Homeಅಂಕಣಗಳುಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

ಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

- Advertisement -
- Advertisement -

ಮಿಥ್ಯ: ಸ್ವಾತಂತ್ರಯ ಸಿಗಲು ನೆಹರೂ ಕೊಡುಗೆ ಏನಿಲ್ಲ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದರು. ಬಿಜೆಪಿಯ ಐಟಿ ಸೆಲ್ ಕೂಡ ನೆಹರು ಕುರಿತು ಸಾಕಷ್ಟು ಫೇಕ್ ಸ್ಟೋರಿಗಳನ್ನು ಹರಡುತ್ತಲೇ ಬಂದಿದೆ.

ಸತ್ಯ: ಇವತ್ತು ಖರೀದಿಸಿದ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, ಜವಾಹರಲಾಲ್ ನೆಹರೂ ಕುರಿತು ಏನೆಲ್ಲ ಸುಳ್ಳುಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದರೂ, ನೆಹರೂ ಕೊಡುಗೆ ಈ ದೇಶಕ್ಕೆ ಅಪಾರ ಎಂಬುದನ್ನು ಅವರಿಂದ ಮುಚ್ಚಿಡಲಾಗುತ್ತಿಲ್ಲ. 1964ರಲ್ಲಿ ನೆಹರೂ ಮಡಿದಾಗ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯು ‘ಆಧುನಿಕ ಭಾರತದ ನಿಮ್ರಾತೃ’ ಎಂದು ಬಣ್ಣಿಸುತ್ತದೆ. ‘ದಿ ಎಕನಾಮಿಸ್ಟ್’ ಪತ್ರಿಕೆಯು ‘ನೆಹರೂ ಇಲ್ಲದ ಜಗತ್ತು’ ಎಂಬ ಕವರ್ಸ್ಟೋರಿಯನ್ನು ಪ್ರಕಟಿಸುತ್ತದೆ. ಆ ಹೊತ್ತಿಗಾಗಲೇ ನೆಹರೂ ತೃತೀಯ ರಾಷ್ಟ್ರಗಳಲ್ಲಿ ಹೊಸ ಭರವಸೆ ಮೂಡಿಸಿದ್ದರು.

ಸಂಸತ್ತಿನಲ್ಲಿ ಇಂತಹ ನೆಹರೂ ಕುರಿತು ಮಾತನಾಡುವ ನಮ್ಮ ದಿ ಗ್ರೇಟ್ ಪ್ರಧಾನ ಮಂತ್ರಿಯವರು, ‘ಸ್ವಾಂತಂತ್ರ್ಯ ಹೋರಾಟಕ್ಕೆ ನೆಹರೂ ಕೊಡುಗೆ ಏನಿಲ್ಲ’ ಎಂದು ಮೂರ್ಖನಂತೆ ಮಾತಾಡುತ್ತಾರೆ. ಹಾಗಾದರೆ ಮೋದಿಯವರ ಆದರ್ಶಗಳಾದ ಹೆಡಗೆವಾರ್, ಸಾವರ್ಕರ್, ಗೋಳ್ವಾಲ್ಕರ್-ಈ ತರಿವಳಿಗಳ ಕೊಡುಗೆ ಏನು? ಇವರು ಪುಟ್ಟಾಪೂರಾ ಬ್ರಿಟಿಷರ ಚೇಲಾಗಳಂತೆ ವರ್ತಿಸಿದ್ದಕ್ಕೆ ಇತಿಹಾಸದಲ್ಲಿ ದಾಖಲೆಗಳಿವೆ. ಅದಿರಲಿ, ಇವರ ಕುರಿತು ಮೋದಿ ಸಾಹೇಬರೇಕೆ ಮಾತೇ ಆಡಲ್ಲ? ಈ ತ್ರಿವಳಿಗಳನ್ನು ಆರೆಸ್ಸೆಸ್ ಆರಾಧಿಸುತ್ತದೆ, ಮೋದಿಗೂ ಕೂಡ ಈ ಮೂವರು ಆದರ್ಶರೇ. ಬಟ್, ಬಾಹ್ಯವಾಗಿ ಮೋದಿ ಎಂದೂ ಇವರ ಪರ ಮಾತಾಡುತ್ತಿಲ್ಲ. ಮಾತಾಡುವ ಧಮ್ಮೂ ಇಲ್ಲ. ಯಾಕೆಂದರೆ ಈ ಮೂವರೂ ಮೋದಿಯಷ್ಟೇ ದೇಶದ್ರೋಹಿಗಳಾಗಿದ್ದರು!

