Homeಸಾಹಿತ್ಯ-ಸಂಸ್ಕೃತಿಕಥೆಸ್ವರ್ಗಕ್ಕೆ ಸ್ವಾಗತ.

ಸ್ವರ್ಗಕ್ಕೆ ಸ್ವಾಗತ.

- Advertisement -
- Advertisement -

ಭಾರತದ ರಾಜಕಾರಣಿಯೊಬ್ಬ ವಾಯುವಿಹಾರಕ್ಕಾಗಿ ರಸ್ತೆಯಲ್ಲಿ ನಡೆಯುತ್ತಿರುವಾಗ ಕಾರೊಂದು ಗುದ್ದಿ ಸಾವನ್ನಪ್ಪಿದರು. ಅವರ ಆತ್ಮವು ಸ್ವರ್ಗದೊಳಗೆ ಆಗಮಿಸುತ್ತದೆ. ಪ್ರವೇಶ ದ್ವಾರದ ಬಳಿ ಚಿತ್ರಗುಪ್ತ ಅವರನ್ನು ಬರಮಾಡಿಕೊಂಡರು.  “ಸ್ವರ್ಗಕ್ಕೆ ಸ್ವಾಗತ” ಎಂದು ಹೇಳಿ, “ಇಲ್ಲಿ ನೀವು ನೆಲೆಗೊಳ್ಳುವುದಕ್ಕಿಂತ ಮುಂಚೆ ಇಲ್ಲಿನ ಎಲ್ಲವೂ ಅಧಿಕೃತವಾಗಿ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿವೆಯೇ ಎಂದು ನೀವೊಮ್ಮೆ ಪರೀಕ್ಷಿಸಿಕೊಳ್ಳಬೇಕಿದೆ, ಅದಕ್ಕಾಗಿ ಒಂದು ದಿನ ಸ್ವರ್ಗದಲ್ಲಿಯೂ, ಇನ್ನೊಂದು ನರಕದಲ್ಲಿಯೂ ಇದ್ದು ನಿಮಗೆ ಸೂಕ್ತವಾದುದ್ದನ್ನು ಆರಿಸಿಕೊಳ್ಳಬಹುದೆಂದು ಚಿತ್ರಗುಪ್ತ ಹೇಳಿದರು. ಆಗ ರಾಜಕಾರಣಿ “ಸಮಸ್ಯೆ ಇಲ್ಲ, ಇಲ್ಲಿ ಎಲ್ಲ ಚೆನ್ನಾಗಿದೆ, ನನಗೆ ಇಷ್ಟ ಆಯಿತು. ನರಕ ನೋಡುವ ಅಗತ್ಯವಿಲ್ಲ, ಸ್ವರ್ಗದಲ್ಲೇ ಇರುತ್ತೇನೆ ಒಳಗೆ ಹೋಗೋಣ” ಎಂದು ಹೇಳಿದರು.

ಆಗ ಚಿತ್ರಗುಪ್ತ “ಕ್ಷಮಿಸಿ, ನಮಗೆ ನಮ್ಮದೇ ಆದ ನಿಯಮಗಳಿವೆ, ನಾನು ಮೇಲಿನವರಿಂದ ಆದೇಶಗಳನ್ನು ಹೊಂದಿದ್ದೇನೆ, ಹಾಗಾಗಿ ನೀವು ಇದನ್ನು ಪಾಲಿಸಲೇಬೇಕೆಂದು ಮನವಿ ಮಾಡಿದನು. ಆಗ ರಾಜಕಾರಣಿ ಇರಲಿ ಒಂದು ದಿನ ತಾನೇ ನರಕ ಹೇಗಿರುತ್ತೆ ಅಂತ ನೋಡೇ ಬಿಡೋಣ ಎಂದು ಒಪ್ಪಿಕೊಂಡರು. ಆಗ ಚಿತ್ರಗುಪ್ತ ಮತ್ತೆ ಕೇಳಿದನು ಮೊದಲು ನರಕಕ್ಕೆ ಹೋಗೋಣವೋ ಅಥವಾ ಸ್ವರ್ಗಕ್ಕೆ ಹೋಗೋಣವೋ ಅಂದಾಗ, ರಾಜಕಾರಣಿ ಮೊದಲು ನರಕವೇ ಇರಲಿ ಎಂದನು.

