Homeಕರ್ನಾಟಕಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಸೇರಿದಂತೆ ಇದುವರೆಗೆ ಒಟ್ಟು 1361 ಕ್ಷೇತ್ರಗಳಲ್ಲಿ ಕಾಂಗ್ರೆಸ್ 562 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 406 ಕಡೆ ಗೆಲುವಿನ ನಗೆ ಬೀರಿದೆ. ಇನ್ನು ಜೆಡಿಎಸ್ 202 ಬಿಎಸ್‍ಪಿ 04, ಸಿಪಿಎಂ 02 ಮತ್ತು ಇತರರು 172 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ಕೆಲವು ದಿನಗಳಷ್ಟೇ ಆಗಿದೆ. ಬಿಜೆಪಿ ಭರ್ಜರಿ ಜಯದ, ನೂತನ ಸಚಿವರ ಪ್ರಮಾಣ ವಚನದ ಸಂಭ್ರಮದಲ್ಲಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನು ಸೋಲಿನ ಸುಳಿಯಿಂದ ಹೊರಬಂದಿಲ್ಲ. ಇದರ ನಡುವೆಯೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದಿದ್ದು ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಬಿಜೆಪಿ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಮುಕ್ತ ಭಾರತಕ್ಕೆ ಎರಡೇ ಗೇಣು ಎಂಬ ಖುಷಿಯಲ್ಲಿರುವಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅವರಿಗೆ ಸಣ್ಣ ಮಟ್ಟಿಗಿನ ಶಾಕ್ ಕೊಟ್ಟಾಂತಾಗಿದೆ.

ಒಟ್ಟಾರೆ ನೋಡಿದರೆ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಸಹ ಗಮನಾರ್ಹ ಸಾಧನೆ ಮಾಡಿದೆ. ಇದು ಒಂದು ರೀತಿಯಲ್ಲಿ ಸಾಮಾನ್ಯ ಸಂಗತಿಯೇ ಹೌದು ಇದರಲ್ಲಿ ಆಶ್ಚರ್ಯಪಡಬೇಕಾದುದ್ದೇನು ಇಲ್ಲ. ಏಕೆಂದರೆ ಜನ ಯೋಚಿಸುವ, ಮತ ಹಾಕುವ ರೀತಿಯೇ ಹಾಗೆ.

ರಾಜಸ್ಥಾನ ಅಸೆಂಬ್ಲಿಯಲ್ಲಿ ಒಟ್ಟು 199 ಸ್ಥಾನಗಳಲ್ಲಿ ಹೆಚ್ಚು ಕಮ್ಮಿ 100 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಒಟ್ಟು 25 ಕ್ಷೇತ್ರಗಳಲ್ಲಿ ಒಂದನ್ನು ಗೆಲ್ಲಲಾಗಲಿಲ್ಲ. ಗುಜರಾತ್, ಮಧ್ಯಪ್ರದೇಶದಲ್ಲಿಯೂ ಹೆಚ್ಚು ಕಡಿಮೆ ಅದೇ ಪರಿಸ್ಥಿತಿ ಇದೆ.

2014ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ 7ಕ್ಕೆ 7ಸೀಟುಗಳನ್ನು ಬಿಜೆಪಿ ಗೆದ್ದ 8 ತಿಂಗಳಲ್ಲೇ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 67ನ್ನು ಗೆದ್ದುಕೊಂಡು ಅಪೂರ್ವ ಸಾಧನೆ ಮಾಡಿತು. ಅಲ್ಲಿ ಬಿಜೆಪಿ ಕೇವಲ 03 ಸ್ಥಾನಕಷ್ಟೇ ಸೀಮಿತವಾಯಿತು. ಮತ್ತೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅದೇ ಸಾಧನೆ ಮಾಡಿ 7ಕ್ಕೆ 7ಸೀಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಇನ್ನು 8 ತಿಂಗಳಲ್ಲೇ ವಿಧಾನಸಭಾ ಚುನಾವಣೆಯಿದೆ. ಅಲ್ಲಿಯ ಮತದಾರರು ವಿಧಾನಸಭೆಯ ಚುನಾವಣೆಯಲ್ಲಿ ಆಪ್ ಗೆ ಮತ ಹಾಕುತ್ತೇವೆ, ಆದರೆ ಲೋಕಸಭೆಯಲ್ಲಿ ಮಾತ್ರ ನಮ್ಮ ಮತ ಬಿಜೆಪಿಗೆ ಎಂದು ಬಹಿರಂಗವಾಗಿ ಹೇಳುತ್ತಾರೆ.

