Homeಕರ್ನಾಟಕಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಸೇರಿದಂತೆ ಇದುವರೆಗೆ ಒಟ್ಟು 1361 ಕ್ಷೇತ್ರಗಳಲ್ಲಿ ಕಾಂಗ್ರೆಸ್ 562 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 406 ಕಡೆ ಗೆಲುವಿನ ನಗೆ ಬೀರಿದೆ. ಇನ್ನು ಜೆಡಿಎಸ್ 202 ಬಿಎಸ್‍ಪಿ 04, ಸಿಪಿಎಂ 02 ಮತ್ತು ಇತರರು 172 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ಕೆಲವು ದಿನಗಳಷ್ಟೇ ಆಗಿದೆ. ಬಿಜೆಪಿ ಭರ್ಜರಿ ಜಯದ, ನೂತನ ಸಚಿವರ ಪ್ರಮಾಣ ವಚನದ ಸಂಭ್ರಮದಲ್ಲಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನು ಸೋಲಿನ ಸುಳಿಯಿಂದ ಹೊರಬಂದಿಲ್ಲ. ಇದರ ನಡುವೆಯೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದಿದ್ದು ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಬಿಜೆಪಿ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಮುಕ್ತ ಭಾರತಕ್ಕೆ ಎರಡೇ ಗೇಣು ಎಂಬ ಖುಷಿಯಲ್ಲಿರುವಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅವರಿಗೆ ಸಣ್ಣ ಮಟ್ಟಿಗಿನ ಶಾಕ್ ಕೊಟ್ಟಾಂತಾಗಿದೆ.

ಒಟ್ಟಾರೆ ನೋಡಿದರೆ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಸಹ ಗಮನಾರ್ಹ ಸಾಧನೆ ಮಾಡಿದೆ. ಇದು ಒಂದು ರೀತಿಯಲ್ಲಿ ಸಾಮಾನ್ಯ ಸಂಗತಿಯೇ ಹೌದು ಇದರಲ್ಲಿ ಆಶ್ಚರ್ಯಪಡಬೇಕಾದುದ್ದೇನು ಇಲ್ಲ. ಏಕೆಂದರೆ ಜನ ಯೋಚಿಸುವ, ಮತ ಹಾಕುವ ರೀತಿಯೇ ಹಾಗೆ.

ರಾಜಸ್ಥಾನ ಅಸೆಂಬ್ಲಿಯಲ್ಲಿ ಒಟ್ಟು 199 ಸ್ಥಾನಗಳಲ್ಲಿ ಹೆಚ್ಚು ಕಮ್ಮಿ 100 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಒಟ್ಟು 25 ಕ್ಷೇತ್ರಗಳಲ್ಲಿ ಒಂದನ್ನು ಗೆಲ್ಲಲಾಗಲಿಲ್ಲ. ಗುಜರಾತ್, ಮಧ್ಯಪ್ರದೇಶದಲ್ಲಿಯೂ ಹೆಚ್ಚು ಕಡಿಮೆ ಅದೇ ಪರಿಸ್ಥಿತಿ ಇದೆ.

2014ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ 7ಕ್ಕೆ 7ಸೀಟುಗಳನ್ನು ಬಿಜೆಪಿ ಗೆದ್ದ 8 ತಿಂಗಳಲ್ಲೇ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 67ನ್ನು ಗೆದ್ದುಕೊಂಡು ಅಪೂರ್ವ ಸಾಧನೆ ಮಾಡಿತು. ಅಲ್ಲಿ ಬಿಜೆಪಿ ಕೇವಲ 03 ಸ್ಥಾನಕಷ್ಟೇ ಸೀಮಿತವಾಯಿತು. ಮತ್ತೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅದೇ ಸಾಧನೆ ಮಾಡಿ 7ಕ್ಕೆ 7ಸೀಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಇನ್ನು 8 ತಿಂಗಳಲ್ಲೇ ವಿಧಾನಸಭಾ ಚುನಾವಣೆಯಿದೆ. ಅಲ್ಲಿಯ ಮತದಾರರು ವಿಧಾನಸಭೆಯ ಚುನಾವಣೆಯಲ್ಲಿ ಆಪ್ ಗೆ ಮತ ಹಾಕುತ್ತೇವೆ, ಆದರೆ ಲೋಕಸಭೆಯಲ್ಲಿ ಮಾತ್ರ ನಮ್ಮ ಮತ ಬಿಜೆಪಿಗೆ ಎಂದು ಬಹಿರಂಗವಾಗಿ ಹೇಳುತ್ತಾರೆ.

