Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...