Homeಮುಖಪುಟಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

- Advertisement -
- Advertisement -

ಬನ್ನಿ ನಮ್ಮೆದುರಿಗಿರುವ ವಾಸ್ತವವನ್ನು ಎದುರಿಸುವ. ಶಬರಿಮಲದಲ್ಲಿ ನಮ್ಮ ಸಂವಿಧಾನಾತ್ಮಕ ಆದೇಶ ಸೋತಿದೆ. ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.
ಸುಲಭವಾದ, ನಮಗೆ ಅನುಕೂಲಕರವಾದ ಉತ್ತರಗಳನ್ನು ಹುಡುಕುವುದನ್ನು ಬಿಟ್ಟುಬಿಡುವ. ಹೌದು, ಬಿಜೆಪಿಯ ಬೆಂಬಲದೊಂದಿಗೆ, ಈ ಜನಪ್ರಿಯ ಪ್ರತಿಭಟನೆಯನ್ನು ಹಿಂದುತ್ವದ ಕಟ್ಟಾ ಬೆಂಬಲಿಗರಿಂದ ಆಯೋಜಿಸಲಾಗಿತ್ತು. ಹೌದು, ಕಾಂಗ್ರೆಸ್ ಮೃದು ಹಿಂದುತ್ವದ ನೀತಿಯನ್ನನುಸರಿಸಿತು, ಮೊದಲ ಬಾರಿಗೇನೂ ಅಲ್ಲ. ಹೌದು, ಆಡಳಿತ ಪಕ್ಷ ಸಿಪಿಐ(ಎಮ್) ಜನಪ್ರಿಯ ಭಾವನೆಗಳ ಎದುರಿಗೆ ಓಲಾಡುವಂತಾಯಿತು. ಆದರೆ, ಇವರ ಬಾಗಿಲಿಗೇ ಎಲ್ಲಾ ಅಸಮಾಧಾನವನ್ನು ತೂರುವುದು ನಿರರ್ಥಕ. ದಯವಿಟ್ಟು ಜನರ ಮನಃಸ್ಥಿತಿ ಮತ್ತು ಅವರ ವೋಟುಗಳನ್ನು ಹಿಂಬಾಲಿಸಿ. ನಿಜವಾದ ಪ್ರಶ್ನೆಯೇನೆಂದರೆ: ಜನರ ಮನಃಸ್ಥಿತಿ ಸಂವಿಧಾನಾತ್ಮಕ ಆದೇಶಕ್ಕೆ ತದ್ವಿರುದ್ಧವೇಕಿತ್ತು?
ತಮಾಷೆ ಮಾಡೋದನ್ನು ಬಿಟ್ಟುಬಿಡುವ: ನ್ಯಾಯಾಲಯದ ಒಂದು ‘ಶ್ರದ್ಧೆ ವಿರೋಧಿ’ ಆದೇಶವನ್ನು ಕೇರಳದಲ್ಲಿ, ಅದೂ ಜಗತ್ತಿನಲ್ಲಿ ಉಳಿದುಕೊಂಡಿರುವ ಕೆಲವೇ ಕಲವು ಸ್ಟಾö್ಯಲಿನಿಸ್ಟ್ ಪಕ್ಷದ ಆಡಳಿತದಲ್ಲಿಯೇ ಇಂತಹ ಆದೇಶವನ್ನು ಜಾರಿಗೊಳಿಸಲು ಆಗಲಿಲ್ಲ ಎಂದಲ್ಲಿ ಬೇರೆಡೆಯಂತೂ ಸಾಧ್ಯವೇ ಇಲ್ಲ. ನಿಜ, ಇಂಥದ್ದೆÃ ಆದೇಶವನ್ನು ಹಾಜಿ ಅಲಿ ದರ್ಗಾ ಪ್ರಕರಣದಲ್ಲಿ ಸಮುದಾಯದ ಭಾವನೆಗಳ ವಿರುದ್ಧವಾಗಿದ್ದರೂ ಜಾರಿಗೊಳಿಸಲಾಗಿತ್ತು. ಆದರೆ ಒಂದು ‘ಜಾತ್ಯತೀತ’ ಆಡಳಿತವಿದ್ದಾಗ ಹಾಗೆ ಆಗಲು ಸಾಧ್ಯವಿತ್ತೆ? ಶಾ ಬಾನೊ ಪ್ರಕರಣವನ್ನು ನಾವು ಮರತಿದ್ದೆÃವೆಯೇ? ಸಿಖ್ ಮತಶ್ರದ್ಧೆಯ ಹೆಸರಿನಲ್ಲಿ ಎಸ್‌ಜಿಪಿಸಿ ತನ್ನ ನ್ಯಾಯಬಾಹಿರ ಕ್ರಮಗಳನ್ನು ಮುಂದುವರೆಸಿರಲಿಲ್ಲವೇ?
