Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...