Homeಸಾಹಿತ್ಯ-ಸಂಸ್ಕೃತಿಕಥೆಸ್ವರ್ಗಕ್ಕೆ ಸ್ವಾಗತ.

ಸ್ವರ್ಗಕ್ಕೆ ಸ್ವಾಗತ.

- Advertisement -
- Advertisement -

ಭಾರತದ ರಾಜಕಾರಣಿಯೊಬ್ಬ ವಾಯುವಿಹಾರಕ್ಕಾಗಿ ರಸ್ತೆಯಲ್ಲಿ ನಡೆಯುತ್ತಿರುವಾಗ ಕಾರೊಂದು ಗುದ್ದಿ ಸಾವನ್ನಪ್ಪಿದರು. ಅವರ ಆತ್ಮವು ಸ್ವರ್ಗದೊಳಗೆ ಆಗಮಿಸುತ್ತದೆ. ಪ್ರವೇಶ ದ್ವಾರದ ಬಳಿ ಚಿತ್ರಗುಪ್ತ ಅವರನ್ನು ಬರಮಾಡಿಕೊಂಡರು.  “ಸ್ವರ್ಗಕ್ಕೆ ಸ್ವಾಗತ” ಎಂದು ಹೇಳಿ, “ಇಲ್ಲಿ ನೀವು ನೆಲೆಗೊಳ್ಳುವುದಕ್ಕಿಂತ ಮುಂಚೆ ಇಲ್ಲಿನ ಎಲ್ಲವೂ ಅಧಿಕೃತವಾಗಿ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿವೆಯೇ ಎಂದು ನೀವೊಮ್ಮೆ ಪರೀಕ್ಷಿಸಿಕೊಳ್ಳಬೇಕಿದೆ, ಅದಕ್ಕಾಗಿ ಒಂದು ದಿನ ಸ್ವರ್ಗದಲ್ಲಿಯೂ, ಇನ್ನೊಂದು ನರಕದಲ್ಲಿಯೂ ಇದ್ದು ನಿಮಗೆ ಸೂಕ್ತವಾದುದ್ದನ್ನು ಆರಿಸಿಕೊಳ್ಳಬಹುದೆಂದು ಚಿತ್ರಗುಪ್ತ ಹೇಳಿದರು. ಆಗ ರಾಜಕಾರಣಿ “ಸಮಸ್ಯೆ ಇಲ್ಲ, ಇಲ್ಲಿ ಎಲ್ಲ ಚೆನ್ನಾಗಿದೆ, ನನಗೆ ಇಷ್ಟ ಆಯಿತು. ನರಕ ನೋಡುವ ಅಗತ್ಯವಿಲ್ಲ, ಸ್ವರ್ಗದಲ್ಲೇ ಇರುತ್ತೇನೆ ಒಳಗೆ ಹೋಗೋಣ” ಎಂದು ಹೇಳಿದರು.

ಆಗ ಚಿತ್ರಗುಪ್ತ “ಕ್ಷಮಿಸಿ, ನಮಗೆ ನಮ್ಮದೇ ಆದ ನಿಯಮಗಳಿವೆ, ನಾನು ಮೇಲಿನವರಿಂದ ಆದೇಶಗಳನ್ನು ಹೊಂದಿದ್ದೇನೆ, ಹಾಗಾಗಿ ನೀವು ಇದನ್ನು ಪಾಲಿಸಲೇಬೇಕೆಂದು ಮನವಿ ಮಾಡಿದನು. ಆಗ ರಾಜಕಾರಣಿ ಇರಲಿ ಒಂದು ದಿನ ತಾನೇ ನರಕ ಹೇಗಿರುತ್ತೆ ಅಂತ ನೋಡೇ ಬಿಡೋಣ ಎಂದು ಒಪ್ಪಿಕೊಂಡರು. ಆಗ ಚಿತ್ರಗುಪ್ತ ಮತ್ತೆ ಕೇಳಿದನು ಮೊದಲು ನರಕಕ್ಕೆ ಹೋಗೋಣವೋ ಅಥವಾ ಸ್ವರ್ಗಕ್ಕೆ ಹೋಗೋಣವೋ ಅಂದಾಗ, ರಾಜಕಾರಣಿ ಮೊದಲು ನರಕವೇ ಇರಲಿ ಎಂದನು.

