷದ ನಿಲುವಿನೊಂದಿಗೆ ಚರ್ಚೆಗಿಳಿಯುವ ಉತ್ಸಾಹವೂ ಯಾವ ಕಮ್ಯುನಿಸ್ಟರಲ್ಲೂ ಉಳಿದಿರಲಿಕ್ಕಿಲ್ಲ!

ಇನ್ನು ದೇಶದ ಎಡ ವಲಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಗ್ರಹಿಸಬೇಕು ಎಂಬುದನ್ನು ಕುರಿತಂತೆ ವಿಭಿನ್ನ ಅಭಿಪ್ರಾಯಗಳಿವೆ. ಕೇರಳದಲ್ಲಿ ಕಾಂಗ್ರೆಸ್‍ಅನ್ನೇ ಮುಖ್ಯ ಪ್ರತಿಸ್ಪರ್ಧಿಯಾಗಿ ಎದುರಿಸಬೇಕಾದ ಅನಿವಾರ್ಯತೆ ಇರುವುದು ಆ ಪಕ್ಷದೊಂದಿಗಿನ ಮೈತ್ರಿಗೆ ತೊಡಕಾಗುವ ಅಂಶ. ಕಾಂಗ್ರೆಸ್ ಜೊತೆ ಸೇರಿದರೆ ಮುಂದೆ ಅಲ್ಲಿ ಬಿಜೆಪಿ ಬಲವಾಗಬಹುದು ಎಂಬ ಆತಂಕ ಕಾಡುತ್ತದೆ. ಬಂಗಾಳದಲ್ಲಿ ಪರಿಸ್ಥಿತಿ ಹಾಗಿಲ್ಲ. ಅಲ್ಲಿ ಎಡ ಪಕ್ಷಗಳು ಬದುಕುಳಿಯುವುದೇ ಇಂದು ದೊಡ್ಡ ಸವಾಲು.

ಅರವತ್ತು- ಎಪ್ಪತ್ತರ ದಶಕದಲ್ಲಿ ಎಡಪಕ್ಷಗಳ ಮಧ್ಯದ ಚರ್ಚೆ, ಪಾಲೆಮಿಕ್ಸ್ ಅನವಶ್ಯಕವಾಗಿ ತಾರಕಕ್ಕೆ ಹೋಗುತ್ತಿತ್ತು. ಆಗ “ನೀನು ಟ್ರಾಟ್ಸ್ಕಿ, ನೀನು ಬುಖಾರಿನ್” ಎಂದು, “ನೀನು ಲಿನ್ ಪಿಯಾವೊನಂತಹ ಎಡ ದುಸ್ಸಾಹಸವಾದಿ”, ನೀನು ಲಿಯು ಶಾವೊ ಕಿ ಯಂತಹ ಬಲ ಪರಿಷ್ಕರಣವಾದಿ” ಎಂದು ಬಯ್ಯುವುದು, ಅದನ್ನು ನಂಬುವುದು ಸಾಮಾನ್ಯವಾಗಿತ್ತು! ಈಗ ಆ ಚಾಳಿ ಕೆಲವೊಂದು ತೀವ್ರಪಂಥೀಯವಾದಿಗಳಾದ ಚಿಕ್ಕ ಪುಟ್ಟ ಪಕ್ಷಗಳಲ್ಲಿ ಉಳಿದಿದೆ. ಈ ಪಕ್ಷಗಳು ನಮ್ಮ ಪಕ್ಷ ಮಾತ್ರ ಭಾರತದ ಕಾರ್ಮಿಕ ವರ್ಗದ ಪಕ್ಷ, ಉಳಿದವು ಪೆಟಿ ಬೂಶ್ರ್ವಾ ಪಕ್ಷಗಳು ಎಂಬ ನಿಲುವನ್ನು ತಾಳುತ್ತವೆ. ಅದು ಅವುಗಳ ಅಸ್ತಿತ್ವದ ಕಾರಣ ಮಾತ್ರವಲ್ಲ, ಅವರವರ ಪ್ರಾಮಾಣಿಕ ನಂಬುಗೆ ಸಹ. ಇನ್ನು ಸಶಸ್ತ್ರ ಹೋರಾಟದಲ್ಲಿರುವ ಸಂಘಟನೆಗಳು ಸಹ ಹೀಗೇ ಭಾವಿಸುತ್ತವೆ. ಅಲ್ಲದೆ ಅವರ ಸಂಘಟನಾತ್ಮಕ ವಿಧಾನಗಳೂ ಯಾರೊಡನೆಯೂ ಹೊಂದಿಕೆಯಾಗದಿರುವುದರಿಂದ ಅವರು ಚರ್ಚೆಯ ಪರಿಧಿಯಿಂದ ಹೊರಗೇ ಉಳಿಯುತ್ತಾರೆ.

