Homeಕರ್ನಾಟಕಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

- Advertisement -
- Advertisement -

| ರಾಜಲಕ್ಷ್ಮಿ ಅಂಕಲಗಿ |
ವಕೀಲರು, ಕರ್ನಾಟಕ ಹೈಕೋರ್ಟ್

ಬಹುಶಃ ಈ ಲೇಖನ ಪ್ರಕಟವಾಗುವಷ್ಟರಲ್ಲಿ ಕರ್ನಾಟಕದ ರಾಜಕೀಯದ ರಮ್ಮಿ ಆಟ ಒಂದು ಹಂತಕ್ಕೆ ಬಂದಿರುತ್ತದೆ. ಅದ್ಯಾಕೋ ‘ರಾಜಕೀಯ ದೊಂಬರಾಟ’ ಎಂದು ಕರೆದು, ಪ್ರಾಣ ಒತ್ತೆಯಿಟ್ಟು ಹೊಟ್ಟೆಪಾಡಿಗಾಗಿ ದೊಂಬರಾಟ ಮಾಡುವವರನ್ನು ಅವಮಾನಿಸಲು ಮನಸ್ಸು ಬರುತ್ತಿಲ್ಲ. ಕೆಲವೊಂದು ಟಿ.ವಿ ಚಾನೆಲ್‍ಗಳು ಹಾಗೂ ಪತ್ರಿಕೆಗಳು ಇವರನ್ನು ರೆಬೆಲ್ ನಾಯಕರು ಎಂದು ಕರೆದಾಗ ಆ ರೆಬೆಲ್ ಎಂಬ ಶಬ್ದಕ್ಕೇನಾದರೂ ಮಾತು ಬರುತ್ತಿದ್ದರೆ ಮಾನಹಾನಿ ಕೇಸು ಹಾಕುತ್ತಿತ್ತು. ಈ ಕೋಟ್ಯಾಧಿಪತಿ ಎಂಎಲ್‍ಎಗಳನ್ನು ಕುರಿಗಳಂತೆ ಕೂಡಿಹಾಕಿ ಕಾಯುತ್ತಿರುವುದನ್ನು ನೋಡಿದ ಜನ ಅಸಹ್ಯಪಡುವುದರ ಜೊತೆಗೆ ನೂರಾರು ಪ್ರಶ್ನೆ ಕೇಳುತ್ತಿದ್ದಾರೆ. ಅದ್ಯಾವ ಪ್ರಲೋಭನೆ ಅಥವಾ ಭಯ ಇವರನ್ನು ಹೀಗೆ ಮಾಡಲು ಪ್ರೇರೇಪಿಸಿರಬಹುದು ಎಂಬುದು ಗೂಢವಾಗಿದೆ. ಒಟ್ಟಿನಲ್ಲಿ ಒಂದು ದೇಶ ಒಂದು ಪಕ್ಷ ಎಂಬ ಸಿದ್ಧಾಂತ ತಂದು ವ್ಯವಸ್ಥಿತವಾಗಿ ವಿರೋಧ ಪಕ್ಷಗಳನ್ನು ನಿರ್ನಾಮಗೊಳಸಿ ಪ್ರಜಾತಂತ್ರವನ್ನು ಅಣುಕು ಯಂತ್ರವನ್ನಾಗಿ ಮಾಡುವ ಹುನ್ನಾರ ನಿಚ್ಚಳವಾಗಿದೆ.

ಸ್ವಾತಂತ್ರ್ಯನಂತರ ಈ ಪಕ್ಷಾಂತರ ಮಾಡುವ ಅವಕಾಶವಾದಿ ರಾಜಕಾರಣಿಗಳು ಹಾಗೂ ನಿರಂತರ ಅಸ್ಥಿರ ಸರ್ಕಾರಗಳು ಇವನ್ನು ಒಂದು ನಿಯಂತ್ರಣದಲ್ಲಿಡುವ ಉದ್ದೇಶದಿಂದ 1985ರಲ್ಲಿ ರಾಜೀವ್‍ಗಾಂಧಿ ಸರ್ಕಾರ ಸಂವಿಧಾನಿಕ ತಿದ್ದುಪಡಿ ಮಾಡುವ ಮೂಲಕ ಹತ್ತನೇ ಶೆಡ್ಯೂಲನ್ನು ಸೇರಿಸಿ ‘ಪಕ್ಷಾಂತರ ನಿಷೇಧ ಕಾಯ್ದೆ’ಯನ್ನು ಜಾರಿಗೆ ತಂದಿತು. ಅದರ ಉದ್ದೇಶ ನಿಚ್ಚಳವಾಗಿತ್ತು.
* ಸಂಸದರ ರಾಜಕೀಯ ಪಕ್ಷಾಂತರ ತಡೆಯುವುದು ಹಾಗೂ ಎರಡು ಕಾರಣಗಳಿಗಾಗಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವುದು.
* ಅಕಸ್ಮಾತ್ ಸದಸ್ಯರು ತಮ್ಮ ಇಚ್ಛೆಯಿಂದ ತಮ್ಮ ಪಕ್ಷದ ಸದಸ್ಯತ್ವವನ್ನು ಬಿಟ್ಟುಕೊಟ್ಟರೆ
* ಸಂಸದ ತನ್ನ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಮತದಾನ ಮಾಡಿದರೆ

