Homeಕರ್ನಾಟಕಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

- Advertisement -
- Advertisement -

| ರಾಜಲಕ್ಷ್ಮಿ ಅಂಕಲಗಿ |
ವಕೀಲರು, ಕರ್ನಾಟಕ ಹೈಕೋರ್ಟ್

ಬಹುಶಃ ಈ ಲೇಖನ ಪ್ರಕಟವಾಗುವಷ್ಟರಲ್ಲಿ ಕರ್ನಾಟಕದ ರಾಜಕೀಯದ ರಮ್ಮಿ ಆಟ ಒಂದು ಹಂತಕ್ಕೆ ಬಂದಿರುತ್ತದೆ. ಅದ್ಯಾಕೋ ‘ರಾಜಕೀಯ ದೊಂಬರಾಟ’ ಎಂದು ಕರೆದು, ಪ್ರಾಣ ಒತ್ತೆಯಿಟ್ಟು ಹೊಟ್ಟೆಪಾಡಿಗಾಗಿ ದೊಂಬರಾಟ ಮಾಡುವವರನ್ನು ಅವಮಾನಿಸಲು ಮನಸ್ಸು ಬರುತ್ತಿಲ್ಲ. ಕೆಲವೊಂದು ಟಿ.ವಿ ಚಾನೆಲ್‍ಗಳು ಹಾಗೂ ಪತ್ರಿಕೆಗಳು ಇವರನ್ನು ರೆಬೆಲ್ ನಾಯಕರು ಎಂದು ಕರೆದಾಗ ಆ ರೆಬೆಲ್ ಎಂಬ ಶಬ್ದಕ್ಕೇನಾದರೂ ಮಾತು ಬರುತ್ತಿದ್ದರೆ ಮಾನಹಾನಿ ಕೇಸು ಹಾಕುತ್ತಿತ್ತು. ಈ ಕೋಟ್ಯಾಧಿಪತಿ ಎಂಎಲ್‍ಎಗಳನ್ನು ಕುರಿಗಳಂತೆ ಕೂಡಿಹಾಕಿ ಕಾಯುತ್ತಿರುವುದನ್ನು ನೋಡಿದ ಜನ ಅಸಹ್ಯಪಡುವುದರ ಜೊತೆಗೆ ನೂರಾರು ಪ್ರಶ್ನೆ ಕೇಳುತ್ತಿದ್ದಾರೆ. ಅದ್ಯಾವ ಪ್ರಲೋಭನೆ ಅಥವಾ ಭಯ ಇವರನ್ನು ಹೀಗೆ ಮಾಡಲು ಪ್ರೇರೇಪಿಸಿರಬಹುದು ಎಂಬುದು ಗೂಢವಾಗಿದೆ. ಒಟ್ಟಿನಲ್ಲಿ ಒಂದು ದೇಶ ಒಂದು ಪಕ್ಷ ಎಂಬ ಸಿದ್ಧಾಂತ ತಂದು ವ್ಯವಸ್ಥಿತವಾಗಿ ವಿರೋಧ ಪಕ್ಷಗಳನ್ನು ನಿರ್ನಾಮಗೊಳಸಿ ಪ್ರಜಾತಂತ್ರವನ್ನು ಅಣುಕು ಯಂತ್ರವನ್ನಾಗಿ ಮಾಡುವ ಹುನ್ನಾರ ನಿಚ್ಚಳವಾಗಿದೆ.

ಸ್ವಾತಂತ್ರ್ಯನಂತರ ಈ ಪಕ್ಷಾಂತರ ಮಾಡುವ ಅವಕಾಶವಾದಿ ರಾಜಕಾರಣಿಗಳು ಹಾಗೂ ನಿರಂತರ ಅಸ್ಥಿರ ಸರ್ಕಾರಗಳು ಇವನ್ನು ಒಂದು ನಿಯಂತ್ರಣದಲ್ಲಿಡುವ ಉದ್ದೇಶದಿಂದ 1985ರಲ್ಲಿ ರಾಜೀವ್‍ಗಾಂಧಿ ಸರ್ಕಾರ ಸಂವಿಧಾನಿಕ ತಿದ್ದುಪಡಿ ಮಾಡುವ ಮೂಲಕ ಹತ್ತನೇ ಶೆಡ್ಯೂಲನ್ನು ಸೇರಿಸಿ ‘ಪಕ್ಷಾಂತರ ನಿಷೇಧ ಕಾಯ್ದೆ’ಯನ್ನು ಜಾರಿಗೆ ತಂದಿತು. ಅದರ ಉದ್ದೇಶ ನಿಚ್ಚಳವಾಗಿತ್ತು.
* ಸಂಸದರ ರಾಜಕೀಯ ಪಕ್ಷಾಂತರ ತಡೆಯುವುದು ಹಾಗೂ ಎರಡು ಕಾರಣಗಳಿಗಾಗಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವುದು.
* ಅಕಸ್ಮಾತ್ ಸದಸ್ಯರು ತಮ್ಮ ಇಚ್ಛೆಯಿಂದ ತಮ್ಮ ಪಕ್ಷದ ಸದಸ್ಯತ್ವವನ್ನು ಬಿಟ್ಟುಕೊಟ್ಟರೆ
* ಸಂಸದ ತನ್ನ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಮತದಾನ ಮಾಡಿದರೆ

