Homeಕರ್ನಾಟಕಸುಮಲತಾ ಮಾಡಿದ 3 ದಾಖಲೆಗಳು

ಸುಮಲತಾ ಮಾಡಿದ 3 ದಾಖಲೆಗಳು

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು.

- Advertisement -
- Advertisement -

| ಬಿ. ಚಂದ್ರೇಗೌಡ |

ಚುನಾವಣೆ ನಂತರ ಅಭ್ಯರ್ಥಿಗಳು ಸತತ ಒಂದು ತಿಂಗಳು ಮತಪೆಟ್ಟಿಗೆಯೊಳಗೆ ಸಿಕ್ಕಿ ನರಳಿದ್ದು ಇದೇ ಮೊದಲಿರಬೇಕು. ಸಹಜವಾಗಿ, ಮತ ನೀಡಿದ ಕೆಲ ಮದ್ಯ ವ್ಯಸನಿ ಮತದಾರರು, ನಿದ್ರೆ ಬಾರದ ಕಾರಣ ನೀಡಿ ಸರಿಯಾಗಿ ಗುಂಡೇರಿಸತೊಡಗಿದರು. ಜೊತೆಯಲ್ಲಿದ್ದ ಮಂಜೇಗೌಡ ಒಳಗಿನ ಎಣ್ಣೆ ವ್ಯಯವಾದಂತೆ ಹೋಗಿ ಹೋಗಿ ತುಂಬಿಸಿಕೊಂಡು ಬರುತ್ತಿದ್ದ. ಹಾಗಾಗಿ ಕಣ್ಣು ಸದಾ ಕೆಂಪಗೆ ಉರಿಯತೊಡಗಿದ್ದವು. ಕೆಲವರಂತೂ ಇವುಳೆಲ್ಲಿದ್ದಳಯ್ಯ ಸುಮಲತ ಬಂದು ಯಲಕ್ಷನ್ನಿಗೆ ನಿಂತು ನಮ್ಮ ಸರೀಳನೆ ಹಾಳಾಗೋಯ್ತು ಎಂದು ಗೊಣಗಿದ್ದರು.”

ಈ ನಡುವೆ ಸುಮಲತ ಗೆಲ್ಲುವ ಬಗ್ಗೆ ಗೆಳೆಯನೊಬ್ಬ ಒಂದು ಲಕ್ಷ ಬೆಟ್ ಕಟ್ಟುವುದಾಗಿ ಘೋಷಣೆ ಮಾಡಿದ, ಯಾರೂ ಬರಲಿಲ್ಲ. ಅದನ್ನು ಐವತ್ತು ಸಾವಿರಕ್ಕೆ ಇಳಿಸಿದ ನಂತರ ಒಬ್ಬ ಬಂದ. ಆತ ಬರಲು ಕಾರಣವೇನೆಂದರೆ, ಈ ಮನೆ ಮುರುಕ ಟಿವಿಗಳು ಮತ್ತೆ ಸುಮಲತ ವಿಷಯ ತೆಗೆದುಕೊಂಡು ಕಾದಿದೆ ಮಂಡ್ಯಕ್ಕೆ ಅಚ್ಚರಿ ಫಲಿತಾಂಶ ಎಂದು ಬೊಗಳತೊಡಗಿದ್ದವು. ಕೊನೆಗೆ ನೆಕ್ ಟು ನೆಕ್ ಎಂದು ಬಿಕ್ಕ ತೊಡಗಿದವು. ಇದರಿಂದ ಸ್ಫೂರ್ತಿಗೊಂಡ ಜೂಜುಗಾರರು ಆತ್ಮವಿಶ್ವಾಸದಿಂದಲೇ ಐವತ್ತು ಸಾವಿರ ತಂದರು. ಅದೈವತ್ತು ಇದೈವತ್ತು ಒಟ್ಟು ಒಂದು ಲಕ್ಷವನ್ನು ಮೂರನೆ ವ್ಯಕ್ತಿ ಕೈಗಿತ್ತು, ಫಲಿತಾಂಶದ ದಿನ ಪಾರ್ಟಿ ಮಾಡಲು ಒಂದು ಸಾವಿರ ತೆಗೆದಿರಿಸಿ, ಆದಿನ ಮದ್ಯದಂಗಡಿ ಬಂದ್ ಆಗುವ ಅಪಾಯವನ್ನ ಗ್ರಹಿಸಿ ಕೂಡಲೇ ಒಂದು ಸಾವಿರಕ್ಕೆ ಎಂಸಿ ಬ್ರಾಂಡಿ ತಂದಿರಿಸಲು ಹೇಳಿದೆವು. ನಿಖಿಲ್ ಗೆಲ್ಲುವ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡುವವರನ್ನು ಕಂಡು ದಿಗಿಲಾಯ್ತು, ಅವರ ಪ್ರಕಾರ ನೂರಾರು ಬೂತಿನಲ್ಲಿ ನಮ್ಮ ಏಜೆಂಟರೇ ಇರಲಿಲ್ಲ. ಜೊತೆಗೆ ಕುಮಾರಣ್ಣ ಕೆ.ಆರ್.ಎಸ್‍ನಲ್ಲಿ ಬೀಡುಬಿಟ್ಟು ಪುಡಿ ಜಾತಿ ಲೀಡರುಗಳನ್ನೆಲ್ಲಾ ಕೊಂಡಿದ್ದಾರಂತೆ, ಈ ಪೈಕಿ ಕುರುಬರ ಮತಗಳನ್ನ ಅಟ್ಟಿಕೊಂಡು ಬಂದು ಬೂತನ್ನ ತುಂಬಿಸುತ್ತೇನೆಂದು ಹೇಳಿದವನೊಬ್ಬನಿಗೆ ಕುಮಾರಣ್ಣ ಹತ್ತು ಲಕ್ಷ ಕೊಟ್ಟನೆಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸಾಕ್ಷಿಯೊದಗಿಸುವಂತೆ ಇಪ್ಪತೈದು ಲಕ್ಷದ ಕಾರಿನಲ್ಲಿ ಬಂದ ಆತ ನಿಖಿಲ್‍ಗೆ ಓಟು ಮಾಡಿ ಎಂದು ಬೈಸಿಕೊಂಡು ಹೋಗಿದ್ದ.