ಇಲ್ಲಿ ಪಕ್ಷದ ಸದಸ್ಯತ್ವವನ್ನು ತೊರೆಯುವುದನ್ನು ರಾಜೀನಾಮೆ ಯೊಂದಿಗೆ ಹೋಲಿಸಲು ಬರುವುದಿಲ್ಲ. ಅವೆರಡೂ ಬೇರೆಯದು. ಆದರೆ ಇದನ್ನು ಹೊರತುಪಡಿಸಿಯೂ ಸಂಸದರ ನಡತೆಯನ್ನು ನೋಡಿ ಸ್ಪೀಕರ್ ತನ್ನ ವಿವೇಚನೆಯನ್ನು ಬಳಸಿ ಅಂತಹ ನಡೆಯನ್ನು ಪಕ್ಷ ವಿರೋಧಿ ಎಂದು ಪರಿಗಣಿಸಿದರೆ ಅವರ ಸದಸ್ಯತ್ವವನ್ನು ರದ್ದುಗೊಳಿಸಬಹುದು. ಆದರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೇವಲ ಶಿಸ್ತಿನ ಹೆಸರಿನಲ್ಲಿ ಯಾರ ಅಭಿಪ್ರಾಯಗಳನ್ನೂ ಕಟ್ಟಿಹಾಕಲು ಆಗದು. ಆದ್ದರಿಂದಲೇ ಕಾಯ್ದೆಯಲ್ಲಿ ಭಿನ್ನಾಭಿಪ್ರಾಯಗಳನ್ನೂ ಪರಿಗಣಿಸಿ ಅದಕ್ಕೆ ದಾರಿಯನ್ನು ಒದಗಿಸಲಾಗಿದೆ. ಅಕಸ್ಮಾತ್ ಒಂದು ರಾಜಕೀಯ ಪಕ್ಷದ 2/3ರಷ್ಟು ಸದಸ್ಯರು ಒಟ್ಟಾರೆಯಾಗಿ ಪಕ್ಷತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಲು ಅವಕಾಶ ಮಾಡಿಕೊಡಲಾಗಿದೆ. ‘ಸ್ಪೀಕರ್ ತನ್ನ ವಿವೇಚನೆ ಬಳಸಿ’ ಎಂದ ಕೂಡಲೇ ಅವರ ತೀರ್ಮಾನದ ಬಗ್ಗೆ ಪರ ವಿರೋಧ ನಿಲುವುಗಳು ಬರುವುದಕ್ಕೆ ಪ್ರಾರಂಭಿಸುತ್ತವೆ. ಒಂದು ಸಾಂವಿಧಾನಿಕ ಹುದ್ದೆ ಅಲಂಕರಿಸಿದ ಮೇಲೆ ತಮ್ಮ ಮಾತೃ ಪಕ್ಷವನ್ನು ಮರೆತು ನಿಷ್ಪಕ್ಷವಾಗಿ ನಡೆದುಕೊಂಡ ಉದಾಹರಣೆಗಳು ವಿರಳವಾಗಿರುವಾಗ ಈ ಸಂಶಯಗಳು ಸಹಜ. ಹಾಗಾದರೆ ಸ್ಪೀಕರ್ ವಿವೇಚನೆ ಸರಿಯೋ ತಪ್ಪೋ ಎಂದು ತೀರ್ಮಾನಿಸುವ ಅಧಿಕಾರ ಯಾರಿಗೆ ಇದೆ ಎಂಬ ಪ್ರಶ್ನೆ ಸಹಜ. ಈ ವಿಷಯಕ್ಕೆ ಕುರಿತಂತೆ ಸುಪ್ರೀಂಕೋರ್ಟ್ ಆಗಾಗ ನೀಡಿದ ತೀರ್ಮಾನಗಳ ಮುಖಾಂತರ ಇದು ಸ್ಪೀಕರ್ ಅವರಿಗೆ ಮಾತ್ರ ಸೇರಿದ ವಿಚಾರ ಎಂದು ಸಾರಿ ಹೇಳಿದೆ. ಆದರೆ ಸ್ಪೀಕರ್ ತಮ್ಮ ಕಾರಣಗಳನ್ನು ಸರಿಯಾಗಿ ವಿವರಿಸಬೇಕು.

