Homeಮುಖಪುಟ"ಸೈಂಟಿಫಿಕ್ ಪೆಪ್ಪರಮಿಂಟ್" ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

“ಸೈಂಟಿಫಿಕ್ ಪೆಪ್ಪರಮಿಂಟ್” ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

- Advertisement -
- Advertisement -

ಹೊಸ ಶಿಕ್ಷಣ ನೀತಿಯ ಹಿನ್ನೆಲೆಯಲ್ಲಿ ಕೇಂದ್ರದ ಸಾಂಸ್ಕೃತಿಕ ವಕ್ತಾರರನ್ನು ಸಂದರ್ಶಿಸಲಾಯಿತು. ಈ ದೇಶದ ಮುಂದಿನ ಐವತ್ತು ವರ್ಷಗಳ ಶಿಕ್ಷಣ, ಸಾಂಸ್ಕೃತಿಕ ನಡೆ ಕುರಿತ ಕಾಣ್ಕೆಯನ್ನು ವಕ್ತಾರರು ಹಂಚಿಕೊಂಡರು.

ಅದರ ಆಯ್ದ ಭಾಗವನ್ನು ಇಲ್ಲಿ ಪ್ರಕಟಿಸಲಾಗಿದೆ.

ನಾನು: ಹೊಸ ಶಿಕ್ಷಣ ನೀತಿಯ ಒತ್ತು ಏನು?

ಸಾಂಸ್ಕೃತಿಕ ವಕ್ತಾರ: ನೋಡಿ ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ಸಂಸ್ಕೃತಿಯನ್ನು ನಾಶಮಾಡುವ ಕೆಲಸವನ್ನು ನೆಹರೂ ಮತ್ತು ಎಡಚರು ಮಾಡಿದ್ದಾರೆ . ನಾವು ಅದನ್ನು ತಿದ್ದಿ ಭಾರತದ ಭವ್ಯ ಸಂಸ್ಕೃತಿಯನ್ನು ಸ್ಥಾಪಿಸಬೇಕಾಗಿದೆ. ಭಾರತ ವಿಶ್ವಗುರುವಾಗಲು ಇದು ಬುನಾದಿ.

ನಾನು: ಇದನ್ನು ಹೇಗೆ ಸಾಧಿಸಲಾಗುತ್ತದೆ?

ಸಾಂವ: ಈಗ ನೋಡಿ ಮೊನ್ನೆ ಗ್ರಹಣ ಆಯಿತು. ಎಡಚರು ಇದನ್ನು ಖಗೋಳ ಶಾಸ್ತ್ರೀಯ ಘಟನೆ ಅನ್ನುತ್ತಾರೆ. ಆದರೆ ನಮ್ಮ ಹಳ್ಳಿಹಳ್ಳಿಗಳಲ್ಲೂ ಇದನ್ನು ಸಾವಿರಾರು ವರ್ಷಗಳಿಂದ ಗಮನಿಸಿದ್ದಾರೆ. ಇದರ ಪರಿಣಾಮಗಳನ್ನು ನಿವಾರಿಸಲು ಪರಿಹಾರ ಕ್ರಮ ಮಾಡುತ್ತಾರೆ. ಹಾಗಿದ್ದರೆ ಅವರು ಅಜ್ಞಾನಿಗಳೇ? ಉದಾ: ಗ್ರಹಣ ಕಾಲದಲ್ಲಿ ವಿಕಿರಣ ಪರಿಣಾಮ ಆಗುತ್ತೆ. ಅದಕ್ಕೇ ಮಕ್ಕಳನ್ನು ತಿಪ್ಪೆಯಲ್ಲಿ ಹುಗಿದಿಡುವ ಸಂಪ್ರದಾಯ ಇದೆ. ಯಾಕೆ ಹೇಳಿ? ಗೋವಿನ ಸೆಗಣಿಗೆ ವಿಕಿರಣವನ್ನು ತಡೆಯುವ ಶಕ್ತಿ ಇದೆ.

ನಾನು: ಅಂದರೆ?

