Homeಮುಖಪುಟಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸುಪ್ರಿಯಾ ಸುಳೆ

ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸುಪ್ರಿಯಾ ಸುಳೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರದಲ್ಲಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳ ನಡುವೆ ಯಾವುದೇ ಆಂತರಿಕ ಗೊಂದಲಗಳಿಲ್ಲ ಎಂದು ಸೋಮವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದೆ ಸುಪ್ರಿಯಾ ಸುಳೆ ಹೇಳಿದರು.

ಠಾಕ್ರೆ ಮತ್ತು ಶರದ್ ಪವಾರ್, ಸೋನಿಯಾ ಗಾಂಧಿ, ಉದ್ಧವ್ ನಡುವಿನ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಹಲವು ವಿಷಯಗಳನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ನಡುವಿನ ಹಗ್ಗ ಜಗ್ಗಾಟ ನಡೆಯುತ್ತಿದೆ ಎಂಬ ಸುದ್ದಿಗೆ ಸುಪ್ರಿಯಾ ಸ್ಪಷ್ಟನೆ ನೀಡಿದ್ದಾರೆ.

‘ಆಂತರಿಕವಾಗಿ ಯಾವುದೇ ಗೊಂದಲವಿಲ್ಲ. 15 ದಿನಗಳ ಹಿಂದೆ ದೆಹಲಿಯಲ್ಲಿ ಸೋನಿಯಾ ಗಾಂಧಿ, ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ನಡುವೆ ಸಭೆ ನಡೆದಿತ್ತು. ಆ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಹಲವು ವಿಷಯಗಳಿಗೆ ಸ್ಪಷ್ಟನೆ ಸಿಕ್ಕಿದೆ. ಮುಂದಿನ 8ರಂದು ಅಧಿಕೃತವಾಗಿ ಮಾಹಿತಿ ಪ್ರಕಟಿಸಲಾಗುವುದು. ನಾವು ಮೈತ್ರಿ ಮಾಡಿಕೊಂಡಿರುವುದರಿಂದ ಸೀಟು ಹಂಚಿಕೆ ಸೂತ್ರದಲ್ಲಿ ಏರಿಳಿತಗಳಿರುತ್ತವೆ. ಹಾಗಾಗಿ, ಇಂತ ಗೊಂದಲ ಮೂಡುತ್ತಿವೆ’ ಎಂದರು.

ಇಂಡಿಯಾ ಒಕ್ಕೂಟದಲ್ಲಿ ಪ್ರಕಾಶ್ ಅಂಬೇಡ್ಕರ್ ಅವರ ಪಾತ್ರದ ಬಗ್ಗೆ ಕೇಳಿದಾಗ, ‘ಅವರು ಖಂಡಿತವಾಗಿಯೂ ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ’ ಎಂದು ಹೇಳಿದರು.

ಇದಕ್ಕೂ ಮೊದಲು, ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ, ಮಾಜಿ ಲೋಕಸಭಾ ಸಂಸದ ಪ್ರಕಾಶ್ ಅಂಬೇಡ್ಕರ್ ಅವರು 2024 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಇಂಡಿಯಾ ಮೈತ್ರಿಕೂಟಕ್ಕೆ ಸೇರುವ ಆಸಕ್ತಿಯನ್ನು ಪುನರುಚ್ಚರಿಸಿದರು.

ವಿಬಿಎ (ವಂಚಿತ್ ಬಹುಜನ ಆಘಾಡಿ) ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಪ್ರತಿಯೊಂದು ಪಕ್ಷಕ್ಕೂ 12 ಸ್ಥಾನಗಳನ್ನು ನೀಡುವ ತಮ್ಮ ಪ್ರಸ್ತಾವಿತ ಸೂತ್ರವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಮಾತನಾಡಿ, ‘ಕಾಂಗ್ರೆಸ್ ಶೂನ್ಯದಿಂದ ಪ್ರಾರಂಭವಾಗಬೇಕು ಎಂದು ನಾನು ಹೇಳಿದ್ದೆ, ಕಾಂಗ್ರೆಸ್ ಶೂನ್ಯ ಎಂದು ಹೇಳಿಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಒಬ್ಬನೇ ಒಬ್ಬ ಸಂಸದನನ್ನು ಹೊಂದಿಲ್ಲ. ನಾವು 18 ಸಂಸದರನ್ನು ಹೊಂದಿದ್ದೇವೆ. ಆದರೆ, ಕೆಲವರು ಬಿಟ್ಟು ಹೋಗಿದ್ದಾರೆ, ನಾವೂ ಕೆಲವರನ್ನು ಬಿಟ್ಟಿದ್ದೇವೆ. ನಮ್ಮ ಮೈತ್ರಿ ಕಾಂಗ್ರೆಸ್ ಜೊತೆಗಿದೆ ಮತ್ತು ಮಹಾ ವಿಕಾಸ್ ಅಘಾಡಿ ಸುಮಾರು 40 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿ ಗೆಲ್ಲಲು ಇವಿಎಂಗಳು ಬೇಕು, ಅವರು ಏಕಾಂಗಿಯಾಗಿ ಗೆಲ್ಲಲು ಸಾಧ್ಯವಿಲ್ಲ’ ಎಂದರು.

ಆದರೆ, ಶಿವಸೇನೆಯ (ಯುಬಿಟಿ) ಬೇಡಿಕೆಗೆ ಪ್ರತ್ಯುತ್ತರ ನೀಡಿರುವ ಕಾಂಗ್ರೆಸ್ ಪಕ್ಷ, ಸೀಟು ಹಂಚಿಕೆ ಸಂಕೀರ್ಣ ವಿಷಯವಾಗಿದ್ದು, ಸುಲಭವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಇಂಡಿಯಾ ಬ್ಲಾಕ್‌ನಲ್ಲಿರುವ ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಡಿ ಬಿಜೆಪಿಯನ್ನು ಸೋಲಿಸಬೇಕಾದರೆ, ನಾವು ಆಂತರಿಕ ಕಚ್ಚಾಟವನ್ನು ನಿಲ್ಲಿಸಬೇಕು. ಪತ್ರಿಕೆಯಿಂದ, ಶಿವಸೇನೆಯು 23 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ನನಗೆ ತಿಳಿದಿದೆ’ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

ಇದನ್ನೂ ಓದಿ; ಅತ್ಯಾಚಾರ ಯತ್ನ ವಿಫಲ; 6 ವರ್ಷದ ಬಾಲಕಿಯನ್ನು ಕ್ರೂರವಾಗಿ ಹತ್ಯೆಗೈದ ಕಾವಲುಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...