ಪ್ರತಿ ಚುನಾವಣೆಗಳಿಗೂ ವ್ಯತ್ಯಾಸವಿರುತ್ತದೆ ಮತ್ತು ಬೇರೆ ಬೇರೆ ಸಂದರ್ಭಕ್ಕನುಗುಣವಾಗಿ ಚುನಾವಣೆಗಳಿಗೆ ಮತದಾರರು ಪ್ರತಿಕ್ರಿಯಿಸುತ್ತಾರೆ. ಲೋಕಸಭಾ ಚುನಾವಣೆ ರಾಷ್ಟ್ರೀಯ ಚುನಾವಣೆಯಾದ್ದರಿಂದ ಜನ ಅಲ್ಲಿನ ಬಲಿಷ್ಠ ನಾಯಕತ್ವ, ಅವರ ಘೋಷಣೆಗಳಿಗೆ ಮಾರು ಹೋಗುತ್ತಾರೆ. ವಿಧಾನ ಸಭಾ ಚುನಾವಣೆಗಳಲ್ಲಿ ರಾಜ್ಯದ ಹಿತಾಸಕ್ತಿಗೆ ಯಾರು ಪೂರಕ ಎಂಬುದರ ಜೊತೆಗೆ ಚುನಾವಣೆಗಳು ನಡೆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ. ಇಲ್ಲಿ ಪರಸ್ಪರರ ಸಂಬಂಧಗಳು, ಜಾತಿ, ಹಣ, ಪ್ರಭಾವ ಕೆಲಸ ಮಾಡುತ್ತದೆ.

ಇನ್ನು ಕೆಲವು ಮಾಧ್ಯಮಗಳು ಬೆಳಿಗ್ಗೆ ಇಂದಿನ ಫಲಿತಾಂಶ ತೋರಿಸಲು ನಿರಾಸಕ್ತಿ ವಹಿಸಿದ್ದವು. ಬೆಳಿಗ್ಗೆ ಸ್ಕ್ರೋಲ್ ಗಳಲ್ಲಿ ಈ ಸುದ್ದಿ ಕಾಣಿಸಿಕೊಂಡರು, ಕಾಂಗ್ರೆಸ್ ಹೆಚ್ಚು ಸೀಟು ಗಳಿಸುತ್ತಿದ್ದಂತೆ ನಿಧಾನಕ್ಕೆ ಸುಮ್ಮನಾಗಿವೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಫಲಿತಾಂಶದಿಂದ ವಿಶ್ವಾಸ ಪಡೆದುಕೊಂಡು ನಮ್ಮ ಕಾಲ ಮುಗಿದಿಲ್ಲ ಎಂದು ಉಚ್ಛರಿಸಿದ್ದಾರೆ. ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆದರೆ ಬಿಜೆಪಿ ಸೋಲುತ್ತದೆ. ಇವಿಎಂನಲ್ಲಿ ಮತದಾನ ನಡೆದರೆ ಬಿಜೆಪಿಯೇ ಗೆಲ್ಲುತ್ತದೆ ಹಾಗಾಗಿ ಇವಿಎಂ ಬ್ಯಾನ್ ಮಾಡಬೇಕು ಎಂಬ ವಾದವೂ ಸೋಷಿಯಲ್ ಮಿಡೀಯಾದಲ್ಲಿ ಜೋರಾಗಿ ಕೇಳಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...