Homeಕರ್ನಾಟಕಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಸೇರಿದಂತೆ ಇದುವರೆಗೆ ಒಟ್ಟು 1361 ಕ್ಷೇತ್ರಗಳಲ್ಲಿ ಕಾಂಗ್ರೆಸ್ 562 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 406 ಕಡೆ ಗೆಲುವಿನ ನಗೆ ಬೀರಿದೆ. ಇನ್ನು ಜೆಡಿಎಸ್ 202 ಬಿಎಸ್‍ಪಿ 04, ಸಿಪಿಎಂ 02 ಮತ್ತು ಇತರರು 172 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ಕೆಲವು ದಿನಗಳಷ್ಟೇ ಆಗಿದೆ. ಬಿಜೆಪಿ ಭರ್ಜರಿ ಜಯದ, ನೂತನ ಸಚಿವರ ಪ್ರಮಾಣ ವಚನದ ಸಂಭ್ರಮದಲ್ಲಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನು ಸೋಲಿನ ಸುಳಿಯಿಂದ ಹೊರಬಂದಿಲ್ಲ. ಇದರ ನಡುವೆಯೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದಿದ್ದು ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಬಿಜೆಪಿ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಮುಕ್ತ ಭಾರತಕ್ಕೆ ಎರಡೇ ಗೇಣು ಎಂಬ ಖುಷಿಯಲ್ಲಿರುವಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅವರಿಗೆ ಸಣ್ಣ ಮಟ್ಟಿಗಿನ ಶಾಕ್ ಕೊಟ್ಟಾಂತಾಗಿದೆ.

ಒಟ್ಟಾರೆ ನೋಡಿದರೆ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಸಹ ಗಮನಾರ್ಹ ಸಾಧನೆ ಮಾಡಿದೆ. ಇದು ಒಂದು ರೀತಿಯಲ್ಲಿ ಸಾಮಾನ್ಯ ಸಂಗತಿಯೇ ಹೌದು ಇದರಲ್ಲಿ ಆಶ್ಚರ್ಯಪಡಬೇಕಾದುದ್ದೇನು ಇಲ್ಲ. ಏಕೆಂದರೆ ಜನ ಯೋಚಿಸುವ, ಮತ ಹಾಕುವ ರೀತಿಯೇ ಹಾಗೆ.

ರಾಜಸ್ಥಾನ ಅಸೆಂಬ್ಲಿಯಲ್ಲಿ ಒಟ್ಟು 199 ಸ್ಥಾನಗಳಲ್ಲಿ ಹೆಚ್ಚು ಕಮ್ಮಿ 100 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಒಟ್ಟು 25 ಕ್ಷೇತ್ರಗಳಲ್ಲಿ ಒಂದನ್ನು ಗೆಲ್ಲಲಾಗಲಿಲ್ಲ. ಗುಜರಾತ್, ಮಧ್ಯಪ್ರದೇಶದಲ್ಲಿಯೂ ಹೆಚ್ಚು ಕಡಿಮೆ ಅದೇ ಪರಿಸ್ಥಿತಿ ಇದೆ.

2014ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ 7ಕ್ಕೆ 7ಸೀಟುಗಳನ್ನು ಬಿಜೆಪಿ ಗೆದ್ದ 8 ತಿಂಗಳಲ್ಲೇ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 67ನ್ನು ಗೆದ್ದುಕೊಂಡು ಅಪೂರ್ವ ಸಾಧನೆ ಮಾಡಿತು. ಅಲ್ಲಿ ಬಿಜೆಪಿ ಕೇವಲ 03 ಸ್ಥಾನಕಷ್ಟೇ ಸೀಮಿತವಾಯಿತು. ಮತ್ತೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅದೇ ಸಾಧನೆ ಮಾಡಿ 7ಕ್ಕೆ 7ಸೀಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಇನ್ನು 8 ತಿಂಗಳಲ್ಲೇ ವಿಧಾನಸಭಾ ಚುನಾವಣೆಯಿದೆ. ಅಲ್ಲಿಯ ಮತದಾರರು ವಿಧಾನಸಭೆಯ ಚುನಾವಣೆಯಲ್ಲಿ ಆಪ್ ಗೆ ಮತ ಹಾಕುತ್ತೇವೆ, ಆದರೆ ಲೋಕಸಭೆಯಲ್ಲಿ ಮಾತ್ರ ನಮ್ಮ ಮತ ಬಿಜೆಪಿಗೆ ಎಂದು ಬಹಿರಂಗವಾಗಿ ಹೇಳುತ್ತಾರೆ.

