Homeಕರ್ನಾಟಕಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಸೇರಿದಂತೆ ಇದುವರೆಗೆ ಒಟ್ಟು 1361 ಕ್ಷೇತ್ರಗಳಲ್ಲಿ ಕಾಂಗ್ರೆಸ್ 562 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 406 ಕಡೆ ಗೆಲುವಿನ ನಗೆ ಬೀರಿದೆ. ಇನ್ನು ಜೆಡಿಎಸ್ 202 ಬಿಎಸ್‍ಪಿ 04, ಸಿಪಿಎಂ 02 ಮತ್ತು ಇತರರು 172 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ಕೆಲವು ದಿನಗಳಷ್ಟೇ ಆಗಿದೆ. ಬಿಜೆಪಿ ಭರ್ಜರಿ ಜಯದ, ನೂತನ ಸಚಿವರ ಪ್ರಮಾಣ ವಚನದ ಸಂಭ್ರಮದಲ್ಲಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನು ಸೋಲಿನ ಸುಳಿಯಿಂದ ಹೊರಬಂದಿಲ್ಲ. ಇದರ ನಡುವೆಯೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದಿದ್ದು ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಬಿಜೆಪಿ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಮುಕ್ತ ಭಾರತಕ್ಕೆ ಎರಡೇ ಗೇಣು ಎಂಬ ಖುಷಿಯಲ್ಲಿರುವಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅವರಿಗೆ ಸಣ್ಣ ಮಟ್ಟಿಗಿನ ಶಾಕ್ ಕೊಟ್ಟಾಂತಾಗಿದೆ.

ಒಟ್ಟಾರೆ ನೋಡಿದರೆ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಸಹ ಗಮನಾರ್ಹ ಸಾಧನೆ ಮಾಡಿದೆ. ಇದು ಒಂದು ರೀತಿಯಲ್ಲಿ ಸಾಮಾನ್ಯ ಸಂಗತಿಯೇ ಹೌದು ಇದರಲ್ಲಿ ಆಶ್ಚರ್ಯಪಡಬೇಕಾದುದ್ದೇನು ಇಲ್ಲ. ಏಕೆಂದರೆ ಜನ ಯೋಚಿಸುವ, ಮತ ಹಾಕುವ ರೀತಿಯೇ ಹಾಗೆ.

ರಾಜಸ್ಥಾನ ಅಸೆಂಬ್ಲಿಯಲ್ಲಿ ಒಟ್ಟು 199 ಸ್ಥಾನಗಳಲ್ಲಿ ಹೆಚ್ಚು ಕಮ್ಮಿ 100 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಒಟ್ಟು 25 ಕ್ಷೇತ್ರಗಳಲ್ಲಿ ಒಂದನ್ನು ಗೆಲ್ಲಲಾಗಲಿಲ್ಲ. ಗುಜರಾತ್, ಮಧ್ಯಪ್ರದೇಶದಲ್ಲಿಯೂ ಹೆಚ್ಚು ಕಡಿಮೆ ಅದೇ ಪರಿಸ್ಥಿತಿ ಇದೆ.

2014ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ 7ಕ್ಕೆ 7ಸೀಟುಗಳನ್ನು ಬಿಜೆಪಿ ಗೆದ್ದ 8 ತಿಂಗಳಲ್ಲೇ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 67ನ್ನು ಗೆದ್ದುಕೊಂಡು ಅಪೂರ್ವ ಸಾಧನೆ ಮಾಡಿತು. ಅಲ್ಲಿ ಬಿಜೆಪಿ ಕೇವಲ 03 ಸ್ಥಾನಕಷ್ಟೇ ಸೀಮಿತವಾಯಿತು. ಮತ್ತೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅದೇ ಸಾಧನೆ ಮಾಡಿ 7ಕ್ಕೆ 7ಸೀಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಇನ್ನು 8 ತಿಂಗಳಲ್ಲೇ ವಿಧಾನಸಭಾ ಚುನಾವಣೆಯಿದೆ. ಅಲ್ಲಿಯ ಮತದಾರರು ವಿಧಾನಸಭೆಯ ಚುನಾವಣೆಯಲ್ಲಿ ಆಪ್ ಗೆ ಮತ ಹಾಕುತ್ತೇವೆ, ಆದರೆ ಲೋಕಸಭೆಯಲ್ಲಿ ಮಾತ್ರ ನಮ್ಮ ಮತ ಬಿಜೆಪಿಗೆ ಎಂದು ಬಹಿರಂಗವಾಗಿ ಹೇಳುತ್ತಾರೆ.

