Homeಕರ್ನಾಟಕಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

- Advertisement -
- Advertisement -

| ರಾಜಲಕ್ಷ್ಮಿ ಅಂಕಲಗಿ |
ವಕೀಲರು, ಕರ್ನಾಟಕ ಹೈಕೋರ್ಟ್

ಬಹುಶಃ ಈ ಲೇಖನ ಪ್ರಕಟವಾಗುವಷ್ಟರಲ್ಲಿ ಕರ್ನಾಟಕದ ರಾಜಕೀಯದ ರಮ್ಮಿ ಆಟ ಒಂದು ಹಂತಕ್ಕೆ ಬಂದಿರುತ್ತದೆ. ಅದ್ಯಾಕೋ ‘ರಾಜಕೀಯ ದೊಂಬರಾಟ’ ಎಂದು ಕರೆದು, ಪ್ರಾಣ ಒತ್ತೆಯಿಟ್ಟು ಹೊಟ್ಟೆಪಾಡಿಗಾಗಿ ದೊಂಬರಾಟ ಮಾಡುವವರನ್ನು ಅವಮಾನಿಸಲು ಮನಸ್ಸು ಬರುತ್ತಿಲ್ಲ. ಕೆಲವೊಂದು ಟಿ.ವಿ ಚಾನೆಲ್‍ಗಳು ಹಾಗೂ ಪತ್ರಿಕೆಗಳು ಇವರನ್ನು ರೆಬೆಲ್ ನಾಯಕರು ಎಂದು ಕರೆದಾಗ ಆ ರೆಬೆಲ್ ಎಂಬ ಶಬ್ದಕ್ಕೇನಾದರೂ ಮಾತು ಬರುತ್ತಿದ್ದರೆ ಮಾನಹಾನಿ ಕೇಸು ಹಾಕುತ್ತಿತ್ತು. ಈ ಕೋಟ್ಯಾಧಿಪತಿ ಎಂಎಲ್‍ಎಗಳನ್ನು ಕುರಿಗಳಂತೆ ಕೂಡಿಹಾಕಿ ಕಾಯುತ್ತಿರುವುದನ್ನು ನೋಡಿದ ಜನ ಅಸಹ್ಯಪಡುವುದರ ಜೊತೆಗೆ ನೂರಾರು ಪ್ರಶ್ನೆ ಕೇಳುತ್ತಿದ್ದಾರೆ. ಅದ್ಯಾವ ಪ್ರಲೋಭನೆ ಅಥವಾ ಭಯ ಇವರನ್ನು ಹೀಗೆ ಮಾಡಲು ಪ್ರೇರೇಪಿಸಿರಬಹುದು ಎಂಬುದು ಗೂಢವಾಗಿದೆ. ಒಟ್ಟಿನಲ್ಲಿ ಒಂದು ದೇಶ ಒಂದು ಪಕ್ಷ ಎಂಬ ಸಿದ್ಧಾಂತ ತಂದು ವ್ಯವಸ್ಥಿತವಾಗಿ ವಿರೋಧ ಪಕ್ಷಗಳನ್ನು ನಿರ್ನಾಮಗೊಳಸಿ ಪ್ರಜಾತಂತ್ರವನ್ನು ಅಣುಕು ಯಂತ್ರವನ್ನಾಗಿ ಮಾಡುವ ಹುನ್ನಾರ ನಿಚ್ಚಳವಾಗಿದೆ.

ಸ್ವಾತಂತ್ರ್ಯನಂತರ ಈ ಪಕ್ಷಾಂತರ ಮಾಡುವ ಅವಕಾಶವಾದಿ ರಾಜಕಾರಣಿಗಳು ಹಾಗೂ ನಿರಂತರ ಅಸ್ಥಿರ ಸರ್ಕಾರಗಳು ಇವನ್ನು ಒಂದು ನಿಯಂತ್ರಣದಲ್ಲಿಡುವ ಉದ್ದೇಶದಿಂದ 1985ರಲ್ಲಿ ರಾಜೀವ್‍ಗಾಂಧಿ ಸರ್ಕಾರ ಸಂವಿಧಾನಿಕ ತಿದ್ದುಪಡಿ ಮಾಡುವ ಮೂಲಕ ಹತ್ತನೇ ಶೆಡ್ಯೂಲನ್ನು ಸೇರಿಸಿ ‘ಪಕ್ಷಾಂತರ ನಿಷೇಧ ಕಾಯ್ದೆ’ಯನ್ನು ಜಾರಿಗೆ ತಂದಿತು. ಅದರ ಉದ್ದೇಶ ನಿಚ್ಚಳವಾಗಿತ್ತು.
* ಸಂಸದರ ರಾಜಕೀಯ ಪಕ್ಷಾಂತರ ತಡೆಯುವುದು ಹಾಗೂ ಎರಡು ಕಾರಣಗಳಿಗಾಗಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವುದು.
* ಅಕಸ್ಮಾತ್ ಸದಸ್ಯರು ತಮ್ಮ ಇಚ್ಛೆಯಿಂದ ತಮ್ಮ ಪಕ್ಷದ ಸದಸ್ಯತ್ವವನ್ನು ಬಿಟ್ಟುಕೊಟ್ಟರೆ
* ಸಂಸದ ತನ್ನ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಮತದಾನ ಮಾಡಿದರೆ