ಹೀಗಾಗಿ ವಿವಿಧ ಕಮ್ಯುನಿಸ್ಟ್ ಪಕ್ಷಗಳ ವಿಲೀನ ಎಂಬುದು ಅಂತಿಮ ಲೆಕ್ಕಾಚಾರದಲ್ಲಿ ಸಿಪಿಐ ಮತ್ತು ಸಿಪಿಎಮ್ ಪಕ್ಷಗಳ ವಿಲೀನದ ಪ್ರಶ್ನೆಯಾಗಿ ಉಳಿಯುತ್ತದೆ. ಆದರೆ ಅದೂ ಸುಲಭವಲ್ಲ. ದಶಕಗಳಿಂದ ಬೆಳೆದು ಬಂದಿರುವ ನಿರಾಶೆ, ಅಪನಂಬುಗೆ, ತಳಮಟ್ಟದಲ್ಲಿ -ವಿಶೇಷವಾಗಿ ಯೂನಿಯನ್‍ಗಳಲ್ಲಿ – ತಲೆದೋರುವ ನಾಯಕತ್ವದ ಪ್ರಶ್ನೆ ಇವೆಲ್ಲ ಮೇಲೆ ಒಗ್ಗಟ್ಟು ಬಂದೊಡನೆ ಸ್ವಯಂಚಾಲಿತವಾಗಿ ಪರಿಹಾರ ಕಂಡುಕೊಳ್ಳುವ ಸಮಸ್ಯೆಗಳಲ್ಲ. ಇದಲ್ಲದೆ ದೃಷ್ಟಿಕೋನಗಳಲ್ಲೂ, ಕಾರ್ಯಶೈಲಿಯಲ್ಲೂ ಭಿನ್ನತೆಗಳಿರುತ್ತವೆ. ಒಬ್ಬರಿಗೆ ಇನ್ನೊಬ್ಬರ ನಿಲುವು ಗಡುಸು ಎನಿಸಿದರೆ, ಇನ್ನೊಬ್ಬರಿಗೆ ಮೊದಲಿನವರು ಸಡಿಲ ಎನಿಸಬಹುದು! “ಆಶೆಗಳೇ ಸವಾರಿಗೆ ಅಶ್ವಗಳಾಗುವುದಿಲ್ಲ”!!

ಹಾಗಿದ್ದರೆ ಕಾರ್ಯಸಾಧುವಾದ ಹೆಜ್ಜೆ ಯಾವುದು? ಎರಡೂ ಪಕ್ಷಗಳೂ ಎಲ್ಲ ಕಾರ್ಯಕ್ರಮ, ತೀರ್ಮಾನ ನೀತಿ ನಿರೂಪಣೆಗಳನ್ನು ಒಟ್ಟಾಗಿ ತೆಗೆದುಕೊಳ್ಳುವ ನಿರ್ಧಾರ ಮಾಡಬಹುದು. ಅದು ಗಟ್ಟಿಯಾಗುತ್ತಿದ್ದಂತೆ ಮುಂದೆ ವಿಲೀನಕ್ಕೆ ಭೂಮಿಕೆ ಸಿದ್ಧವಾಗುತ್ತದೆ. ಅದು ಅನೇಕ ವರ್ಷಗಳ ಪ್ರಕ್ರಿಯೆಯಾಗಬಹುದು. ಆದರೆ ಸಂಬಂಧಪಟ್ಟ ಪಕ್ಷಗಳ ದೃಷ್ಟಿಯಿಂದ ಅದು ಅತ್ಯಂತ ಮಹತ್ವದ ಹೆಜ್ಜೆ ಆಗುವುದರಲ್ಲಿ ಸಂದೇಹವಿಲ್ಲ.
ಅದೇನೇ ಇರಲಿ ಪ್ರತಿಗಾಮಿ ಪಕ್ಷಗಳು ವಿಜೃಂಭಿಸುತ್ತಿರುವ ಇಂದಿನ ಸಂದರ್ಭದಲ್ಲಿ ಎಡ ಪಕ್ಷಗಳು ಪರಸ್ಪರ ಹತ್ತಿರವಾಗಬೇಕಾದದ್ದು ಎಲ್ಲರಿಗೂ ಜೀವನ್ಮರಣದ ಪ್ರಶ್ನೆಯೇ. ಶೋಷಿತ ಸಮುದಾಯಗಳು ಇದಕ್ಕಾಗಿ ಹಂಬಲಿಸುತ್ತಾರೆ ಎಂಬುದನ್ನು ಮರೆಯಬಾರದು.

