Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....