Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...