Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...