Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...