ಸಾಂ ವ: ಅಂದರೆ ನಾವು ಈ ಬಗ್ಗೆ ವಿಶೇಷ ಸಂಶೋಧನೆಗೆ ಅನುದಾನ ನೀಡುತ್ತೇವೆ. ಮಾತ್ರವಲ್ಲ ಮುಂದಿನ ವರ್ಷಗಳಲ್ಲಿ ಗ್ರಹಣ ಕಾಲದಲ್ಲಿ ಅಂಗನವಾಡಿ ಮತ್ತು ಶಾಲಾಮಕ್ಕಳನ್ನು ಶಾಲಾ ಆವರಣದಲ್ಲೇ ತಿಪ್ಪೆಯಲ್ಲಿ ಹೂತಿಡುವ ಬೃಹತ್ ರಾಷ್ಟ್ರೀಯ ಕಾರ್ಯಕ್ರಮವನ್ನು ಚಾಲೂ ಮಾಡಲಾಗುವುದು. ವಿದೇಶಗಳಲ್ಲೂ ಇದರ ವೈಜ್ಞಾನಿಕ ಮಹತ್ವವನ್ನು ಸಾರಲೂ ವಿದೇಶದಲ್ಲಿರುವ ಭಾರತೀಯ ಮಕ್ಕಳನ್ನು ಬಳಸಿ ಅಲ್ಲಿ ಪ್ರಾತ್ಯಕ್ಷಿಕೆ ಮಾಡಿ ವಿದೇಶಗಳಲ್ಲೂ ನಮ್ಮ ಆಚರಣೆಯ ಮಹತ್ವವನ್ನು ಪ್ರಚುರಪಡಿಸಲಾಗುವುದು.

ನಾನು : ಮತ್ತೆ ಈ ದರ್ಭೆಗೆ ವಿಶೇಷ ಮಹತ್ವ ಇದೆ ಎಂದು ಹೇಳ್ತಿದ್ರು..

ಸಾಂವ: ದರ್ಭೆ? ಅದು ಜಗತ್ತಿನಲ್ಲೇ ವಿಶೇಷ. ಅದರ ಒಂದು ತುಂಡು ಹಾಕಿದರೂ ವಿಕಿರಣ ತಾಗೋದಿಲ್ಲ. ಅಷ್ಟೇಕೆ, ನಾವೀಗ ದರ್ಭೇಯನ್ನೇ ಉಪಯೋಗಿಸಿ ಬೆನ್ನಟ್ಟುವ ಕ್ಷಿಪಣಿ ತಯಾರು ಮಾಡುವ ತಂತ್ರಜ್ಞಾನದ ಸಂಶೋಧನೆ ಆರಂಭಿಸಿದ್ದೇವೆ

ನಾನು: ಅದು ಹೇಗೆ?

ಸಾಂವ: ಅಯ್ಯೋ, ರಾಮಾಯಣದಲ್ಲಿ ಶ್ರೀರಾಮ ದೇವರು ದರ್ಭೆಗೆ ಮಂತ್ರ ಆವಾಹನೆ ಮಾಡಿ ಕಾಕಾಸುರನನ್ನು ಬೆನ್ನಟ್ಟಲಿಲ್ಲವೇ? ಹಾಗೇ ಶತ್ರು ಕ್ಷಿಪಣಿ/ ವಿಮಾನದ ಶಾಖವನ್ನೇ ಬೆನ್ನು ಹತ್ತಿ ಅದನ್ನು ನಾಶ ಮಾಡೋದು. ದರ್ಭೆ ಸಣ್ಣಕ್ಕೆ ಇರುವ ಕಾರಣ ಅದು ರಾಡಾರಿನಲ್ಲೂ ಕಾಣಿಸೋದಿಲ್ಲ. ಅದಕ್ಕೆ ಆಗ್ನೇಯಾಸ್ತ, ಬ್ರಹ್ಮಾಸ್ತ್ರದಂಥಾ ಮಂತ್ರವನ್ನು ಆವಾಹಿಸಲು ವಿಶೇಷ ವಿಪ್ರ ಪುರೋಹಿತರನ್ನು ಸೈನ್ಯ ನಿಯೋಜಿಸಲಿದೆ.

ನಾನು: ಅದ್ಭುತ. ಇದನ್ನು ಜಗತ್ತಿಗೆ ಹೇಳಬೇಕು!!

