Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...