Homeಎಕಾನಮಿ'ಭಾರತದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ': ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ

‘ಭಾರತದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ’: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಭಾರತದ ಆರ್ಥಿಕ ಪರಿಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ ಎಂಬುದು ಅರ್ಥಶಾಸ್ತ್ರಜ್ಞ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪಡೆದಿರುವ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಯವರು ಹೊರಹಾಕಿರುವ ಆತಂಕ.

ಅಕ್ಟೋಬರ್ 9ರಂದು ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತದ ಆರ್ಥಿಕತೆ ಕುಸಿತ ಅಪಾಯದ ಮಟ್ಟ ತಲುಪಿದೆ. ಅಲ್ಲದೇ ಸರಕು ಮತ್ತು ಸೇವಾ ತೆರಿಗೆ, ನೋಟು ಅಮಾನ್ಯೀಕರಣ ನೀತಿಗಳು ಹೆಚ್ಚು ಸಮಸ್ಯೆ ತಂದೊಡ್ಡಿವೆ. ಬೇಡಿಕೆಯ ಮಟ್ಟ ಕುಸಿದಿದೆ. ನನ್ನ ಸಹವರ್ತಿಗಳೊಂದಿಗೆ ಹೂಡಿಕೆ ಬಗ್ಗೆ ಮಾತನಾಡಿದಾಗ ಹೂಡಿಕೆ ಮಾಡುವುದು ಅಸಾಧ್ಯ. ಇದರಿಂದ ಸಾಕಷ್ಟು ತೊಂದರೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದ್ದಾರೆ.

ಯಾರೂ ಸಹ ಹೆಚ್ಚು ದಿನಗಳವರೆಗೆ ಕಾಯುವುದಿಲ್ಲ. ಒಂದೇ ವಿಷಯಕ್ಕೆ ಅಂಟಿಕೊಂಡು ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ. ಪಿಎಂಒ ಜತೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ ಎಂದು ಅಭಿಜಿತ್ ಟೀಕಿಸಿದ್ದಾರೆ. ನಾಲ್ಕು ವರ್ಷಗಳಲ್ಲಿ ಸರಾಸರಿ ಬಳಕೆ ಕಡಿಮೆಯಾಗಿದೆ. ಹಣದುಬ್ಬರ ಸಮಸ್ಯೆ ಸರಿಪಡಿಸಿದ ನಂತರವೂ ಸಮಸ್ಯೆ ಕಡಿಮೆಯಾಗಿಲ್ಲ. 70ರ ದಶಕಕ್ಕಿಂತಲೂ ಈ ಬಾರಿಯ ಆರ್ಥಿಕ ಕುಸಿತ ಹೆಚ್ಚು ಗಂಭೀರವಾಗಿದೆ ಎಂದು ಟೀಕಿಸಿದ್ದಾರೆ.

ಇನ್ನು ಶೇ.75ರಷ್ಟು ಹೂಡಿಕೆಯ ಪ್ರಮಾಣ ಸಂಪೂರ್ಣವಾಗಿ ಕುಸಿದಿದೆ. ರಫ್ತು ಪ್ರಕ್ರಿಯೆಯಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಇದು ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎಂದು ಹೇಳಬಹುದು. ಆದರೆ ನಾವೇ ಬಿಕ್ಕಟ್ಟಿನಲ್ಲಿದ್ದೇವೆ. ಚಟುವಟಿಕೆಯಿಂದಿದ್ದ ಸಂಸ್ಥೆಗಳು ಈಗ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಪ್ರಮುಖವಾಗಿ 2016ರಲ್ಲಿ ನಡೆದ ನೋಟು ನಿಷೇಧ ಮತ್ತು ಜಿಎಸ್ ಟಿ ಅನುಷ್ಠಾನ ಆರ್ಥಿಕತೆಯ ಕುಸಿತಕ್ಕೆ ಕಾರಣ. ಇದರಿಂದ ಬೇಡಿಕೆ ಮತ್ತು ಹೂಡಿಕೆ ಸಮಸ್ಯೆ ಹೆಚ್ಚಿದೆ. ಹಣದುಬ್ಬರ ತಗ್ಗಿಸಲು ಸಾಕಷ್ಟು ಪ್ರಯತ್ನಿಸಲಾಗುತ್ತಿದೆಯಾದ್ರೂ ಇದು ಋಣಾತ್ಮಕ ಪರಿಣಾಮ ಬೀರುತ್ತಿದೆ. ಹೀಗಾಗಿಯೇ ಆರ್ ಬಿಐ ಮಾಜಿ ಗವರ್ನರ್ ಕೂಡ ಭಾರತದ ಆರ್ಥಿಕತೆಯ ಅಸ್ವಸ್ಥತೆಯ ಲಕ್ಷಣಗಳ ಬಗ್ಗೆ ಹೇಳಿದ್ದರು. ಭಾರತ ತನ್ನ ಆರ್ಥಿಕ ಮಾರ್ಗವನ್ನು ಕಳೆದುಕೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...