ಇದನ್ನು ನೈತಿಕತೆಯ ಪ್ರಶ್ನೆಯಾಗಿಸಿ ನಮ್ಮ ಶಕ್ತಿಗಳನ್ನು ವ್ಯಯಿಸುವುದು ಬೇಡ. ಹೌದು ಈ ವೈಫಲ್ಯಗಳನ್ನು ಖಂಡಿತವಾಗಿಯೂ ಖಂಡಿಸುವ. ಸರ್ವೋಚ್ಛ ನ್ಯಾಯಾಲಯದ ಆದೇಶಗಳನ್ನೆÃ ಉಲ್ಲಂಘಿಸುವಂತಾದರೆ ಒಂದು ಸಂವಿಧಾನಾತ್ಮಕ ಪ್ರಜಾಪ್ರಭುತ್ವವನ್ನು ನಡೆಸುವ ಹಕ್ಕನ್ನೆÃ ಕಳೆದುಕೊಂಡಂತೆ. ಆದರೆ, ಗೋಳಾಟ, ಅಸಮಾಧಾನ ಮತ್ತು ಕಟು ವಿರೋಧ ಇವ್ಯಾವುಗಳೂ ಆತ್ಮಾವಲೋಕನ ಮತ್ತು ಚಿಂತನೆಗೆ ಪರ್ಯಾಯಗಳಲ್ಲ. ಖಂಡನೆಗಿಂತ ಈ ಸನ್ನಿವೇಶ ಆಳವಾದ ಚಿಂತನೆಗೆ ಕರೆನೀಡುತ್ತದೆ. ಸಂವಿಧಾನಾತ್ಮಕ ನೈತಿಕತೆ ಮತ್ತು ಜನಾಭಿಪ್ರಾಯದ ನಡುವಿನ ಒಂದು ಸಂಘರ್ಷವನ್ನು ನಾವು ಹೇಗೆ ಸಮಾಲೋಚಿಸುತ್ತೆÃವೆ?