ನಂತರ ಚಿತ್ರಗುಪ್ತ ಅವರನ್ನು ಲಿಫ್ಟಿಗೆ ಹತ್ತಿಸಿಕೊಂಡನು. ಲಿಪ್ಟು ಅವರನ್ನು ಹೊತ್ತು ಕೆಳಕ್ಕೆ ಹೋಯಿತು. ಅದು ಎಷ್ಟು ಆಳಕ್ಕೆ ಹೋಗುತ್ತಿದೆ ಎಂದು ಗಾಬರಿಗೊಳ್ಳುವಷ್ಟರಲ್ಲೇ ಅವರು ನರಕದಲ್ಲಿದ್ದರು. ಬಾಗಿಲು ತೆರೆದಾಗ ರಾಜಕಾರಣಿ ಸುತ್ತಲೂ ವಿಶಾಲವಾದ ಗಾಲ್ಫ್ ಮೈದಾನವಿತ್ತು. ದೂರದಲ್ಲಿ ಕಾಣುತ್ತಿದ್ದ ಅಂಗಳದಲ್ಲಿ ಅವನ ಸ್ನೇಹಿತರು ಮತ್ತು ಜತೆಗೆ ಕೂಡಿ ಕೆಲಸ ಮಾಡಿದ್ದ ರಾಜಕಾರಣಿಗಳು ಸಾಲಾಗಿ ನಿಂತಿದ್ದರು. ಎಲ್ಲರ ಮೊಗದಲ್ಲೂ ಮಂದಹಾಸ, ಶುಭ್ರ ಬಟ್ಟೆಗಳು ಮನ ತಣಿಸುತ್ತಿದ್ದವು. ಅವರೆಲ್ಲರೂ ಓಡಿಬಂದು ತಮ್ಮ ಗೆಳೆಯನಿಗೆ ಶುಭ ಕೋರಿ, ಕೈಕುಲುಕಿದರು. ಬದುಕಿದ್ದಾಗ ಜನರನ್ನು ತುಳಿದು ತಾವು ಹೇಗೆ ಸಿರಿವಂತರಾದೆವು ಎಂಬ ನೆನಪುಗಳನ್ನು ಮೆಲುಕು ಹಾಕಿದರು.

ಎಲ್ಲರೂ ಸೇರಿ ಒಂದು ಸುತ್ತು ಗಾಲ್ಫ್ ಆಡಿ, ಅಲ್ಲಿದ್ದ ಬಗೆಬಗೆಯ ಕಡಲ ತಿನಿಸುಗಳನ್ನು ಸವಿದರು. ಬಳಿಕ, ದ್ರಾಕ್ಷಾರಸ ಅವರೆಲ್ಲರನ್ನು ಉಲ್ಲಸಿತರನ್ನಾಗಿ ಮಾಡಿತು. ಔತಣಕೂಟದಲ್ಲಿ ವಿದೂಷಕನೊಬ್ಬನು ಥರೇವಹಾರಿ ಜೋಕ್ಸ್ ಮಾಡುತ್ತಾ ನಗುತ್ತಾ, ನಗಿಸುತ್ತಾ ಅವರೊಡನೆ ಸಂತಸದ ಕ್ಷಣಗಳಿಗೆ ಸಾಕ್ಷಿಯಾದನು. ಇವರೆಲ್ಲರೂ ಸಂತೋಷ ಕೂಟದಲ್ಲಿ ಮೈಮರೆತಿದ್ದಾಗ, ರಾಜಕಾರಣಿಗೆ ಅರಿವಾಯಿತು. “ಒಂದು ದಿನ ಮುಗೀತು ಇದು ಹೊರಡುವ ಸಮಯ”. ಪ್ರತಿಯೊಬ್ಬರು ಅವರಿಗೆ ಆತ್ಮೀಯವಾಗಿ ಬೀಳ್ಕೊಟ್ಟರು, ಲಿಫ್ಟ್ ಮೇಲಕ್ಕೆ ಹೋಯಿತು.