ಇಲ್ಲಿ ಪಕ್ಷದ ಸದಸ್ಯತ್ವವನ್ನು ತೊರೆಯುವುದನ್ನು ರಾಜೀನಾಮೆ ಯೊಂದಿಗೆ ಹೋಲಿಸಲು ಬರುವುದಿಲ್ಲ. ಅವೆರಡೂ ಬೇರೆಯದು. ಆದರೆ ಇದನ್ನು ಹೊರತುಪಡಿಸಿಯೂ ಸಂಸದರ ನಡತೆಯನ್ನು ನೋಡಿ ಸ್ಪೀಕರ್ ತನ್ನ ವಿವೇಚನೆಯನ್ನು ಬಳಸಿ ಅಂತಹ ನಡೆಯನ್ನು ಪಕ್ಷ ವಿರೋಧಿ ಎಂದು ಪರಿಗಣಿಸಿದರೆ ಅವರ ಸದಸ್ಯತ್ವವನ್ನು ರದ್ದುಗೊಳಿಸಬಹುದು. ಆದರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೇವಲ ಶಿಸ್ತಿನ ಹೆಸರಿನಲ್ಲಿ ಯಾರ ಅಭಿಪ್ರಾಯಗಳನ್ನೂ ಕಟ್ಟಿಹಾಕಲು ಆಗದು. ಆದ್ದರಿಂದಲೇ ಕಾಯ್ದೆಯಲ್ಲಿ ಭಿನ್ನಾಭಿಪ್ರಾಯಗಳನ್ನೂ ಪರಿಗಣಿಸಿ ಅದಕ್ಕೆ ದಾರಿಯನ್ನು ಒದಗಿಸಲಾಗಿದೆ. ಅಕಸ್ಮಾತ್ ಒಂದು ರಾಜಕೀಯ ಪಕ್ಷದ 2/3ರಷ್ಟು ಸದಸ್ಯರು ಒಟ್ಟಾರೆಯಾಗಿ ಪಕ್ಷತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಲು ಅವಕಾಶ ಮಾಡಿಕೊಡಲಾಗಿದೆ. ‘ಸ್ಪೀಕರ್ ತನ್ನ ವಿವೇಚನೆ ಬಳಸಿ’ ಎಂದ ಕೂಡಲೇ ಅವರ ತೀರ್ಮಾನದ ಬಗ್ಗೆ ಪರ ವಿರೋಧ ನಿಲುವುಗಳು ಬರುವುದಕ್ಕೆ ಪ್ರಾರಂಭಿಸುತ್ತವೆ. ಒಂದು ಸಾಂವಿಧಾನಿಕ ಹುದ್ದೆ ಅಲಂಕರಿಸಿದ ಮೇಲೆ ತಮ್ಮ ಮಾತೃ ಪಕ್ಷವನ್ನು ಮರೆತು ನಿಷ್ಪಕ್ಷವಾಗಿ ನಡೆದುಕೊಂಡ ಉದಾಹರಣೆಗಳು ವಿರಳವಾಗಿರುವಾಗ ಈ ಸಂಶಯಗಳು ಸಹಜ. ಹಾಗಾದರೆ ಸ್ಪೀಕರ್ ವಿವೇಚನೆ ಸರಿಯೋ ತಪ್ಪೋ ಎಂದು ತೀರ್ಮಾನಿಸುವ ಅಧಿಕಾರ ಯಾರಿಗೆ ಇದೆ ಎಂಬ ಪ್ರಶ್ನೆ ಸಹಜ. ಈ ವಿಷಯಕ್ಕೆ ಕುರಿತಂತೆ ಸುಪ್ರೀಂಕೋರ್ಟ್ ಆಗಾಗ ನೀಡಿದ ತೀರ್ಮಾನಗಳ ಮುಖಾಂತರ ಇದು ಸ್ಪೀಕರ್ ಅವರಿಗೆ ಮಾತ್ರ ಸೇರಿದ ವಿಚಾರ ಎಂದು ಸಾರಿ ಹೇಳಿದೆ. ಆದರೆ ಸ್ಪೀಕರ್ ತಮ್ಮ ಕಾರಣಗಳನ್ನು ಸರಿಯಾಗಿ ವಿವರಿಸಬೇಕು.