ಶೇಖರ್ ಗುಪ್ತ ಮಾಡಿದಂತೆ, ನ್ಯಾಯಾಲಯಕ್ಕೆ ಹೊಣೆ ಹೊರೆಸಿ ಈ ಕಠಿಣ ಪ್ರಶ್ನೆಯನ್ನು ಪಕ್ಕಕ್ಕೆ ಸರಿಸುವುದು ಬೇಡ. ಹೌದು ನ್ಯಾಯಾಂಗದ ಓವರ್‌ರೀಚ್ ನಮ್ಮ ವ್ಯವಸ್ಥೆಯ ಒಂದು ಸಮಸ್ಯೆ, ಆದರೆ ಈ ಪ್ರಕರಣದಲ್ಲಿ ಹಾಗನ್ನಲು ಆಗುವುದಿಲ್ಲ. ಪೂಜೆ ಆಗುವ ಒಂದು ಸಾರ್ವಜನಿಕ ಸ್ಥಳದಲ್ಲಿ ಸಮಾನವಾದ ಅವಕಾಶವನ್ನು ಕೋರಿ ಒಬ್ಬ ವ್ಯಕ್ತಿ ನ್ಯಾಯಾಲಯಕ್ಕೆ ತಲುಪಿದರೆ, ನ್ಯಾಯಾಧೀಶರು ಅಸಹಾಯಕತೆಯನ್ನು ತೋಡಿಕೊಳ್ಳಲಾಗುವುದಿಲ್ಲ, ಅದೂ ನಮ್ಮ ಸಂವಿಧಾನದಲ್ಲಿ ದೇವಸ್ಥಾನದ ಪ್ರವೇಶದ ಬಗ್ಗೆ ಸ್ಪಷ್ಟವಾಗಿ ನಮೂದಿಸಿರುವಾಗ. ಭಾರತೀಯ ಜಾತ್ಯತೀತತೆ ಫ್ರಾನ್ಸಿನ ಕಟ್ಟುನಿಟ್ಟಾದ ತಟಸ್ಥ ಧೋರಣೆಯನ್ನು ಅನುಸರಿಸುವುದಿಲ್ಲ. ಧಾರ್ಮಿಕ ವಿಷಯಗಳಲ್ಲಿ ತತ್ವಾಧಾರಿತ ಮಧ್ಯಪ್ರವೇಶಕ್ಕೆ ಅವಕಾಶ ಮಾಡಿಕೊಡುವ ಮತ್ತು ಅಪೇಕ್ಷಿಸುವ ‘ತತ್ವಾಧಾರಿತ ಅಂತರ’ಕ್ಕೆ ನಮ್ಮ ಸಂವಿಧಾನ ಅನುವು ಮಾಡಿಕೊಡುತ್ತದೆ ಎಂದು ರಾಜೀವ್ ಭಾರ್ಗವ್ ಹೇಳಿದ್ದು ಸರಿಯಾಗಿದೆ.
ಈಗ ನೇರವಾಗಿ ವಿಷಯಕ್ಕೆ ಬರುವ. ದುಃಖಕರ ಮತ್ತು ಅಪ್ರಿಯವಾದ ವಾಸ್ತವವೇನೆಂದರೆ, ಈ ಲಿಬರಲ್ ಆದ ಸಂವಿಧಾನಾತ್ಮಕ ಆದೇಶ ಜನಾಭಿಪ್ರಾಯದೊಂದಿಗೆ ಮೇಳೆ ಆಗಿರಲಿಲ್ಲ, ಆಗಿಲ್ಲ. ಸುಪ್ರಿÃಮ್ ಕೋರ್ಟಿನ ನ್ಯಾಯಾಧೀಶರ ಮತ್ತು ಭಾರತದ ಲಿಬರಲ್ ಚಿಂತಕರ ನೈತಿಕ ಸಂವೇದನಗಳಿಗೂ ಹಾಗೂ ಒಬ್ಬ ಅಂiÀÄ್ಯಪ್ಪ ಸ್ವಾಮಿಯ ಸಾಮಾನ್ಯ ಭಕ್ತನ ನೈತಿಕ ಸಂವೇದನೆಗಳೊಂದಿಗೆ ಸಂಬಂಧವಿಲ್ಲದಿರುವುದು ಸ್ಪಷ್ಟ. ಸಾಮಾನ್ಯ ಭಾರತೀಯರಿಗೆ ನಮ್ಮ ಸಂವಿಧಾನಕ್ಕೆ ಅತಿ ಹಚ್ಚಿನ ಆದರೆ ಅಮೂರ್ತವಾದ ಮನ್ನಣೆಯಿದೆ. ಆದರೆ ಸಂವಿಧಾನಾತ್ಮಕ ತತ್ವಗಳನ್ನು ನಿರ್ದಿಷ್ಟವಾಗಿ ಸ್ಪಷ್ಟಪಡಿಸಿದ ಸಂದರ್ಭಗಳಲ್ಲಿ ಅನೇಕ ಸಲ ಜನರು ಅದರ ವಿರುದ್ಧ ಹೋಗುವ ಸಾಧ್ಯತೆಗಳಿವೆ.