ಇದೆಲ್ಲಕ್ಕಿಂತ ನಮಗೆ ಇನ್ನ ದಿಗಿಲು ಹುಟ್ಟಿಸಿದ್ದು, ಸುಮಲತ ಗೆದ್ದು ಬಿಜೆಪಿ ಸೇರುತ್ತಾಳೆಂದು ಭಾವಿಸಿರುವ ಮುಸ್ಲಿಮರು ನಿಖಿಲನಿಗೆ ಓಟು ಮಾಡಿದ್ದಾರೆಂಬುದು, ಅಂತೂ ದಶದಿಕ್ಕಿನಿಂದ ನಮಗೆ ಅಶುಭ ಸುದ್ದಿಗಳೇ ಬರತೊಡಗಿದವು. ಇಂತಹ ಸಮಯದಲ್ಲಿ ನಾನು ಕೇವಲ ಐದು ಸಾವಿರ ಬೆಟ್ ಕಟ್ಟಿದ್ದೆ. ಚುನಾವಣೆ ಫಲಿತಾಂಶದ ವರೆಗೂ ನಾನು ಊರಲ್ಲೇ ಇದ್ದುಬಿಟ್ಟೆ. ಇಲ್ಲಿಗೆ ಪತ್ರಿಕೆಗಳು ಬರುವುದಿಲ್ಲ, ಹಾಗೆ ಟಿವಿ ನೋಡಿ ತಿಂಗಳ ಮೇಲಾಯ್ತು. ಹಳ್ಳಿಗಳು ಇನ್ನ ಉಳಿಸಿಕೊಂಡಿರುವ ಶಕ್ತಿಯಲ್ಲಿ ಪೇಪರ್, ಟಿವಿ ಬೇಕೆನಿಸುವುದಿಲ್ಲ. ಆದರೆ ಜನ ಸಮೂಹದ ಜೊತೆ ಮಾತನಾಡಲು ಸಾಧ್ಯವೇ ಇಲ್ಲ. ಬಾಯಿ ಬಿಟ್ಟರೆ ಸಾಕು ಮೊರೆಯುತ್ತಾರೆ. ಯಾರು ಏನನ್ನ ಕೇಳಿಸಿಕೊಳ್ಳುವುದಿಲ್ಲ. ನಮ್ಮ ಮನೆಯಲ್ಲೇ ಹೆಬ್ಬೆಟ್ಟಿನ ಸಹೋದರನೊಬ್ಬ ರಾಜಕಾರಣದ ಬಗ್ಗೆ ನನಗೇ ಹೇಳಲು ಬರುತ್ತಾನೆ. ಅವನ ಲೆಕ್ಕದಲ್ಲಿ ನಾನು ಕಿರಿಯ ಅವನು ಹಿರಿಯ ಅದಕ್ಕಾಗಿ ಕೇಳಿಸಿಕೊಳ್ಳಬೇಕಂತೆ!