ಈ ಕಾಯ್ದೆ ಬಂದ ನಂತರ ಸಣ್ಣಪ್ರಮಾಣದ ಪಕ್ಷಾಂತರ ಹಾಗೂ ರಾಜಕೀಯ ಅಸ್ಥಿರತೆಗಳು ಕಡಿಮೆ ಆಗಿವೆಯಾದರೂ ಸಾಮೂಹಿಕ ಗುಳೆ ನಿಂತಿಲ್ಲ. ಈ ನಿಟ್ಟಿನಲ್ಲಿ ನೋಡಿದರೆ ಕಾಯ್ದೆಯು ಸಫಲತೆ ಕಂಡಿದೆ ಎನ್ನಬಹುದು.

ಸುಪ್ರೀಂ ಕೋರ್ಟ್ ಸದಸ್ಯರ ಸದಸ್ಯತ್ವ ಅಮಾನ್ಯಗೊಳಿಸುವ ವಿಷಯಗಳಲ್ಲಿ ಬಹುತೇಕ ನಿರ್ಲಿಪ್ತ ಧೋರಣೆ ಹೊಂದಿದೆ. ಇನ್ನು ಕೆಲವು ಸಲ ಕೆಲವೊಂದು ನಿರ್ದೇಶನಗಳನ್ನು ಮಾತ್ರ ನೀಡಿ ತೀರ್ಪು ನೀಡುವುದರಿಂದ ಹೊರಗುಳಿದಿದೆ. ಇದು ಸಂವಿಧಾನ ಬದ್ಧವಾದ ನಡೆಯೂ ಹೌದು. ಏಕೆಂದರೆ ಸಂವಿಧಾನದಲ್ಲಿ ಸ್ಪೀಕರ್ ಅವರ ಅಧಿಕಾರ ಹಾಗೂ ಕಾರ್ಯವ್ಯಾಪ್ತಿಯನ್ನು ನಿರ್ದಿಷ್ಟವಾಗಿ ವಿವರಿಸಿದಾಗ ಆ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂಬ ಕೋರ್ಟಿನ ನಿಲುವು ಸರಿ. ಆದರೆ ಸುಪ್ರೀಕೋರ್ಟ್‍ನ ಮುಂದೆ ಆಗಾಗ್ಗೆ ಅನೇಕ ದ್ವಂದ್ವಗಳು ಎದುರಾಗುತ್ತಿರುತ್ತವೆ.

ತಮಿಳುನಾಡಿನ ಎಐಡಿಎಂಕೆಯ ಇ.ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲಿಸಲು ನಿರಾಕರಿಸಿದ 18 ಸದಸ್ಯರನ್ನು ರಾಜ್ಯಪಾಲರು ಅಮಾನ್ಯ ಮಾಡಿದಾಗ ಆ ವಿಷಯ ಹೈಕೋರ್ಟಿನ ಮುಂದೆ ಬಂತು. ಆಗ ಕೋರ್ಟು, ಒಂದು ಪಕ್ಷದ ನಾಯಕನೆಂದರೆ ಅವನೊಬ್ಬ ವ್ಯಕ್ತಿ ಮಾತ್ರವೇ ಅಥವಾ ಅವನೇ ಪಕ್ಷವೇ? ಎಂಬ ಪ್ರಶ್ನೆ ಎತ್ತಿತ್ತು. ಇನ್ನು ಕೇವಲ ತಮ್ಮ ಪಕ್ಷದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಮಾತ್ರಕ್ಕೆ ಅವನನ್ನು ಶಿಸ್ತಿನ ಹೆಸರಿನಲ್ಲಿ ಅಮಾನ್ಯ ಮಾಡುವುದು ಎಷ್ಟು ಸರಿ? ಈ ಪ್ರಶ್ನೆಗಳು ನೈಜವಾದರೂ ನಾವು ದಿನನಿತ್ಯ ನೋಡುವ ಈ ಪಕ್ಷಾಂತರಿಗಳಿಗೆ ಇವು ಅನ್ವಯಿಸುತ್ತವಾ ಎಂಬುದು ಬಹುದೊಡ್ಡ ಪ್ರಶ್ನೆ.

ಬಹುಶಃ ಸೈದ್ಧಾಂತಿಕ ಕಾರಣಗಳಿಗಾಗಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಹೊರನಡೆದ, ಇಲ್ಲವೇ ರಾಜೀನಾಮೆ ನೀಡಿದ ರಾಜಕಾರಣಿಗಳನ್ನು ಈಗ ಸಿನಿಮಾಗಳಲ್ಲಿ ಮಾತ್ರ ನೋಡಬಹುದು.

ನಮಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲ ಬಿಡುತ್ತಿಲ್ಲ ಎಂದು ಎಂಎಲ್‍ಎಗಳು ನೆಪ ಹೇಳುವಾಗ ‘ಯಾರ ಅಭಿವೃದ್ಧಿ’ ಎಂದು ಜನ ಮಾತಾಡುವುದು ಸರಿಯಾಗೇ ಇದೆ. ಮುಲಾಯಂ ಸಿಂಗ್ ಪಕ್ಷದ ಸದಸ್ಯನೊಂದಿಗೆ ಸೇರಿ 2007ರಲ್ಲಿ ಮಾಯಾವತಿ ಸರ್ಕಾರದ ವಿರುದ್ಧ ಕೆಲ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಬಿಎಸ್‍ಪಿ ಸರ್ಕಾರವನ್ನು ವಜಾಗೊಳಿಸುವಂತೆ ಕೇಳಿದಾಗ ಅಂಥ ಸದಸ್ಯರನ್ನು ಪಕ್ಷದಿಂದ ಹೊರಹಾಕಲಾಯಿತು. ಆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ಗೆ ಸದಸ್ಯರು ಹೋದಾಗ ‘ಅವರ ನಡೆ ಐಚ್ಛಿಕವಾಗಿ ಪಕ್ಷದ ಸದಸ್ಯತ್ವವನ್ನು ತೊರೆದಿದ್ದಕ್ಕೆ ಸಮ’ ಎಂದು ಹೇಳಿ ಕೋರ್ಟು ರಾಜ್ಯಪಾಲರ ತೀರ್ಪನ್ನು ಎತ್ತಿ ಹಿಡಿದಿತ್ತು. ಆದರೆ 2011ರಲ್ಲಿ ಬಿ.ಎಸ್.ಯಡಿಯೂರಪ್ಪ ಕೇಸಿನಲ್ಲಿ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕರ ಸದಸ್ಯತ್ವ ಅಮಾನ್ಯ ಮಾಡಿದ ರಾಜ್ಯಪಾಲರ ತೀರ್ಪನ್ನು ತಳ್ಳಿಹಾಕಿತ್ತು. ಹಾಗೆ ಮಾಡುವಾಗ ಪಕ್ಷದಲ್ಲಿನ ಸ್ವಜನಪಕ್ಷಪಾತ, ದುರಾಡಳಿತ ಯಾವುದನ್ನು ಅವರು ನಿರಾಕರಿಸದೆ ಇದ್ದುದರಿಂದ ಪ್ರತಿಕೂಲ ಅನುಮಾನ (adverse inference) ವ್ಯಕ್ತಪಡಿಸಿ ತೀರ್ಮಾನ ಕೈಗೊಂಡಿತ್ತು. ಇನ್ನು ಮುಖ್ಯವಾಗಿ 2/3 ಸದಸ್ಯರು ಒಂದು ಪಕ್ಷ ತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಿದಾಗ ಅದು ಪಕ್ಷದ ತೀರ್ಮಾನವಾಗಿರದೆ ಕೇವಲ ಹೊರನಡೆದ ಸದಸ್ಯರ ತೀರ್ಮಾನ ಮಾತ್ರ ಆದಾಗ ಅದನ್ನು ಪಕ್ಷದ ವಿಲೀನ ಎನ್ನಲು ಬರುವುದಿಲ್ಲ. ಅದು ಕೇವಲ ಆ ಸದಸ್ಯರ ವಿಲೀನ ಮಾತ್ರ. ಹಾಗಿದ್ದಾಗ ಇಂತಹ ಸನ್ನಿವೇಶವನ್ನು ಹೇಗೆ ಅರ್ಥೈಸುತ್ತಾರೆ ಎಂಬುದು ಕೂಡ ಒಂದು ದ್ವಂದ್ವವೇ.

ಒಂದು ಸ್ಥಿರತೆ ಹಾಗೂ ಶಿಸ್ತು ತರಲು ಜಾರಿಗೆ ಬಂದ ಈ ಕಾಯ್ದೆ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದು ಜನರ ಎದುರಿಗೆ ಇದೆ. ಒಟ್ಟಿನಲ್ಲಿ ಈ ರಾಜಕೀಯ ರಮ್ಮಿ ಆಟದಲ್ಲಿ ಆಗಬಹುದಾದ ಸಂಯೋಜನೆಗಳಿಗೆ ಅಂತ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....