ಲಿಫ್ಟ್ ಮೇಲಕ್ಕೆ, ಮತ್ತಷ್ಟು ಮೇಲಕ್ಕೆ ಹೋಗಿ ಸ್ವರ್ಗದಲ್ಲಿ ಬಾಗಿಲು ತೆರೆದುಕೊಳ್ಳುತ್ತದೆ. ಅಲ್ಲಿ ಪ್ರಶಾಂತತೆ ಇರುತ್ತದೆ. ಅವರು ಮೋಡಗಳಿಂದ ಮೋಡಕ್ಕೆ ನೆಗೆಯುತ್ತಾರೆ, ತಂತಿವಾದ್ಯಗಳನ್ನು ನುಡಿಸುತ್ತಾರೆ, ಗಿಟಾರ್‍ರನ್ನು ಬಾರಿಸುತ್ತಾರೆ, ಹಾಡು ಹೇಳುತ್ತಾರೆ. ಅವರು ಬಹಳ ಸಂತೋಷದಿಂದ ಸಮಯವನ್ನು ಕಳೆಯುತ್ತಾರೆ ಮತ್ತು ಆಗಷ್ಟೇ ಅವರಿಗೆ ಹೊಳೆಯುತ್ತದೆ 24 ಗಂಟೆಗಳು ಮುಗಿದು ಹೋಗಿದೆ ಎಂದು. ಮತ್ತೆ ಚಿತ್ರಗುಪ್ತ ರಾಜಕಾರಣಿಯ ಬಳಿ ಬರುತ್ತಾರೆ, “ನೀವು ಒಂದು ದಿನ ನರಕದಲ್ಲೂ ಮತ್ತೊಂದು ದಿನ ಸ್ವರ್ಗದಲ್ಲೂ ಕಳೆದಿದ್ದೀರಾ. ಈಗ ನಿಮ್ಮ ಶಾಶ್ವತ ನೆಲೆಯನ್ನು ಆಯ್ಕೆ ಮಾಡಿ”.

ರಾಜಕಾರಣಿ ಒಂದು ನಿಮಿಷ ಯೋಚಿಸಿ ಉತ್ತರ ನೀಡುತ್ತಾರೆ: “ನಾನು ಮುಂಚೆ ಸ್ವರ್ಗ ಸುಖಕರವಾಗಿಯೂ ನರಕ ಭಯಾನಕವಾಗಿಯೂ ಇರುತ್ತದೆ ಎಂದು ತಪ್ಪು ತಿಳಿದಿದ್ದೆ. ಆದರೆ ಇಲ್ಲಿ ಬಂದು ನೋಡಿದ ನಂತರ ಸ್ವರ್ಗಕ್ಕಿಂತ ನರಕವೇ ಅದ್ಭುತವಾಗಿದೆ ಅನ್ನಿಸುತ್ತಿದೆ. ಹಾಗಾಗಿ ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದನು. ಇಂದು ಅಂತಿಮ ನಿರ್ಧಾರವೇ ಎಂದು ಚಿತ್ರಗುಪ್ತ ಕೇಳಿದರೆ ರಾಜಕಾರಣಿ ಯೆಸ್ 100% ಎಂದನು. ಸರಿ ಎಂದು ಚಿತ್ರಗುಪ್ತ ರಾಜಕಾರಣಿಯನ್ನು ನರಕಕ್ಕೆ ತಂದು ಬಿಡುತ್ತಾನೆ.