ಪ್ರತಿ ಚುನಾವಣೆಗಳಿಗೂ ವ್ಯತ್ಯಾಸವಿರುತ್ತದೆ ಮತ್ತು ಬೇರೆ ಬೇರೆ ಸಂದರ್ಭಕ್ಕನುಗುಣವಾಗಿ ಚುನಾವಣೆಗಳಿಗೆ ಮತದಾರರು ಪ್ರತಿಕ್ರಿಯಿಸುತ್ತಾರೆ. ಲೋಕಸಭಾ ಚುನಾವಣೆ ರಾಷ್ಟ್ರೀಯ ಚುನಾವಣೆಯಾದ್ದರಿಂದ ಜನ ಅಲ್ಲಿನ ಬಲಿಷ್ಠ ನಾಯಕತ್ವ, ಅವರ ಘೋಷಣೆಗಳಿಗೆ ಮಾರು ಹೋಗುತ್ತಾರೆ. ವಿಧಾನ ಸಭಾ ಚುನಾವಣೆಗಳಲ್ಲಿ ರಾಜ್ಯದ ಹಿತಾಸಕ್ತಿಗೆ ಯಾರು ಪೂರಕ ಎಂಬುದರ ಜೊತೆಗೆ ಚುನಾವಣೆಗಳು ನಡೆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ. ಇಲ್ಲಿ ಪರಸ್ಪರರ ಸಂಬಂಧಗಳು, ಜಾತಿ, ಹಣ, ಪ್ರಭಾವ ಕೆಲಸ ಮಾಡುತ್ತದೆ.

ಇನ್ನು ಕೆಲವು ಮಾಧ್ಯಮಗಳು ಬೆಳಿಗ್ಗೆ ಇಂದಿನ ಫಲಿತಾಂಶ ತೋರಿಸಲು ನಿರಾಸಕ್ತಿ ವಹಿಸಿದ್ದವು. ಬೆಳಿಗ್ಗೆ ಸ್ಕ್ರೋಲ್ ಗಳಲ್ಲಿ ಈ ಸುದ್ದಿ ಕಾಣಿಸಿಕೊಂಡರು, ಕಾಂಗ್ರೆಸ್ ಹೆಚ್ಚು ಸೀಟು ಗಳಿಸುತ್ತಿದ್ದಂತೆ ನಿಧಾನಕ್ಕೆ ಸುಮ್ಮನಾಗಿವೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಫಲಿತಾಂಶದಿಂದ ವಿಶ್ವಾಸ ಪಡೆದುಕೊಂಡು ನಮ್ಮ ಕಾಲ ಮುಗಿದಿಲ್ಲ ಎಂದು ಉಚ್ಛರಿಸಿದ್ದಾರೆ. ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆದರೆ ಬಿಜೆಪಿ ಸೋಲುತ್ತದೆ. ಇವಿಎಂನಲ್ಲಿ ಮತದಾನ ನಡೆದರೆ ಬಿಜೆಪಿಯೇ ಗೆಲ್ಲುತ್ತದೆ ಹಾಗಾಗಿ ಇವಿಎಂ ಬ್ಯಾನ್ ಮಾಡಬೇಕು ಎಂಬ ವಾದವೂ ಸೋಷಿಯಲ್ ಮಿಡೀಯಾದಲ್ಲಿ ಜೋರಾಗಿ ಕೇಳಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...