Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...