ಸಾಂವ: ( ನಕ್ಕು) ನೋಡಿ.. ಇದು ಡಿಫೆನ್ಸ್ ಸೀಕ್ರೆಟ್. ಇದನ್ನು ನಾವು ಯಾರಿಗೂ ಹೇಳೋದಿಲ್ಲ ಹ್ಹ.. ಹ್ಹಾ..

ನಾನು: ಅದ್ಭುತ.. ಇನ್ನು ಇಂಥಾ ಎಷ್ಟು ಯೋಜನೆಗಳಿದಾವೆ?

ಸಾಂವ: ತುಂಬಾ ಇದೆ. ಆದರೆ ಕೆಲವನ್ನು ನಾವು ಗುಪ್ತವಾಗಿ ಮಾಡಬೇಕಿದೆ. ಉದಾ: ನಾವು ಈಗಾಗಲೇ ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೇ ಮೆದುಳು ಮತ್ತು ಹೃದಯವನ್ನು ಬದಲಾಯಿಸುವ ಶಸ್ತ್ರಚಿಕಿತ್ಸೆಯನ್ನು ಗುಂಪು ಗುಂಪಿಗೆ ಮಾಡಿದ್ದೇವೆ. ಇದರಲ್ಲಿ ಮೆದುಳನ್ನು ಮೆತ್ತಗೆ ಮಾಡಿ ವಿಧೇಯತೆಯನ್ನು ಮುದ್ರಿಸುವುದನ್ನು ಮಾಡಲಾಗುತ್ತದೆ. ಇನ್ನು ಹೃದಯದ್ದು ಸ್ವಲ್ಪ ಬೇರೆ. ಅದು ಮೃದು ಇದ್ದರೆ ಕಷ್ಟ. ಅದಕ್ಕೇ ಕೆಲವು ಮೂಲಿಕೆ ಬಳಸಿ ಅದು ಕಲ್ಲಾಗುವ ತರ ಮಾಡುವುದು. ರಕ್ತಪರಿಚಲನೆ ಬಿಟ್ಟು ಬೇರೆ ಭಾವನೆಗಳ ಕೆಲಸ ಹೃದಯಕ್ಕೆ ಇರೋದು ವೇಸ್ಟ್ .

ನಾನು: ಅದ್ಭುತ.. ಇದು ಯಾವಾಗ ಚಾಲೂ ಆಗುತ್ತೆ?

ಸಾಂವ: ಚಾಲೂ? ಎಲ್ಲಿದ್ದೀರಿ ನೀವು..? ಈಗ ನಮ್ಮ ಪರವಾಗಿ ಮಾತಾಡಿ, ಬೀದಿಗಿಳಿದು ಗಲಾಟೆ ಮಾಡೋರು ಯಾರು ಅಂದ್ಕೊಂಡ್ರಿ? ಅದು ಈಗಾಗಲೇ ಲಕ್ಷಾಂತರ ಮಂದಿಗೆ ಮಾಡಿಯಾಗಿದೆ..

ನಾನು: ಅದ್ಭುತ: ಈ ಒಟ್ಟಾರೆ ನೀತಿಗೆ ಏನೆಂದು ಕರೆಯಲಾಗುತ್ತೆ?

ಸಾಂವ: ನೋಡಿ ನೆಹರೂ ಇದನ್ನು ಸೈಂಟಿಫಿಕ್ ಟೆಂಪರಮೆಂಟ್ ಅಂತ ಕರಿತಿದ್ರು. ಎಂಥಾ ಟೆಂಪರ್? ಅದಕ್ಕೇ ನಾವಿದನ್ನು ಪೆಪ್ಪರಮಿಂಟ್.. ಸೈಂಟಿಫಿಕ್ ಪೆಪ್ಪರಮಿಂಟ್ ಎಂದು ಕರೆಯುತ್ತೇವೆ. ಪೆಪ್ಪರಮಿಂಟ್ ಅಂದ್ರೇನು? ಗೊತ್ತಲ್ಲ. ಮಕ್ಕಳಿಗೆ ಇಷ್ಟ. ಅದಕ್ಕೇ ಈ ಯೋಜನೆಗೆ ಆ ಹೆಸರು

ನಾನು: ಸೂಪರ್ ಸಾರ್… ಅಭಿನಂದನೆಗಳು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...