ಈ ಕಟುಸತ್ಯದಿಂದ ಪಲಾಯನ ಮಾಡುವುದು ಬೇಡ. ಇದನ್ನು ನಾನು 1992ರಲ್ಲಿ ಬಾಬರಿ ಮಸೀದಿಯ ಧ್ವಂಸವಾದ ಸಮಯದಲ್ಲಿ ಅರಿತೆ. ಆಗ ನಾನು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದೆ, ಚಂಡೀಗಡದ ಒಂದು ದುಡಿಯುವ ಜನರ ವಸತಿಪ್ರದೇಶದಲ್ಲಿ ನಾನು ವಾಸಿಸುತ್ತಿದ್ದೆ. ಅಂiÉÆÃಧ್ಯೆಯ ಪ್ರಕರಣದಲ್ಲಿ ಸುಪ್ರಿÃಮ್ ಕೋರ್ಟಿನ ಆದೇಶವನ್ನು ಉಲ್ಲಂಘಿಸಿದರ ಬಗ್ಗೆ ನಾನು ನನ್ನ ನೈತಿಕ ಅಸಮಾಧಾನವನ್ನು ವ್ಯಕ್ತಪಡಿಸಿದಾಗ, ನನ್ನ ನೆರೆಯವರೊಬ್ಬರು ಕೇಳಿದ್ದು ‘ಪ್ರೊಫೆಸರ್ ಸಾಬ್, ರಾಮನ ಮಂದಿರ ಅಂiÉÆÃಧ್ಯೆಯಲ್ಲೆÃ ಕಟ್ಟಬೇಕಲ್ವಾ, ಮತ್ತೆÃನು ಇಂಗ್ಲೆಂಡಿನಲ್ಲಿ ಕಟ್ಟಬೇಕೇ?” ಆಗ ನಾನು ನನ್ನ ಪಾಠ ಕಲಿತೆ. ಆದರೆ ಭಾರತದ ಲಿಬರಲ್, ಪ್ರಗತಿಪರರು ಇನ್ನೂ ಆ ಪಾಠ ಕಲಿತಂತಿಲ್ಲ.
ಕನ್ನಡಿಯಲ್ಲಿ ನಮ್ಮನ್ನು ನಾವು ನೋಡಿಕೊಳ್ಳುವ ಧೈರ್ಯವನ್ನು ಬೆಳೆಸಿಕೊಳ್ಳುವ: ಇಂಗ್ಲಿÃಷ್ ಮಾತನಾಡುವ ನೆಲದೊಂದಿಗಿನ ಬೇರನ್ನು ಕಳಚಿಕೊಂಡಿರುವ ಭಾರತದ ಎಲೀಟ್ ಜನರ ಬಗ್ಗೆ ಇರುವ ಸ್ಟಿರಿಯೋಟೈಪ್‌ನಲ್ಲಿ ಸತ್ಯಾಂಶವಿದೆ. ಭಾರತದ ಲಿಬರಲ್ ಜನಗಳು ಒಂದು ಪರಕೀಯ ಭಾಷೆಯಲ್ಲಿ ಮಾತನಾಡುತ್ತಾರೆ. ಮುಂಚೂಣಿಯಲ್ಲಿರುವ ಯಾವುದೇ ಭಾರತೀಯ ಚಿಂತಕನಿಗೆ ಕೇಳಿ : ಇಂಗ್ಲಿÃಷಿನಲ್ಲಿರಿದ, ಯಾವುದೇ ಒಂದು ಭಾರತೀಯ ಭಾಷೆಯಲ್ಲಿಯ ಪುಸ್ತಕವನ್ನು ಕೊನೆಯ ಸಲ ಓದಿದ್ದು ಯಾವಾಗ ಅಥವಾ ಇಂಗ್ಲಿÃಷ್ ಬಿಟ್ಟು ಯಾವುದೇ ಒಂದು ಭಾರತೀಯ ಭಾಷೆಯಲ್ಲಿ ಏ4 ಸೈಜಿನ ಒಂದು ಪುಟದ ಎರಡೂ ಬದಿಗಳಲ್ಲಿ ಕೊನೆಯ ಸಲ ಬರೆದಿದ್ದು ಯಾವಾಗ? ಭಾರತದ ಧಾರ್ಮಿಕ ಪರಂಪರೆಗಳ ವಿಷಯ ಬಂದಾಗ ಇವರುಗಳು ಕೆಲವು ಸಲ ತಾತ್ಸಾರ ಹೊಂದಿದವರಾಗಿದ್ದರೆ ಅನೇಕ ಸಲ ಅನಕ್ಷರಸ್ಥರಾಗಿರುತ್ತಾರೆ. ಉಪನಿಷತ್ತುಗಳು ಮತ್ತು ಪುರಾಣಗಳ ನಡುವೆ ಇರುವ ವ್ಯತ್ಯಾಸಗಳ ಬಗ್ಗೆ ಎಷ್ಟು ಜನ ವಿದ್ಯಾವಂತ ಭಾರತೀಯರು ಹೇಳಬಲ್ಲರು? ಅಥವಾ ಶರಿಯತ್ ಮತ್ತು ಹದೀಸ ನಡುವೆ ಇರುವ ವ್ಯತ್ಯಾಸಗಳ ಬಗ್ಗೆ. ಹಾಗಾಗಿ ಇವರಿಂದ ಭಾರತೀಯರು ನೈತಿಕ ಪಾಠಗಳನ್ನು ತೆಗೆದುಕೊಳ್ಳಲು ನಿರಾಕರಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಇವರುಗಳು ವಿಮರ್ಶೆ ಮತ್ತು ಸುಧಾರಣೆಯನ್ನು ಸಂಪೂರ್ಣವಾಗಿ ನಿರಾಕರಿಸದಿದ್ದರೂ ಅದು ಒಂದು ತೀರ ಭಿನ್ನವಾದ ಮತ್ತು ಪ್ರತಿಕೂಲವಾದ ನುಡಿಗಟ್ಟಿನಲ್ಲಿ ಬಂದಾಗ ಅದನ್ನು ಒಪ್ಪಿಕೊಳ್ಳುವುದಿಲ್ಲ. ಲ್ಯಾಟಿನ್ ಅಮೇರಿಕದಲ್ಲಿ ಕ್ರಾಂತಿಯನ್ನು ಪ್ರತಿಪಾದಿಸಲು ಬೈಬಲ್ ಉದಾಹರಿಸಿ ಅಲ್ಲಿನ ವಿಮೋಚನೆಯ ಧರ್ಮಶಾಸ್ತçವನ್ನು ಬಳಸಲಾಗುತ್ತದೆ. ಆದರೆ, ಹೊಸ ನೈತಿಕ (ಎಥಿಕಲ್) ಚೌಕಟ್ಟುಗಳನ್ನು ಎಳೆಯಲು ಮರ್ಯಾದಾ ಪುರುಷೋತ್ತಮನನ್ನು ಅರ್ಥೈಸಿಕೊಳ್ಳುವ ಹಾಗೂ ಉದಾಹರಿಸುವ ಲಿಬರಲ್ ಚಿಂತಕರು ನಮ್ಮಲ್ಲೆÃಕಿಲ್ಲ?
