Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...