Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....