Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...