ಹೀಗಾಗಿ ಐದು ವರ್ಷಗಳಲ್ಲಿ ನೀವೇನು ಮಾಡಿದಿರಾ ಎಂಬ ಪ್ರಶ್ನೆಗೆ ಉತ್ತರಿಸುವ ಯೋಗ್ಯತೆಯನ್ನೇ ಕಳೆದುಕೊಂಡಿರುವ ಪ್ರಧಾನಿ, ನೆಹರೂ ಈ ದೇಶಕ್ಕೆ ಏನು ಮಾಡಿದರು, ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿತು ಎಂದು ವಿಷಯಾಂತರ ಮಾಡುತ್ತಿದ್ದಾರೆ. ನೆಹರು ವ್ಯಕ್ತಿತ್ವವನ್ನು ಮಸುಕಾಗಿಸುವ ಉದ್ದೇಶದಿಂದಲೇ ಹಲವಾರು ಮಿಥ್ಯಗಳನ್ನು, ಮತ್ತೆ ಕೆಲವು ತಪ್ಪು ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಪಾಲು ಏನಿಲ್ಲ ಎಂಬುದು ತೀರಾ ಬಾಲಿಶತನದ ಹೇಳಿಕೆಯಷ್ಟೇ. 1921ರಿಂದ 1945ರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕಾರಣಕ್ಕೆ ನೆಹರು 9 ಸಲ ಜೈಲಿಗೆ ತಳ್ಳಲ್ಪಡುತ್ತಾರೆ. 12 ದಿನಗಳಿಂದ ಹಿಡಿದು, 1041ಗಳ ಅವಧಿಯ ಜೈಲು ಶಿಕ್ಷೆ ಅನುಭವಿಸಿದರು. ಒಟ್ಟು 3,259 ದಿನಗಳನ್ನು ನೆಹರು ಜೈಲಿನಲ್ಲಿ ಕಳೆದರು. ಅಂದರೆ ತಮ್ಮ ಜೀವನದ ಒಂಭತ್ತು ವರ್ಷಗಳಷ್ಟು ಅವಧಿಯನ್ನು ನೆಹರು ಜೈಲಿನಲ್ಲೇ ಕಳೆದರು. ಜೈಲು ಶಿಕ್ಷೆಯನ್ನು ನೆಹರು ತಮ್ಮ ಓದಿಗೆ ಬಳಸಿಕೊಂಡರು. ಸಾಕಷ್ಟು ವೈವಿಧ್ಯಮಯ ಪುಸ್ತಕಗಳನ್ನು ಓದುತ್ತ ನಿಜವಾದ ಭಾರತದ ರೂಪುರೇಷೆ ಹೇಗಿರಬೇಕೆಂಬುದನ್ನು ಅರಿಯುತ್ತ ಹೋದರು. ಫೆಬ್ರುವರಿ 1934 ಮತ್ತು ಸೆಪ್ಟೆಂಬರ್ 1935- ಈ ಅವಧಿಯಲ್ಲಿ ನೆಹರು 188 ಪುಸ್ತಕಗಳನ್ನು ಜೈಲಿನಲ್ಲಿ ಓದಿದ್ದರು.

ಆದರೆ ಸಂಘ ಪರಿವಾರದ ಕೇಂದ್ರಸ್ಥಾನದಲ್ಲಿರುವ ಮತ್ತು ಇಡೀ ಸಂಘ ಪರಿವಾರವನ್ನು ನಿರ್ದೇಶಿಸುವ, ನಿಯಂತ್ರಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮಾತ್ರ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದಿದ್ದಷ್ಟೇ ಅಲ್ಲ, ಅದು ಬ್ರಿಟಿಷರ ಪರವಾದ ನಿಲುವುಗಳನ್ನು ಹೊಂದಿತ್ತು. ಅದರ ನಾಯಕ ಕೇಶವ ಹೆಡಗೆವಾರ್ ಸ್ವಾತಂತ್ರ್ಯ ಚಳುವಳಿಯಿಂದ ದೂರ ಇರುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದರು. ಹಿಂದೂತ್ವದ ಇನ್ನೊಬ್ಬ ನಾಯಕ ಸಾವರ್ಕರ್ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಅಂಡಮಾನ್ ಜೈಲು ಸೇರಿದ್ದು ನಿಜ. ಹಾಗೆಯೇ ಬ್ರಿಟಿಷರೊಂದಿಗೆ ರಾಜಿಯಾಗಿ ಶಿಕ್ಷೆಯಿಂದ ಮುಕ್ತಿ ಪಡೆದಿದ್ದೂ ನಿಜ.

ಸ್ವಾತಂತ್ರ್ಯ ಚಳುವಳಿಯಿಂದ ದೂರವೇ ಉಳಿದ ಸಂಘಟನೆಯಿಂದ ರೂಪುಗೊಂಡ ನರೇಂದ್ರ ಮೋದಿಯವರು, ಸುಮಾರು 9 ವರ್ಷಗಳಷ್ಟು ಕಾಲ ಜೈಲಿನಲ್ಲಿ ಕಳೆದ ನೆಹರುರ ಹೋರಾಟದ ಪಾತ್ರವನ್ನು ಕಡೆಗಣಿಸಿ ಮಾತಾಡುತ್ತಿರುವುದೇ ಹಾಸ್ಯಾಸ್ಪದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...