ನಂತರ ಚಿತ್ರಗುಪ್ತ ಅವರನ್ನು ಲಿಫ್ಟಿಗೆ ಹತ್ತಿಸಿಕೊಂಡನು. ಲಿಪ್ಟು ಅವರನ್ನು ಹೊತ್ತು ಕೆಳಕ್ಕೆ ಹೋಯಿತು. ಅದು ಎಷ್ಟು ಆಳಕ್ಕೆ ಹೋಗುತ್ತಿದೆ ಎಂದು ಗಾಬರಿಗೊಳ್ಳುವಷ್ಟರಲ್ಲೇ ಅವರು ನರಕದಲ್ಲಿದ್ದರು. ಬಾಗಿಲು ತೆರೆದಾಗ ರಾಜಕಾರಣಿ ಸುತ್ತಲೂ ವಿಶಾಲವಾದ ಗಾಲ್ಫ್ ಮೈದಾನವಿತ್ತು. ದೂರದಲ್ಲಿ ಕಾಣುತ್ತಿದ್ದ ಅಂಗಳದಲ್ಲಿ ಅವನ ಸ್ನೇಹಿತರು ಮತ್ತು ಜತೆಗೆ ಕೂಡಿ ಕೆಲಸ ಮಾಡಿದ್ದ ರಾಜಕಾರಣಿಗಳು ಸಾಲಾಗಿ ನಿಂತಿದ್ದರು. ಎಲ್ಲರ ಮೊಗದಲ್ಲೂ ಮಂದಹಾಸ, ಶುಭ್ರ ಬಟ್ಟೆಗಳು ಮನ ತಣಿಸುತ್ತಿದ್ದವು. ಅವರೆಲ್ಲರೂ ಓಡಿಬಂದು ತಮ್ಮ ಗೆಳೆಯನಿಗೆ ಶುಭ ಕೋರಿ, ಕೈಕುಲುಕಿದರು. ಬದುಕಿದ್ದಾಗ ಜನರನ್ನು ತುಳಿದು ತಾವು ಹೇಗೆ ಸಿರಿವಂತರಾದೆವು ಎಂಬ ನೆನಪುಗಳನ್ನು ಮೆಲುಕು ಹಾಕಿದರು.

ಎಲ್ಲರೂ ಸೇರಿ ಒಂದು ಸುತ್ತು ಗಾಲ್ಫ್ ಆಡಿ, ಅಲ್ಲಿದ್ದ ಬಗೆಬಗೆಯ ಕಡಲ ತಿನಿಸುಗಳನ್ನು ಸವಿದರು. ಬಳಿಕ, ದ್ರಾಕ್ಷಾರಸ ಅವರೆಲ್ಲರನ್ನು ಉಲ್ಲಸಿತರನ್ನಾಗಿ ಮಾಡಿತು. ಔತಣಕೂಟದಲ್ಲಿ ವಿದೂಷಕನೊಬ್ಬನು ಥರೇವಹಾರಿ ಜೋಕ್ಸ್ ಮಾಡುತ್ತಾ ನಗುತ್ತಾ, ನಗಿಸುತ್ತಾ ಅವರೊಡನೆ ಸಂತಸದ ಕ್ಷಣಗಳಿಗೆ ಸಾಕ್ಷಿಯಾದನು. ಇವರೆಲ್ಲರೂ ಸಂತೋಷ ಕೂಟದಲ್ಲಿ ಮೈಮರೆತಿದ್ದಾಗ, ರಾಜಕಾರಣಿಗೆ ಅರಿವಾಯಿತು. “ಒಂದು ದಿನ ಮುಗೀತು ಇದು ಹೊರಡುವ ಸಮಯ”. ಪ್ರತಿಯೊಬ್ಬರು ಅವರಿಗೆ ಆತ್ಮೀಯವಾಗಿ ಬೀಳ್ಕೊಟ್ಟರು, ಲಿಫ್ಟ್ ಮೇಲಕ್ಕೆ ಹೋಯಿತು.