ಇಲ್ಲಿ ಪಕ್ಷದ ಸದಸ್ಯತ್ವವನ್ನು ತೊರೆಯುವುದನ್ನು ರಾಜೀನಾಮೆ ಯೊಂದಿಗೆ ಹೋಲಿಸಲು ಬರುವುದಿಲ್ಲ. ಅವೆರಡೂ ಬೇರೆಯದು. ಆದರೆ ಇದನ್ನು ಹೊರತುಪಡಿಸಿಯೂ ಸಂಸದರ ನಡತೆಯನ್ನು ನೋಡಿ ಸ್ಪೀಕರ್ ತನ್ನ ವಿವೇಚನೆಯನ್ನು ಬಳಸಿ ಅಂತಹ ನಡೆಯನ್ನು ಪಕ್ಷ ವಿರೋಧಿ ಎಂದು ಪರಿಗಣಿಸಿದರೆ ಅವರ ಸದಸ್ಯತ್ವವನ್ನು ರದ್ದುಗೊಳಿಸಬಹುದು. ಆದರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೇವಲ ಶಿಸ್ತಿನ ಹೆಸರಿನಲ್ಲಿ ಯಾರ ಅಭಿಪ್ರಾಯಗಳನ್ನೂ ಕಟ್ಟಿಹಾಕಲು ಆಗದು. ಆದ್ದರಿಂದಲೇ ಕಾಯ್ದೆಯಲ್ಲಿ ಭಿನ್ನಾಭಿಪ್ರಾಯಗಳನ್ನೂ ಪರಿಗಣಿಸಿ ಅದಕ್ಕೆ ದಾರಿಯನ್ನು ಒದಗಿಸಲಾಗಿದೆ. ಅಕಸ್ಮಾತ್ ಒಂದು ರಾಜಕೀಯ ಪಕ್ಷದ 2/3ರಷ್ಟು ಸದಸ್ಯರು ಒಟ್ಟಾರೆಯಾಗಿ ಪಕ್ಷತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಲು ಅವಕಾಶ ಮಾಡಿಕೊಡಲಾಗಿದೆ. ‘ಸ್ಪೀಕರ್ ತನ್ನ ವಿವೇಚನೆ ಬಳಸಿ’ ಎಂದ ಕೂಡಲೇ ಅವರ ತೀರ್ಮಾನದ ಬಗ್ಗೆ ಪರ ವಿರೋಧ ನಿಲುವುಗಳು ಬರುವುದಕ್ಕೆ ಪ್ರಾರಂಭಿಸುತ್ತವೆ. ಒಂದು ಸಾಂವಿಧಾನಿಕ ಹುದ್ದೆ ಅಲಂಕರಿಸಿದ ಮೇಲೆ ತಮ್ಮ ಮಾತೃ ಪಕ್ಷವನ್ನು ಮರೆತು ನಿಷ್ಪಕ್ಷವಾಗಿ ನಡೆದುಕೊಂಡ ಉದಾಹರಣೆಗಳು ವಿರಳವಾಗಿರುವಾಗ ಈ ಸಂಶಯಗಳು ಸಹಜ. ಹಾಗಾದರೆ ಸ್ಪೀಕರ್ ವಿವೇಚನೆ ಸರಿಯೋ ತಪ್ಪೋ ಎಂದು ತೀರ್ಮಾನಿಸುವ ಅಧಿಕಾರ ಯಾರಿಗೆ ಇದೆ ಎಂಬ ಪ್ರಶ್ನೆ ಸಹಜ. ಈ ವಿಷಯಕ್ಕೆ ಕುರಿತಂತೆ ಸುಪ್ರೀಂಕೋರ್ಟ್ ಆಗಾಗ ನೀಡಿದ ತೀರ್ಮಾನಗಳ ಮುಖಾಂತರ ಇದು ಸ್ಪೀಕರ್ ಅವರಿಗೆ ಮಾತ್ರ ಸೇರಿದ ವಿಚಾರ ಎಂದು ಸಾರಿ ಹೇಳಿದೆ. ಆದರೆ ಸ್ಪೀಕರ್ ತಮ್ಮ ಕಾರಣಗಳನ್ನು ಸರಿಯಾಗಿ ವಿವರಿಸಬೇಕು.

