Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...