ಲಿಫ್ಟ್ ಮೇಲಕ್ಕೆ, ಮತ್ತಷ್ಟು ಮೇಲಕ್ಕೆ ಹೋಗಿ ಸ್ವರ್ಗದಲ್ಲಿ ಬಾಗಿಲು ತೆರೆದುಕೊಳ್ಳುತ್ತದೆ. ಅಲ್ಲಿ ಪ್ರಶಾಂತತೆ ಇರುತ್ತದೆ. ಅವರು ಮೋಡಗಳಿಂದ ಮೋಡಕ್ಕೆ ನೆಗೆಯುತ್ತಾರೆ, ತಂತಿವಾದ್ಯಗಳನ್ನು ನುಡಿಸುತ್ತಾರೆ, ಗಿಟಾರ್‍ರನ್ನು ಬಾರಿಸುತ್ತಾರೆ, ಹಾಡು ಹೇಳುತ್ತಾರೆ. ಅವರು ಬಹಳ ಸಂತೋಷದಿಂದ ಸಮಯವನ್ನು ಕಳೆಯುತ್ತಾರೆ ಮತ್ತು ಆಗಷ್ಟೇ ಅವರಿಗೆ ಹೊಳೆಯುತ್ತದೆ 24 ಗಂಟೆಗಳು ಮುಗಿದು ಹೋಗಿದೆ ಎಂದು. ಮತ್ತೆ ಚಿತ್ರಗುಪ್ತ ರಾಜಕಾರಣಿಯ ಬಳಿ ಬರುತ್ತಾರೆ, “ನೀವು ಒಂದು ದಿನ ನರಕದಲ್ಲೂ ಮತ್ತೊಂದು ದಿನ ಸ್ವರ್ಗದಲ್ಲೂ ಕಳೆದಿದ್ದೀರಾ. ಈಗ ನಿಮ್ಮ ಶಾಶ್ವತ ನೆಲೆಯನ್ನು ಆಯ್ಕೆ ಮಾಡಿ”.

ರಾಜಕಾರಣಿ ಒಂದು ನಿಮಿಷ ಯೋಚಿಸಿ ಉತ್ತರ ನೀಡುತ್ತಾರೆ: “ನಾನು ಮುಂಚೆ ಸ್ವರ್ಗ ಸುಖಕರವಾಗಿಯೂ ನರಕ ಭಯಾನಕವಾಗಿಯೂ ಇರುತ್ತದೆ ಎಂದು ತಪ್ಪು ತಿಳಿದಿದ್ದೆ. ಆದರೆ ಇಲ್ಲಿ ಬಂದು ನೋಡಿದ ನಂತರ ಸ್ವರ್ಗಕ್ಕಿಂತ ನರಕವೇ ಅದ್ಭುತವಾಗಿದೆ ಅನ್ನಿಸುತ್ತಿದೆ. ಹಾಗಾಗಿ ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದನು. ಇಂದು ಅಂತಿಮ ನಿರ್ಧಾರವೇ ಎಂದು ಚಿತ್ರಗುಪ್ತ ಕೇಳಿದರೆ ರಾಜಕಾರಣಿ ಯೆಸ್ 100% ಎಂದನು. ಸರಿ ಎಂದು ಚಿತ್ರಗುಪ್ತ ರಾಜಕಾರಣಿಯನ್ನು ನರಕಕ್ಕೆ ತಂದು ಬಿಡುತ್ತಾನೆ.