ಈ ಕಾಯ್ದೆ ಬಂದ ನಂತರ ಸಣ್ಣಪ್ರಮಾಣದ ಪಕ್ಷಾಂತರ ಹಾಗೂ ರಾಜಕೀಯ ಅಸ್ಥಿರತೆಗಳು ಕಡಿಮೆ ಆಗಿವೆಯಾದರೂ ಸಾಮೂಹಿಕ ಗುಳೆ ನಿಂತಿಲ್ಲ. ಈ ನಿಟ್ಟಿನಲ್ಲಿ ನೋಡಿದರೆ ಕಾಯ್ದೆಯು ಸಫಲತೆ ಕಂಡಿದೆ ಎನ್ನಬಹುದು.

ಸುಪ್ರೀಂ ಕೋರ್ಟ್ ಸದಸ್ಯರ ಸದಸ್ಯತ್ವ ಅಮಾನ್ಯಗೊಳಿಸುವ ವಿಷಯಗಳಲ್ಲಿ ಬಹುತೇಕ ನಿರ್ಲಿಪ್ತ ಧೋರಣೆ ಹೊಂದಿದೆ. ಇನ್ನು ಕೆಲವು ಸಲ ಕೆಲವೊಂದು ನಿರ್ದೇಶನಗಳನ್ನು ಮಾತ್ರ ನೀಡಿ ತೀರ್ಪು ನೀಡುವುದರಿಂದ ಹೊರಗುಳಿದಿದೆ. ಇದು ಸಂವಿಧಾನ ಬದ್ಧವಾದ ನಡೆಯೂ ಹೌದು. ಏಕೆಂದರೆ ಸಂವಿಧಾನದಲ್ಲಿ ಸ್ಪೀಕರ್ ಅವರ ಅಧಿಕಾರ ಹಾಗೂ ಕಾರ್ಯವ್ಯಾಪ್ತಿಯನ್ನು ನಿರ್ದಿಷ್ಟವಾಗಿ ವಿವರಿಸಿದಾಗ ಆ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂಬ ಕೋರ್ಟಿನ ನಿಲುವು ಸರಿ. ಆದರೆ ಸುಪ್ರೀಕೋರ್ಟ್‍ನ ಮುಂದೆ ಆಗಾಗ್ಗೆ ಅನೇಕ ದ್ವಂದ್ವಗಳು ಎದುರಾಗುತ್ತಿರುತ್ತವೆ.

ತಮಿಳುನಾಡಿನ ಎಐಡಿಎಂಕೆಯ ಇ.ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲಿಸಲು ನಿರಾಕರಿಸಿದ 18 ಸದಸ್ಯರನ್ನು ರಾಜ್ಯಪಾಲರು ಅಮಾನ್ಯ ಮಾಡಿದಾಗ ಆ ವಿಷಯ ಹೈಕೋರ್ಟಿನ ಮುಂದೆ ಬಂತು. ಆಗ ಕೋರ್ಟು, ಒಂದು ಪಕ್ಷದ ನಾಯಕನೆಂದರೆ ಅವನೊಬ್ಬ ವ್ಯಕ್ತಿ ಮಾತ್ರವೇ ಅಥವಾ ಅವನೇ ಪಕ್ಷವೇ? ಎಂಬ ಪ್ರಶ್ನೆ ಎತ್ತಿತ್ತು. ಇನ್ನು ಕೇವಲ ತಮ್ಮ ಪಕ್ಷದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಮಾತ್ರಕ್ಕೆ ಅವನನ್ನು ಶಿಸ್ತಿನ ಹೆಸರಿನಲ್ಲಿ ಅಮಾನ್ಯ ಮಾಡುವುದು ಎಷ್ಟು ಸರಿ? ಈ ಪ್ರಶ್ನೆಗಳು ನೈಜವಾದರೂ ನಾವು ದಿನನಿತ್ಯ ನೋಡುವ ಈ ಪಕ್ಷಾಂತರಿಗಳಿಗೆ ಇವು ಅನ್ವಯಿಸುತ್ತವಾ ಎಂಬುದು ಬಹುದೊಡ್ಡ ಪ್ರಶ್ನೆ.

ಬಹುಶಃ ಸೈದ್ಧಾಂತಿಕ ಕಾರಣಗಳಿಗಾಗಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಹೊರನಡೆದ, ಇಲ್ಲವೇ ರಾಜೀನಾಮೆ ನೀಡಿದ ರಾಜಕಾರಣಿಗಳನ್ನು ಈಗ ಸಿನಿಮಾಗಳಲ್ಲಿ ಮಾತ್ರ ನೋಡಬಹುದು.

ನಮಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲ ಬಿಡುತ್ತಿಲ್ಲ ಎಂದು ಎಂಎಲ್‍ಎಗಳು ನೆಪ ಹೇಳುವಾಗ ‘ಯಾರ ಅಭಿವೃದ್ಧಿ’ ಎಂದು ಜನ ಮಾತಾಡುವುದು ಸರಿಯಾಗೇ ಇದೆ. ಮುಲಾಯಂ ಸಿಂಗ್ ಪಕ್ಷದ ಸದಸ್ಯನೊಂದಿಗೆ ಸೇರಿ 2007ರಲ್ಲಿ ಮಾಯಾವತಿ ಸರ್ಕಾರದ ವಿರುದ್ಧ ಕೆಲ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಬಿಎಸ್‍ಪಿ ಸರ್ಕಾರವನ್ನು ವಜಾಗೊಳಿಸುವಂತೆ ಕೇಳಿದಾಗ ಅಂಥ ಸದಸ್ಯರನ್ನು ಪಕ್ಷದಿಂದ ಹೊರಹಾಕಲಾಯಿತು. ಆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ಗೆ ಸದಸ್ಯರು ಹೋದಾಗ ‘ಅವರ ನಡೆ ಐಚ್ಛಿಕವಾಗಿ ಪಕ್ಷದ ಸದಸ್ಯತ್ವವನ್ನು ತೊರೆದಿದ್ದಕ್ಕೆ ಸಮ’ ಎಂದು ಹೇಳಿ ಕೋರ್ಟು ರಾಜ್ಯಪಾಲರ ತೀರ್ಪನ್ನು ಎತ್ತಿ ಹಿಡಿದಿತ್ತು. ಆದರೆ 2011ರಲ್ಲಿ ಬಿ.ಎಸ್.ಯಡಿಯೂರಪ್ಪ ಕೇಸಿನಲ್ಲಿ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕರ ಸದಸ್ಯತ್ವ ಅಮಾನ್ಯ ಮಾಡಿದ ರಾಜ್ಯಪಾಲರ ತೀರ್ಪನ್ನು ತಳ್ಳಿಹಾಕಿತ್ತು. ಹಾಗೆ ಮಾಡುವಾಗ ಪಕ್ಷದಲ್ಲಿನ ಸ್ವಜನಪಕ್ಷಪಾತ, ದುರಾಡಳಿತ ಯಾವುದನ್ನು ಅವರು ನಿರಾಕರಿಸದೆ ಇದ್ದುದರಿಂದ ಪ್ರತಿಕೂಲ ಅನುಮಾನ (adverse inference) ವ್ಯಕ್ತಪಡಿಸಿ ತೀರ್ಮಾನ ಕೈಗೊಂಡಿತ್ತು. ಇನ್ನು ಮುಖ್ಯವಾಗಿ 2/3 ಸದಸ್ಯರು ಒಂದು ಪಕ್ಷ ತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಿದಾಗ ಅದು ಪಕ್ಷದ ತೀರ್ಮಾನವಾಗಿರದೆ ಕೇವಲ ಹೊರನಡೆದ ಸದಸ್ಯರ ತೀರ್ಮಾನ ಮಾತ್ರ ಆದಾಗ ಅದನ್ನು ಪಕ್ಷದ ವಿಲೀನ ಎನ್ನಲು ಬರುವುದಿಲ್ಲ. ಅದು ಕೇವಲ ಆ ಸದಸ್ಯರ ವಿಲೀನ ಮಾತ್ರ. ಹಾಗಿದ್ದಾಗ ಇಂತಹ ಸನ್ನಿವೇಶವನ್ನು ಹೇಗೆ ಅರ್ಥೈಸುತ್ತಾರೆ ಎಂಬುದು ಕೂಡ ಒಂದು ದ್ವಂದ್ವವೇ.

ಒಂದು ಸ್ಥಿರತೆ ಹಾಗೂ ಶಿಸ್ತು ತರಲು ಜಾರಿಗೆ ಬಂದ ಈ ಕಾಯ್ದೆ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದು ಜನರ ಎದುರಿಗೆ ಇದೆ. ಒಟ್ಟಿನಲ್ಲಿ ಈ ರಾಜಕೀಯ ರಮ್ಮಿ ಆಟದಲ್ಲಿ ಆಗಬಹುದಾದ ಸಂಯೋಜನೆಗಳಿಗೆ ಅಂತ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...