ಪ್ರತಿ ಚುನಾವಣೆಗಳಿಗೂ ವ್ಯತ್ಯಾಸವಿರುತ್ತದೆ ಮತ್ತು ಬೇರೆ ಬೇರೆ ಸಂದರ್ಭಕ್ಕನುಗುಣವಾಗಿ ಚುನಾವಣೆಗಳಿಗೆ ಮತದಾರರು ಪ್ರತಿಕ್ರಿಯಿಸುತ್ತಾರೆ. ಲೋಕಸಭಾ ಚುನಾವಣೆ ರಾಷ್ಟ್ರೀಯ ಚುನಾವಣೆಯಾದ್ದರಿಂದ ಜನ ಅಲ್ಲಿನ ಬಲಿಷ್ಠ ನಾಯಕತ್ವ, ಅವರ ಘೋಷಣೆಗಳಿಗೆ ಮಾರು ಹೋಗುತ್ತಾರೆ. ವಿಧಾನ ಸಭಾ ಚುನಾವಣೆಗಳಲ್ಲಿ ರಾಜ್ಯದ ಹಿತಾಸಕ್ತಿಗೆ ಯಾರು ಪೂರಕ ಎಂಬುದರ ಜೊತೆಗೆ ಚುನಾವಣೆಗಳು ನಡೆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ. ಇಲ್ಲಿ ಪರಸ್ಪರರ ಸಂಬಂಧಗಳು, ಜಾತಿ, ಹಣ, ಪ್ರಭಾವ ಕೆಲಸ ಮಾಡುತ್ತದೆ.

ಇನ್ನು ಕೆಲವು ಮಾಧ್ಯಮಗಳು ಬೆಳಿಗ್ಗೆ ಇಂದಿನ ಫಲಿತಾಂಶ ತೋರಿಸಲು ನಿರಾಸಕ್ತಿ ವಹಿಸಿದ್ದವು. ಬೆಳಿಗ್ಗೆ ಸ್ಕ್ರೋಲ್ ಗಳಲ್ಲಿ ಈ ಸುದ್ದಿ ಕಾಣಿಸಿಕೊಂಡರು, ಕಾಂಗ್ರೆಸ್ ಹೆಚ್ಚು ಸೀಟು ಗಳಿಸುತ್ತಿದ್ದಂತೆ ನಿಧಾನಕ್ಕೆ ಸುಮ್ಮನಾಗಿವೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಫಲಿತಾಂಶದಿಂದ ವಿಶ್ವಾಸ ಪಡೆದುಕೊಂಡು ನಮ್ಮ ಕಾಲ ಮುಗಿದಿಲ್ಲ ಎಂದು ಉಚ್ಛರಿಸಿದ್ದಾರೆ. ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆದರೆ ಬಿಜೆಪಿ ಸೋಲುತ್ತದೆ. ಇವಿಎಂನಲ್ಲಿ ಮತದಾನ ನಡೆದರೆ ಬಿಜೆಪಿಯೇ ಗೆಲ್ಲುತ್ತದೆ ಹಾಗಾಗಿ ಇವಿಎಂ ಬ್ಯಾನ್ ಮಾಡಬೇಕು ಎಂಬ ವಾದವೂ ಸೋಷಿಯಲ್ ಮಿಡೀಯಾದಲ್ಲಿ ಜೋರಾಗಿ ಕೇಳಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...