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು. ಒಂಚೂರು ನಿಖಿಲ್ ಮುಂದೆ ಹೋದ ಸುದ್ದಿಯಿಂದ ಅವನ ಅಭಿಮಾನಿಗಳು ಅವನಂತೆಯೇ ಆಡತೊಡಗಿದರು. ಒಂದಿಷ್ಟು ಆತಂಕವಾಯ್ತು, ನಮ್ಮ ನಾಗಮಂಗಲ ಕ್ಷೇತ್ರದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ನಲವತ್ತೇಳು ಸಾವಿರ ಲೀಡು ಬಂದಿತ್ತು ಅದನ್ನ ಹತ್ತಿಕ್ಕಿ ಕನಿಷ್ಟ ಹತ್ತು ಸಾವಿರ ನಿಖಿಲ್ ಲೀಡ್ ಬರಬಹುದೆಂಬುದು ನಮ್ಮ ಲೆಕ್ಕಾಚಾರವಾಗಿತ್ತು. ಅದು ನಿಜವಾಯ್ತು. ಇದು ಬಿಟ್ಟರೆ ಜಿಲ್ಲೆಯ ಇನ್ನಾವ ತಾಲ್ಲೂಕು ಜೆಡಿಎಸ್‍ಗೆ ಲೀಡ್ ಕೊಡಲಿಲ್ಲ. ನಮ್ಮೂರಿಗೆ ಸುಮಲತ ಲಕ್ಷ ಲೀಡ್‍ನಲ್ಲಿ ಗೆದ್ದಳು ಎಂಬ ಸುದ್ದಿ ತಲುಪಿದಾಗ, ಜನ ಊರ ಮುಂದಿದ್ದರು. ಅದೇ ಸಮಯಕ್ಕೆ ಮಳೆ ಆರಂಭವಾಯ್ತು, ಜನ ಮಳೆಯಲ್ಲೇ ಕುಣಿಯತೊಡಗಿದರು. ಅದು ರಂಗದ ಕುಣಿತ, ತಮ್ಮಟೆ ಚಿಕ್ಕಣ್ಣ ಮಾಯಪ್ಪ ಇವರೆಲ್ಲಾ ತಮಟೆ ಬಡಿಯತೊಡಗಿದಂತೆ ಒಂದು ಗಂಟೆ ಸುರಿದ ಮಳೆಯಲ್ಲಿ ಹೊಸ ತಲೆಮಾರಿನ ಹುಡುಗರು ಕುಣಿಯತೊಡಗಿದರು. ಆಶ್ಚರ್ಯವೆಂದರೆ, ಈ ಕುಣಿತದ ಸಂಭ್ರಮ ನೋಡಲಾಗದ ನಿಖಿಲ್ ಕಡೆಯವರೂ ಬಂದು ಕುಣಿಯತೊಡಗಿದರು. ಈ ಸಮ್ಮಿಲನಕ್ಕೆ ಜನ ಹರ್ಷೋದ್ಘಾರ ಮಾಡಿ ಸೀಟಿ ಹೊಡೆದರು. ವಾಸ್ತವವಾಗಿ ದೇವೇಗೌಡ ಮತ್ತು ಕುಮಾರಸ್ವಮಿಯನ್ನು ಬೆಂಬಲಿಸಿದ್ದವರು ಸ್ವಾಭಿಮಾನ ಕಳೆದುಕೊಂಡವರಂತೆ ಮುಖರಹಿತರಾಗಿದ್ದರು. ಈಗ ಅವರ ಸಂಭ್ರಮ ನೋಡಿದರೆ ಅವರಿಗೂ ಸುಮಲತ ಗೆಲ್ಲಬೇಕಿತ್ತೇನೋ ಅನ್ನಿಸುತ್ತದೆ.

ಇದೇನೆ ಆದರು ಸುಮಲತ ಮೂರು ದಾಖಲೆ ಮಾಡಿದ್ದಾರೆ. ಅದೇನೆಂದರೆ 1. ಮಂಡ್ಯದಿಂದ ಆಯ್ಕೆಯಾದ ಮೊದಲ ಪಕ್ಷೇತರ ಅಭ್ಯರ್ಥಿ. 2. ರಾಜ್ಯದ ಕಳೆದ 52 ವರ್ಷದಲ್ಲಿ ಮೊದಲ ಬಾರಿಗೆ ಸ್ವತಂತ್ರವಾಗಿ ಆಯ್ಕೆಯಾದ ಮಹಿಳಾ ಅಭ್ಯರ್ಥಿ. 3. ದೇಶದ ಮಹಿಳಾ ಪಕ್ಷೇತರ ಸದಸ್ಯೆ. ಇರಲಿ ನನ್ನ ಜೊತೆ ಬೆಟ್ ಕಟ್ಟಿದ್ದವನು ಪತ್ತೆಯಿಲ್ಲ. ನಾನು ಊರಿಂದ ಬಂದ ಮೇಲೆ ಊರಿಗೆ ಬಂದಿರಬಹುದು. ನಮ್ಮ ಸ್ವಾಭಿಮಾನ ಗೆದ್ದಿತಲ್ಲ ಅಷ್ಟೇ ಸಾಕು.

ಇದನ್ನು ಓದಿರಿ ಮಂಡ್ಯದಲ್ಲಿ ನಾ ಕಂಡದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...