ಆಗ ರಾಜಕಾರಣಿ ಅವನ ಕಣ್ಣನ್ನು ಅವನೇ ನಂಬಲು ಸಿದ್ದವಿಲ್ಲ. ಏಕೆಂದರೆ ಅವನು ಬಂಜರು ಭೂಮಿಯ ಮಧ್ಯ ಭಾಗದಲ್ಲಿ ನಿಂತಿರುತ್ತಾನೆ. ಸುತ್ತಲೂ ತ್ಯಾಜ್ಯ, ಕಸ ತುಂಬಿ ಹೋಗಿರುತ್ತದೆ. ತನ್ನ ಎಲ್ಲಾ ಸ್ನೇಹಿತರು ಚಿಂದಿಬಟ್ಟೆ ತೊಟ್ಟು ಕಸ ಆಯ್ದು ಕಪ್ಪು ಚೀಲದಲ್ಲಿ ತುಂಬುತ್ತಿರುತ್ತಾರೆ. ಮೇಲಿನಿಂದ ಇನ್ನಷ್ಟು ಕಸ ಬೀಳುತ್ತಿರುತ್ತದೆ. ರೋಧನೆ, ನೋವಿನ ವಾತವರಣವಿರುತ್ತದೆ.

ಆತನ ಸ್ನೇಹಿತರು ಅವನನ್ನು ಕೂಗಿ, ಏನು ನೋಡುತ್ತಿದ್ದೀಯ ಬಾ ಕೆಲಸ ಮಾಡು ಅನ್ನುತ್ತಾರೆ. ಆಗ ರಾಜಕಾರಣಿ ಕಣ್ಣುಜ್ಜಿಕೊಂಡು “ನನಗೆ ಏನೊಂದು ಅರ್ಥವಾಗುತ್ತಿಲ್ಲ” ಎಂದು ತೊದಲುತ್ತಾ ಹೇಳುತ್ತಾನೆ.“ಮೊನ್ನೆ ದಿನ ನಾನು ಇಲ್ಲಿಗೆ ಬಂದಿದ್ದೆ. ಇಲ್ಲಿ ಗಾಲ್ಫ್ ಕೋರ್ಟ್, ಕ್ಲಬ್ ಹೌಸ್ ಇತ್ತು. ನಾವು ಕಡಲನಳ್ಳಿ, ಮೀನಿನ ಚಟ್ನಿ, ದ್ರಾಕ್ಷಿಯ ಮದ್ಯವನ್ನು ಸೇವಿಸಿದ್ದೆವು. ನಾವೆಲ್ಲಾರೂ ಒಟ್ಟಿಗೆ ಕುಣಿದು, ತುಂಬಾ ಸಂತೋಷದಿಂದ ಸಮಯವನ್ನು ಕಳೆದಿದ್ದೆವು. ಆದರೆ ಈಗ ಕೇವಲ ಪಾಳು ಭೂಮಿ ಮಾತ್ರ ಇದೆ. ಕಸದಿಂದ ತುಂಬಿ ಹೋಗಿದೆ, ನನ್ನ ಸ್ನೇಹಿತರು ಶೋಚನೀಯವಾಗಿ ಕಾಣುತ್ತಿದ್ದಾರೆ. ಏನು ಆಯಿತು?” ಎಂದು ವಿದೂಷಕನನ್ನು ಕೇಳುತ್ತಾನೆ.

ಆಗ ವಿದೂಷಕ ಅವನ ಕಡೆಗೆ ನಗೆ ಬೀರುತ್ತಾ  “ಮೊನ್ನೆ ದಿನ ನೀನು ಬಂದಾಗ ನಾವು ಚುನಾವಣಾ ಪ್ರಚಾರ ಮಾಡುತ್ತಿದ್ದೆವು. ಇವತ್ತು ನೀನು ನಮಗೆ ಓಟ್ ಮಾಡಿದೆ ಅಷ್ಟೇ” ಎಂದರು.

ನೀವೂ ಮೋಸಹೋಗಬೇಡಿ 2019ರ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಓಟ್ ಮಾಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...