ಈ ಕಾಯ್ದೆ ಬಂದ ನಂತರ ಸಣ್ಣಪ್ರಮಾಣದ ಪಕ್ಷಾಂತರ ಹಾಗೂ ರಾಜಕೀಯ ಅಸ್ಥಿರತೆಗಳು ಕಡಿಮೆ ಆಗಿವೆಯಾದರೂ ಸಾಮೂಹಿಕ ಗುಳೆ ನಿಂತಿಲ್ಲ. ಈ ನಿಟ್ಟಿನಲ್ಲಿ ನೋಡಿದರೆ ಕಾಯ್ದೆಯು ಸಫಲತೆ ಕಂಡಿದೆ ಎನ್ನಬಹುದು.

ಸುಪ್ರೀಂ ಕೋರ್ಟ್ ಸದಸ್ಯರ ಸದಸ್ಯತ್ವ ಅಮಾನ್ಯಗೊಳಿಸುವ ವಿಷಯಗಳಲ್ಲಿ ಬಹುತೇಕ ನಿರ್ಲಿಪ್ತ ಧೋರಣೆ ಹೊಂದಿದೆ. ಇನ್ನು ಕೆಲವು ಸಲ ಕೆಲವೊಂದು ನಿರ್ದೇಶನಗಳನ್ನು ಮಾತ್ರ ನೀಡಿ ತೀರ್ಪು ನೀಡುವುದರಿಂದ ಹೊರಗುಳಿದಿದೆ. ಇದು ಸಂವಿಧಾನ ಬದ್ಧವಾದ ನಡೆಯೂ ಹೌದು. ಏಕೆಂದರೆ ಸಂವಿಧಾನದಲ್ಲಿ ಸ್ಪೀಕರ್ ಅವರ ಅಧಿಕಾರ ಹಾಗೂ ಕಾರ್ಯವ್ಯಾಪ್ತಿಯನ್ನು ನಿರ್ದಿಷ್ಟವಾಗಿ ವಿವರಿಸಿದಾಗ ಆ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂಬ ಕೋರ್ಟಿನ ನಿಲುವು ಸರಿ. ಆದರೆ ಸುಪ್ರೀಕೋರ್ಟ್‍ನ ಮುಂದೆ ಆಗಾಗ್ಗೆ ಅನೇಕ ದ್ವಂದ್ವಗಳು ಎದುರಾಗುತ್ತಿರುತ್ತವೆ.

ತಮಿಳುನಾಡಿನ ಎಐಡಿಎಂಕೆಯ ಇ.ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲಿಸಲು ನಿರಾಕರಿಸಿದ 18 ಸದಸ್ಯರನ್ನು ರಾಜ್ಯಪಾಲರು ಅಮಾನ್ಯ ಮಾಡಿದಾಗ ಆ ವಿಷಯ ಹೈಕೋರ್ಟಿನ ಮುಂದೆ ಬಂತು. ಆಗ ಕೋರ್ಟು, ಒಂದು ಪಕ್ಷದ ನಾಯಕನೆಂದರೆ ಅವನೊಬ್ಬ ವ್ಯಕ್ತಿ ಮಾತ್ರವೇ ಅಥವಾ ಅವನೇ ಪಕ್ಷವೇ? ಎಂಬ ಪ್ರಶ್ನೆ ಎತ್ತಿತ್ತು. ಇನ್ನು ಕೇವಲ ತಮ್ಮ ಪಕ್ಷದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಮಾತ್ರಕ್ಕೆ ಅವನನ್ನು ಶಿಸ್ತಿನ ಹೆಸರಿನಲ್ಲಿ ಅಮಾನ್ಯ ಮಾಡುವುದು ಎಷ್ಟು ಸರಿ? ಈ ಪ್ರಶ್ನೆಗಳು ನೈಜವಾದರೂ ನಾವು ದಿನನಿತ್ಯ ನೋಡುವ ಈ ಪಕ್ಷಾಂತರಿಗಳಿಗೆ ಇವು ಅನ್ವಯಿಸುತ್ತವಾ ಎಂಬುದು ಬಹುದೊಡ್ಡ ಪ್ರಶ್ನೆ.

ಬಹುಶಃ ಸೈದ್ಧಾಂತಿಕ ಕಾರಣಗಳಿಗಾಗಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಹೊರನಡೆದ, ಇಲ್ಲವೇ ರಾಜೀನಾಮೆ ನೀಡಿದ ರಾಜಕಾರಣಿಗಳನ್ನು ಈಗ ಸಿನಿಮಾಗಳಲ್ಲಿ ಮಾತ್ರ ನೋಡಬಹುದು.

ನಮಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲ ಬಿಡುತ್ತಿಲ್ಲ ಎಂದು ಎಂಎಲ್‍ಎಗಳು ನೆಪ ಹೇಳುವಾಗ ‘ಯಾರ ಅಭಿವೃದ್ಧಿ’ ಎಂದು ಜನ ಮಾತಾಡುವುದು ಸರಿಯಾಗೇ ಇದೆ. ಮುಲಾಯಂ ಸಿಂಗ್ ಪಕ್ಷದ ಸದಸ್ಯನೊಂದಿಗೆ ಸೇರಿ 2007ರಲ್ಲಿ ಮಾಯಾವತಿ ಸರ್ಕಾರದ ವಿರುದ್ಧ ಕೆಲ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಬಿಎಸ್‍ಪಿ ಸರ್ಕಾರವನ್ನು ವಜಾಗೊಳಿಸುವಂತೆ ಕೇಳಿದಾಗ ಅಂಥ ಸದಸ್ಯರನ್ನು ಪಕ್ಷದಿಂದ ಹೊರಹಾಕಲಾಯಿತು. ಆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ಗೆ ಸದಸ್ಯರು ಹೋದಾಗ ‘ಅವರ ನಡೆ ಐಚ್ಛಿಕವಾಗಿ ಪಕ್ಷದ ಸದಸ್ಯತ್ವವನ್ನು ತೊರೆದಿದ್ದಕ್ಕೆ ಸಮ’ ಎಂದು ಹೇಳಿ ಕೋರ್ಟು ರಾಜ್ಯಪಾಲರ ತೀರ್ಪನ್ನು ಎತ್ತಿ ಹಿಡಿದಿತ್ತು. ಆದರೆ 2011ರಲ್ಲಿ ಬಿ.ಎಸ್.ಯಡಿಯೂರಪ್ಪ ಕೇಸಿನಲ್ಲಿ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕರ ಸದಸ್ಯತ್ವ ಅಮಾನ್ಯ ಮಾಡಿದ ರಾಜ್ಯಪಾಲರ ತೀರ್ಪನ್ನು ತಳ್ಳಿಹಾಕಿತ್ತು. ಹಾಗೆ ಮಾಡುವಾಗ ಪಕ್ಷದಲ್ಲಿನ ಸ್ವಜನಪಕ್ಷಪಾತ, ದುರಾಡಳಿತ ಯಾವುದನ್ನು ಅವರು ನಿರಾಕರಿಸದೆ ಇದ್ದುದರಿಂದ ಪ್ರತಿಕೂಲ ಅನುಮಾನ (adverse inference) ವ್ಯಕ್ತಪಡಿಸಿ ತೀರ್ಮಾನ ಕೈಗೊಂಡಿತ್ತು. ಇನ್ನು ಮುಖ್ಯವಾಗಿ 2/3 ಸದಸ್ಯರು ಒಂದು ಪಕ್ಷ ತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಿದಾಗ ಅದು ಪಕ್ಷದ ತೀರ್ಮಾನವಾಗಿರದೆ ಕೇವಲ ಹೊರನಡೆದ ಸದಸ್ಯರ ತೀರ್ಮಾನ ಮಾತ್ರ ಆದಾಗ ಅದನ್ನು ಪಕ್ಷದ ವಿಲೀನ ಎನ್ನಲು ಬರುವುದಿಲ್ಲ. ಅದು ಕೇವಲ ಆ ಸದಸ್ಯರ ವಿಲೀನ ಮಾತ್ರ. ಹಾಗಿದ್ದಾಗ ಇಂತಹ ಸನ್ನಿವೇಶವನ್ನು ಹೇಗೆ ಅರ್ಥೈಸುತ್ತಾರೆ ಎಂಬುದು ಕೂಡ ಒಂದು ದ್ವಂದ್ವವೇ.

ಒಂದು ಸ್ಥಿರತೆ ಹಾಗೂ ಶಿಸ್ತು ತರಲು ಜಾರಿಗೆ ಬಂದ ಈ ಕಾಯ್ದೆ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದು ಜನರ ಎದುರಿಗೆ ಇದೆ. ಒಟ್ಟಿನಲ್ಲಿ ಈ ರಾಜಕೀಯ ರಮ್ಮಿ ಆಟದಲ್ಲಿ ಆಗಬಹುದಾದ ಸಂಯೋಜನೆಗಳಿಗೆ ಅಂತ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...