Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...