ಪ್ರತಿ ಚುನಾವಣೆಗಳಿಗೂ ವ್ಯತ್ಯಾಸವಿರುತ್ತದೆ ಮತ್ತು ಬೇರೆ ಬೇರೆ ಸಂದರ್ಭಕ್ಕನುಗುಣವಾಗಿ ಚುನಾವಣೆಗಳಿಗೆ ಮತದಾರರು ಪ್ರತಿಕ್ರಿಯಿಸುತ್ತಾರೆ. ಲೋಕಸಭಾ ಚುನಾವಣೆ ರಾಷ್ಟ್ರೀಯ ಚುನಾವಣೆಯಾದ್ದರಿಂದ ಜನ ಅಲ್ಲಿನ ಬಲಿಷ್ಠ ನಾಯಕತ್ವ, ಅವರ ಘೋಷಣೆಗಳಿಗೆ ಮಾರು ಹೋಗುತ್ತಾರೆ. ವಿಧಾನ ಸಭಾ ಚುನಾವಣೆಗಳಲ್ಲಿ ರಾಜ್ಯದ ಹಿತಾಸಕ್ತಿಗೆ ಯಾರು ಪೂರಕ ಎಂಬುದರ ಜೊತೆಗೆ ಚುನಾವಣೆಗಳು ನಡೆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ. ಇಲ್ಲಿ ಪರಸ್ಪರರ ಸಂಬಂಧಗಳು, ಜಾತಿ, ಹಣ, ಪ್ರಭಾವ ಕೆಲಸ ಮಾಡುತ್ತದೆ.

ಇನ್ನು ಕೆಲವು ಮಾಧ್ಯಮಗಳು ಬೆಳಿಗ್ಗೆ ಇಂದಿನ ಫಲಿತಾಂಶ ತೋರಿಸಲು ನಿರಾಸಕ್ತಿ ವಹಿಸಿದ್ದವು. ಬೆಳಿಗ್ಗೆ ಸ್ಕ್ರೋಲ್ ಗಳಲ್ಲಿ ಈ ಸುದ್ದಿ ಕಾಣಿಸಿಕೊಂಡರು, ಕಾಂಗ್ರೆಸ್ ಹೆಚ್ಚು ಸೀಟು ಗಳಿಸುತ್ತಿದ್ದಂತೆ ನಿಧಾನಕ್ಕೆ ಸುಮ್ಮನಾಗಿವೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಫಲಿತಾಂಶದಿಂದ ವಿಶ್ವಾಸ ಪಡೆದುಕೊಂಡು ನಮ್ಮ ಕಾಲ ಮುಗಿದಿಲ್ಲ ಎಂದು ಉಚ್ಛರಿಸಿದ್ದಾರೆ. ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆದರೆ ಬಿಜೆಪಿ ಸೋಲುತ್ತದೆ. ಇವಿಎಂನಲ್ಲಿ ಮತದಾನ ನಡೆದರೆ ಬಿಜೆಪಿಯೇ ಗೆಲ್ಲುತ್ತದೆ ಹಾಗಾಗಿ ಇವಿಎಂ ಬ್ಯಾನ್ ಮಾಡಬೇಕು ಎಂಬ ವಾದವೂ ಸೋಷಿಯಲ್ ಮಿಡೀಯಾದಲ್ಲಿ ಜೋರಾಗಿ ಕೇಳಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...