Homeಕರ್ನಾಟಕಸುಮಲತಾ ಮಾಡಿದ 3 ದಾಖಲೆಗಳು

ಸುಮಲತಾ ಮಾಡಿದ 3 ದಾಖಲೆಗಳು

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು.

- Advertisement -
- Advertisement -

| ಬಿ. ಚಂದ್ರೇಗೌಡ |

ಚುನಾವಣೆ ನಂತರ ಅಭ್ಯರ್ಥಿಗಳು ಸತತ ಒಂದು ತಿಂಗಳು ಮತಪೆಟ್ಟಿಗೆಯೊಳಗೆ ಸಿಕ್ಕಿ ನರಳಿದ್ದು ಇದೇ ಮೊದಲಿರಬೇಕು. ಸಹಜವಾಗಿ, ಮತ ನೀಡಿದ ಕೆಲ ಮದ್ಯ ವ್ಯಸನಿ ಮತದಾರರು, ನಿದ್ರೆ ಬಾರದ ಕಾರಣ ನೀಡಿ ಸರಿಯಾಗಿ ಗುಂಡೇರಿಸತೊಡಗಿದರು. ಜೊತೆಯಲ್ಲಿದ್ದ ಮಂಜೇಗೌಡ ಒಳಗಿನ ಎಣ್ಣೆ ವ್ಯಯವಾದಂತೆ ಹೋಗಿ ಹೋಗಿ ತುಂಬಿಸಿಕೊಂಡು ಬರುತ್ತಿದ್ದ. ಹಾಗಾಗಿ ಕಣ್ಣು ಸದಾ ಕೆಂಪಗೆ ಉರಿಯತೊಡಗಿದ್ದವು. ಕೆಲವರಂತೂ ಇವುಳೆಲ್ಲಿದ್ದಳಯ್ಯ ಸುಮಲತ ಬಂದು ಯಲಕ್ಷನ್ನಿಗೆ ನಿಂತು ನಮ್ಮ ಸರೀಳನೆ ಹಾಳಾಗೋಯ್ತು ಎಂದು ಗೊಣಗಿದ್ದರು.”

ಈ ನಡುವೆ ಸುಮಲತ ಗೆಲ್ಲುವ ಬಗ್ಗೆ ಗೆಳೆಯನೊಬ್ಬ ಒಂದು ಲಕ್ಷ ಬೆಟ್ ಕಟ್ಟುವುದಾಗಿ ಘೋಷಣೆ ಮಾಡಿದ, ಯಾರೂ ಬರಲಿಲ್ಲ. ಅದನ್ನು ಐವತ್ತು ಸಾವಿರಕ್ಕೆ ಇಳಿಸಿದ ನಂತರ ಒಬ್ಬ ಬಂದ. ಆತ ಬರಲು ಕಾರಣವೇನೆಂದರೆ, ಈ ಮನೆ ಮುರುಕ ಟಿವಿಗಳು ಮತ್ತೆ ಸುಮಲತ ವಿಷಯ ತೆಗೆದುಕೊಂಡು ಕಾದಿದೆ ಮಂಡ್ಯಕ್ಕೆ ಅಚ್ಚರಿ ಫಲಿತಾಂಶ ಎಂದು ಬೊಗಳತೊಡಗಿದ್ದವು. ಕೊನೆಗೆ ನೆಕ್ ಟು ನೆಕ್ ಎಂದು ಬಿಕ್ಕ ತೊಡಗಿದವು. ಇದರಿಂದ ಸ್ಫೂರ್ತಿಗೊಂಡ ಜೂಜುಗಾರರು ಆತ್ಮವಿಶ್ವಾಸದಿಂದಲೇ ಐವತ್ತು ಸಾವಿರ ತಂದರು. ಅದೈವತ್ತು ಇದೈವತ್ತು ಒಟ್ಟು ಒಂದು ಲಕ್ಷವನ್ನು ಮೂರನೆ ವ್ಯಕ್ತಿ ಕೈಗಿತ್ತು, ಫಲಿತಾಂಶದ ದಿನ ಪಾರ್ಟಿ ಮಾಡಲು ಒಂದು ಸಾವಿರ ತೆಗೆದಿರಿಸಿ, ಆದಿನ ಮದ್ಯದಂಗಡಿ ಬಂದ್ ಆಗುವ ಅಪಾಯವನ್ನ ಗ್ರಹಿಸಿ ಕೂಡಲೇ ಒಂದು ಸಾವಿರಕ್ಕೆ ಎಂಸಿ ಬ್ರಾಂಡಿ ತಂದಿರಿಸಲು ಹೇಳಿದೆವು. ನಿಖಿಲ್ ಗೆಲ್ಲುವ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡುವವರನ್ನು ಕಂಡು ದಿಗಿಲಾಯ್ತು, ಅವರ ಪ್ರಕಾರ ನೂರಾರು ಬೂತಿನಲ್ಲಿ ನಮ್ಮ ಏಜೆಂಟರೇ ಇರಲಿಲ್ಲ. ಜೊತೆಗೆ ಕುಮಾರಣ್ಣ ಕೆ.ಆರ್.ಎಸ್‍ನಲ್ಲಿ ಬೀಡುಬಿಟ್ಟು ಪುಡಿ ಜಾತಿ ಲೀಡರುಗಳನ್ನೆಲ್ಲಾ ಕೊಂಡಿದ್ದಾರಂತೆ, ಈ ಪೈಕಿ ಕುರುಬರ ಮತಗಳನ್ನ ಅಟ್ಟಿಕೊಂಡು ಬಂದು ಬೂತನ್ನ ತುಂಬಿಸುತ್ತೇನೆಂದು ಹೇಳಿದವನೊಬ್ಬನಿಗೆ ಕುಮಾರಣ್ಣ ಹತ್ತು ಲಕ್ಷ ಕೊಟ್ಟನೆಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸಾಕ್ಷಿಯೊದಗಿಸುವಂತೆ ಇಪ್ಪತೈದು ಲಕ್ಷದ ಕಾರಿನಲ್ಲಿ ಬಂದ ಆತ ನಿಖಿಲ್‍ಗೆ ಓಟು ಮಾಡಿ ಎಂದು ಬೈಸಿಕೊಂಡು ಹೋಗಿದ್ದ.

ಇದೆಲ್ಲಕ್ಕಿಂತ ನಮಗೆ ಇನ್ನ ದಿಗಿಲು ಹುಟ್ಟಿಸಿದ್ದು, ಸುಮಲತ ಗೆದ್ದು ಬಿಜೆಪಿ ಸೇರುತ್ತಾಳೆಂದು ಭಾವಿಸಿರುವ ಮುಸ್ಲಿಮರು ನಿಖಿಲನಿಗೆ ಓಟು ಮಾಡಿದ್ದಾರೆಂಬುದು, ಅಂತೂ ದಶದಿಕ್ಕಿನಿಂದ ನಮಗೆ ಅಶುಭ ಸುದ್ದಿಗಳೇ ಬರತೊಡಗಿದವು. ಇಂತಹ ಸಮಯದಲ್ಲಿ ನಾನು ಕೇವಲ ಐದು ಸಾವಿರ ಬೆಟ್ ಕಟ್ಟಿದ್ದೆ. ಚುನಾವಣೆ ಫಲಿತಾಂಶದ ವರೆಗೂ ನಾನು ಊರಲ್ಲೇ ಇದ್ದುಬಿಟ್ಟೆ. ಇಲ್ಲಿಗೆ ಪತ್ರಿಕೆಗಳು ಬರುವುದಿಲ್ಲ, ಹಾಗೆ ಟಿವಿ ನೋಡಿ ತಿಂಗಳ ಮೇಲಾಯ್ತು. ಹಳ್ಳಿಗಳು ಇನ್ನ ಉಳಿಸಿಕೊಂಡಿರುವ ಶಕ್ತಿಯಲ್ಲಿ ಪೇಪರ್, ಟಿವಿ ಬೇಕೆನಿಸುವುದಿಲ್ಲ. ಆದರೆ ಜನ ಸಮೂಹದ ಜೊತೆ ಮಾತನಾಡಲು ಸಾಧ್ಯವೇ ಇಲ್ಲ. ಬಾಯಿ ಬಿಟ್ಟರೆ ಸಾಕು ಮೊರೆಯುತ್ತಾರೆ. ಯಾರು ಏನನ್ನ ಕೇಳಿಸಿಕೊಳ್ಳುವುದಿಲ್ಲ. ನಮ್ಮ ಮನೆಯಲ್ಲೇ ಹೆಬ್ಬೆಟ್ಟಿನ ಸಹೋದರನೊಬ್ಬ ರಾಜಕಾರಣದ ಬಗ್ಗೆ ನನಗೇ ಹೇಳಲು ಬರುತ್ತಾನೆ. ಅವನ ಲೆಕ್ಕದಲ್ಲಿ ನಾನು ಕಿರಿಯ ಅವನು ಹಿರಿಯ ಅದಕ್ಕಾಗಿ ಕೇಳಿಸಿಕೊಳ್ಳಬೇಕಂತೆ!