ಹೆಚ್ಚಿನ ಸೂಕ್ಷö್ಮತೆಗೆ ಹೋಗುವ ಅಗತ್ಯವಿಲ್ಲ. ಭಾರತದಲ್ಲಿ ಲಿಬರಲಿಸಂಗಾಗಿ ಯಾವುದೇ ರಾಜಕೀಯ ಕ್ಷೆÃತ್ರವಿಲ್ಲ; ಮೆಟ್ರೊÃಪಾಲಿಟನ್ ಎಂದು ಕರೆದುಕೊಳ್ಳುವ ಭಾರತದ ದ್ವಿÃಪದ ಹೃದಯದಲ್ಲೂ ಇಲ್ಲ. ಲಿಬರಲ್ ಮತ್ತು ಸಂವಿಧಾನಾತ್ಮಕ ಆದೇಶವನ್ನು ಉಳಿಸಿಕೊಳ್ಳಲು ನ್ಯಾಯಾಲಯದ ಮೇಲೆಯೇ ಅವಲಂಬಿಸುವುದು ಸರಿಯಲ್ಲ. ಕಟು ವಾಸ್ತವವೇನೆಂದರೆ, ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳು ಜನಾಭಿಪ್ರಾಯವನ್ನು ಲೆಕ್ಕಿಸದೇ ತಮ್ಮ ತೀರ್ಪನ್ನು ಕೆಲವು ಸಲ ನೀಡಬಹುದು. ಆದರೆ ತುಲನಾತ್ಮಕವಾಗಿ ನೋಡಿದಾಗ, ಜನಪ್ರಿಯ ಭಾವನೆಗಳ ಹರವಿನೊಂದಿಗೇ ನ್ಯಾಯಾಲಯಗಳು ಹೋಗುವ ಸಾಧ್ಯತೆಗಳೇ ಹೆಚ್ಚು. ಸದ್ಯದ ಇದೇ ಪ್ರವೃತ್ತಿ ಮುಂದುವರೆದಲ್ಲಿ, ನಮ್ಮ ಗಣರಾಜ್ಯವನ್ನು ಇದೇ ಗಣರಾಜ್ಯದಿಂದಲೇ ವಿಫಲವಾಗಿಸಬಹುದಾದ ನಿಜವಾದ ಆತಂಕ ನಮ್ಮೆದುರಿಗಿದೆ.
ನಮ್ಮೆದುರಿಗಿರುವ ಆಯ್ಕೆಗಳನ್ನು ಅರ್ಥ ಮಾಡಿಕೊಳ್ಳುವ. ಒಂದು, ಜನಾಭಿಪ್ರಾಯದ ಹರವಿನೊಂದಿಗೆ ಹೋಗುವುದು, ಅದು ನಮ್ಮನ್ನೆಲ್ಲಿಗೆ ಕೊಂಡೊಯ್ಯುತ್ತದೋ ಅಲ್ಲಿಗೆ ಹೋಗುವುದು ಒಂದು ಆಯ್ಕೆ. ಅದು ಒಂದು ಅಪಾಯಕಾರಿ ಜಾರುಬಂಡೆ. ಇನ್ನೊಂದು ಆಯ್ಕೆ; ಜನಾಭಿಪ್ರಾಯವನ್ನು ಬದಲಿಸುವಂತೆ ಜನರೊಂದಿಗೆ ಮಾತುಕತೆಗೆ ಇಳಿಯುವುದು. ಈ ಮಾತುಕತೆ ಮೋನೋಲಾಗ್ ಅಥವಾ ಸ್ವಗತವಾಗಿರಬಾರದು. ನಾವುಗಳು ಹೊಸದೊಂದು ಭಾಷೆಯನ್ನು ಕಲಿಯಲು ಮುಕ್ತರಾಗಿರಬೇಕು, ಹೊಸದೊಂದು ಸಂವೇದನೆಯನ್ನು ಅನುಭವಿಸಲು ಇಚ್ಛುಕರಾಗಿರಬೇಕು ಹಾಗೂ ಜ್ಞಾನದ ಇತರೆ ಸ್ವರೂಪಗಳ ಬಗ್ಗೆ ಗೌರವ ಹೊಂದಿರಬೇಕು. ಇದುವೇ ಗಾಂಧಿಯ ಮಾರ್ಗ, ಒಬ್ಬ ವಿಮರ್ಶಾತ್ಮಕ ಆಂತರ್ಯದವಳ/ನ ಮಾರ್ಗ. ಮೂರನೇಯ ಆಯ್ಕೆಯೂ ಒಂದಿದೆ: ಹೊಸ ಜನರನ್ನು ಆಯ್ಕೆ ಮಾಡುವುದು.
ಬನ್ನಿ, ಆಯ್ಕೆ ಮಾಡುವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....