Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...