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು. ಒಂಚೂರು ನಿಖಿಲ್ ಮುಂದೆ ಹೋದ ಸುದ್ದಿಯಿಂದ ಅವನ ಅಭಿಮಾನಿಗಳು ಅವನಂತೆಯೇ ಆಡತೊಡಗಿದರು. ಒಂದಿಷ್ಟು ಆತಂಕವಾಯ್ತು, ನಮ್ಮ ನಾಗಮಂಗಲ ಕ್ಷೇತ್ರದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ನಲವತ್ತೇಳು ಸಾವಿರ ಲೀಡು ಬಂದಿತ್ತು ಅದನ್ನ ಹತ್ತಿಕ್ಕಿ ಕನಿಷ್ಟ ಹತ್ತು ಸಾವಿರ ನಿಖಿಲ್ ಲೀಡ್ ಬರಬಹುದೆಂಬುದು ನಮ್ಮ ಲೆಕ್ಕಾಚಾರವಾಗಿತ್ತು. ಅದು ನಿಜವಾಯ್ತು. ಇದು ಬಿಟ್ಟರೆ ಜಿಲ್ಲೆಯ ಇನ್ನಾವ ತಾಲ್ಲೂಕು ಜೆಡಿಎಸ್‍ಗೆ ಲೀಡ್ ಕೊಡಲಿಲ್ಲ. ನಮ್ಮೂರಿಗೆ ಸುಮಲತ ಲಕ್ಷ ಲೀಡ್‍ನಲ್ಲಿ ಗೆದ್ದಳು ಎಂಬ ಸುದ್ದಿ ತಲುಪಿದಾಗ, ಜನ ಊರ ಮುಂದಿದ್ದರು. ಅದೇ ಸಮಯಕ್ಕೆ ಮಳೆ ಆರಂಭವಾಯ್ತು, ಜನ ಮಳೆಯಲ್ಲೇ ಕುಣಿಯತೊಡಗಿದರು. ಅದು ರಂಗದ ಕುಣಿತ, ತಮ್ಮಟೆ ಚಿಕ್ಕಣ್ಣ ಮಾಯಪ್ಪ ಇವರೆಲ್ಲಾ ತಮಟೆ ಬಡಿಯತೊಡಗಿದಂತೆ ಒಂದು ಗಂಟೆ ಸುರಿದ ಮಳೆಯಲ್ಲಿ ಹೊಸ ತಲೆಮಾರಿನ ಹುಡುಗರು ಕುಣಿಯತೊಡಗಿದರು. ಆಶ್ಚರ್ಯವೆಂದರೆ, ಈ ಕುಣಿತದ ಸಂಭ್ರಮ ನೋಡಲಾಗದ ನಿಖಿಲ್ ಕಡೆಯವರೂ ಬಂದು ಕುಣಿಯತೊಡಗಿದರು. ಈ ಸಮ್ಮಿಲನಕ್ಕೆ ಜನ ಹರ್ಷೋದ್ಘಾರ ಮಾಡಿ ಸೀಟಿ ಹೊಡೆದರು. ವಾಸ್ತವವಾಗಿ ದೇವೇಗೌಡ ಮತ್ತು ಕುಮಾರಸ್ವಮಿಯನ್ನು ಬೆಂಬಲಿಸಿದ್ದವರು ಸ್ವಾಭಿಮಾನ ಕಳೆದುಕೊಂಡವರಂತೆ ಮುಖರಹಿತರಾಗಿದ್ದರು. ಈಗ ಅವರ ಸಂಭ್ರಮ ನೋಡಿದರೆ ಅವರಿಗೂ ಸುಮಲತ ಗೆಲ್ಲಬೇಕಿತ್ತೇನೋ ಅನ್ನಿಸುತ್ತದೆ.

ಇದೇನೆ ಆದರು ಸುಮಲತ ಮೂರು ದಾಖಲೆ ಮಾಡಿದ್ದಾರೆ. ಅದೇನೆಂದರೆ 1. ಮಂಡ್ಯದಿಂದ ಆಯ್ಕೆಯಾದ ಮೊದಲ ಪಕ್ಷೇತರ ಅಭ್ಯರ್ಥಿ. 2. ರಾಜ್ಯದ ಕಳೆದ 52 ವರ್ಷದಲ್ಲಿ ಮೊದಲ ಬಾರಿಗೆ ಸ್ವತಂತ್ರವಾಗಿ ಆಯ್ಕೆಯಾದ ಮಹಿಳಾ ಅಭ್ಯರ್ಥಿ. 3. ದೇಶದ ಮಹಿಳಾ ಪಕ್ಷೇತರ ಸದಸ್ಯೆ. ಇರಲಿ ನನ್ನ ಜೊತೆ ಬೆಟ್ ಕಟ್ಟಿದ್ದವನು ಪತ್ತೆಯಿಲ್ಲ. ನಾನು ಊರಿಂದ ಬಂದ ಮೇಲೆ ಊರಿಗೆ ಬಂದಿರಬಹುದು. ನಮ್ಮ ಸ್ವಾಭಿಮಾನ ಗೆದ್ದಿತಲ್ಲ ಅಷ್ಟೇ ಸಾಕು.

ಇದನ್ನು ಓದಿರಿ ಮಂಡ್ಯದಲ್ಲಿ ನಾ ಕಂಡದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...