ಇದಕ್ಕಾಗಿ ಅನೇಕ ಸಣ್ಣ ಪುಟ್ಟ ಹೆಜ್ಜೆಗಳನ್ನು ಎಲ್ಲರೂ ತೆಗೆದುಕೊಳ್ಳಬೇಕು. ಏನೇ ಭಿನ್ನಾಭಿಪ್ರಾಯಗಳಿರಲಿ ಅದನ್ನು ಸೂಕ್ತವಾದ ವೇದಿಕೆಗಳಲ್ಲಿ ಬಗೆಹರಿಸಿಕೊಳ್ಳುವುದು, ಟೀಕೆ ಅನಗತ್ಯವಾಗಿ ಕಟುವಾಗದಂತೆ ಎಚ್ಚರವಹಿಸುವುದು ಅಗತ್ಯ. ಒಬ್ಬರು ಇನ್ನೊಬ್ಬರ ತ್ಯಾಗ- ಬಲಿದಾನಗಳನ್ನು ಗೌರವಿಸುವುದು, ಪ್ರಯತ್ನಗಳನ್ನು ಮೆಚ್ವಿಕೊಳ್ಳುವುದು, ತಾತ್ವಿಕ ಸಹನೆಯನ್ನು ಹೊಂದಿರುವುದೂ ಸಹ ಅತ್ಯಗತ್ಯ. ಸ್ನೇಹ ವಿಶ್ವಾಸಗಳನ್ನು ಬೆಳೆಸಿಕೊಳ್ಳುತ್ತಾ, ಪರಸ್ಪರ ವಿನಯದಿಂದ ಕಲಿಯುತ್ತಾ ಮುಂದೆ ಸಾಗಬೇಕು. ಇದರ ಅರ್ಥ ಸೈದ್ಧಾಂತಿಕವಾಗಿ ರಾಜಿಯಾಗಬೇಕು ಎಂದಲ್ಲ. ಯಾವ ಭಿನ್ನಾಭಿಪ್ರಾಯವನ್ನು ಎಷ್ಡು ದೂರ ಒಯ್ಯಬೇಕು, ಎಲ್ಲಿಗೆ ನಿಲ್ಲಿಸಬೇಕು ಎಂಬ ಯುಕ್ತಾಯುಕ್ತ ಪರಿಜ್ಞಾನ ಅಷ್ಟೇ. ಸ್ಟಾಲಿನ್ ಅವರು ಲೆನಿನ್ ವ್ಯಕ್ತಿತ್ವವನ್ನು ಮೆಚ್ಚಿಕೊಳ್ಳುತ್ತಾ ಹೇಳಿದ ಮಾತು ಸ್ಮರಣಾರ್ಹ: “ತಾತ್ವಿಕತೆಯಲ್ಲಿ ನಿಷ್ಠೆ, ಅನುಷ್ಠಾನದಲ್ಲಿ ಬಾಗಿ ಬಳುಕುವ ಆಸ್ಥೆ”!

ಒಟ್ಟಿನಲ್ಲಿ ಕ್ರಾಂತಿಕಾರಿ ರಾಜಕೀಯದಲ್ಲಿ ಆದರ್ಶವನ್ನು ಧ್ರುವ ನಕ್ಷತ್ರದಂತೆ ಪರಿಭಾವಿಸುತ್ತಲೇ ದೈನಂದಿನ ಹೋರಾಟದಲ್ಲಿ ಸತತವಾಗಿ ಕಾರ್ಯಕ್ಷಮತೆಗೆ, ಸಾಧ್ಯಾಸಾಧ್ಯತೆಗೆ ಗಮನಕೊಡುತ್ತಾ ಮುನ್ನಡೆಯಬೇಕು. ಬೂಶ್ರ್ವಾ ಪಕ್ಷಗಳೊಂದಿಗೆ ಸಹ ಹೋರಾಟಗಳಲ್ಲಿ ಹೆಜ್ಜೆ ಹಾಕಬೇಕಾಗಬಹುದು. ಗಯಟೆ ಮಹಾ ಕವಿಯ ಈ ಸಾಲುಗಳು ಮಾಕ್ರ್ಸ್‍ಗೆ ತುಂಬಾ ಪ್ರಿಯವಾಗಿತ್ತು:
“ಒಣ ಸಿದ್ಧಾಂತ ಬರಡು ಗೆಳೆಯ! ಬದುಕು ಮಾತ್ರ ನಿತ್ಯ ಹರಿದ್ವರ್ಣ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...