Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...