Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...