Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...