ಆಗ ರಾಜಕಾರಣಿ ಅವನ ಕಣ್ಣನ್ನು ಅವನೇ ನಂಬಲು ಸಿದ್ದವಿಲ್ಲ. ಏಕೆಂದರೆ ಅವನು ಬಂಜರು ಭೂಮಿಯ ಮಧ್ಯ ಭಾಗದಲ್ಲಿ ನಿಂತಿರುತ್ತಾನೆ. ಸುತ್ತಲೂ ತ್ಯಾಜ್ಯ, ಕಸ ತುಂಬಿ ಹೋಗಿರುತ್ತದೆ. ತನ್ನ ಎಲ್ಲಾ ಸ್ನೇಹಿತರು ಚಿಂದಿಬಟ್ಟೆ ತೊಟ್ಟು ಕಸ ಆಯ್ದು ಕಪ್ಪು ಚೀಲದಲ್ಲಿ ತುಂಬುತ್ತಿರುತ್ತಾರೆ. ಮೇಲಿನಿಂದ ಇನ್ನಷ್ಟು ಕಸ ಬೀಳುತ್ತಿರುತ್ತದೆ. ರೋಧನೆ, ನೋವಿನ ವಾತವರಣವಿರುತ್ತದೆ.

ಆತನ ಸ್ನೇಹಿತರು ಅವನನ್ನು ಕೂಗಿ, ಏನು ನೋಡುತ್ತಿದ್ದೀಯ ಬಾ ಕೆಲಸ ಮಾಡು ಅನ್ನುತ್ತಾರೆ. ಆಗ ರಾಜಕಾರಣಿ ಕಣ್ಣುಜ್ಜಿಕೊಂಡು “ನನಗೆ ಏನೊಂದು ಅರ್ಥವಾಗುತ್ತಿಲ್ಲ” ಎಂದು ತೊದಲುತ್ತಾ ಹೇಳುತ್ತಾನೆ.“ಮೊನ್ನೆ ದಿನ ನಾನು ಇಲ್ಲಿಗೆ ಬಂದಿದ್ದೆ. ಇಲ್ಲಿ ಗಾಲ್ಫ್ ಕೋರ್ಟ್, ಕ್ಲಬ್ ಹೌಸ್ ಇತ್ತು. ನಾವು ಕಡಲನಳ್ಳಿ, ಮೀನಿನ ಚಟ್ನಿ, ದ್ರಾಕ್ಷಿಯ ಮದ್ಯವನ್ನು ಸೇವಿಸಿದ್ದೆವು. ನಾವೆಲ್ಲಾರೂ ಒಟ್ಟಿಗೆ ಕುಣಿದು, ತುಂಬಾ ಸಂತೋಷದಿಂದ ಸಮಯವನ್ನು ಕಳೆದಿದ್ದೆವು. ಆದರೆ ಈಗ ಕೇವಲ ಪಾಳು ಭೂಮಿ ಮಾತ್ರ ಇದೆ. ಕಸದಿಂದ ತುಂಬಿ ಹೋಗಿದೆ, ನನ್ನ ಸ್ನೇಹಿತರು ಶೋಚನೀಯವಾಗಿ ಕಾಣುತ್ತಿದ್ದಾರೆ. ಏನು ಆಯಿತು?” ಎಂದು ವಿದೂಷಕನನ್ನು ಕೇಳುತ್ತಾನೆ.

ಆಗ ವಿದೂಷಕ ಅವನ ಕಡೆಗೆ ನಗೆ ಬೀರುತ್ತಾ  “ಮೊನ್ನೆ ದಿನ ನೀನು ಬಂದಾಗ ನಾವು ಚುನಾವಣಾ ಪ್ರಚಾರ ಮಾಡುತ್ತಿದ್ದೆವು. ಇವತ್ತು ನೀನು ನಮಗೆ ಓಟ್ ಮಾಡಿದೆ ಅಷ್ಟೇ” ಎಂದರು.

ನೀವೂ ಮೋಸಹೋಗಬೇಡಿ 2019ರ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಓಟ್ ಮಾಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...