Homeಅಂಕಣಗಳುಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

ಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

- Advertisement -
- Advertisement -

ಮಿಥ್ಯ: ಸ್ವಾತಂತ್ರಯ ಸಿಗಲು ನೆಹರೂ ಕೊಡುಗೆ ಏನಿಲ್ಲ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದರು. ಬಿಜೆಪಿಯ ಐಟಿ ಸೆಲ್ ಕೂಡ ನೆಹರು ಕುರಿತು ಸಾಕಷ್ಟು ಫೇಕ್ ಸ್ಟೋರಿಗಳನ್ನು ಹರಡುತ್ತಲೇ ಬಂದಿದೆ.

ಸತ್ಯ: ಇವತ್ತು ಖರೀದಿಸಿದ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, ಜವಾಹರಲಾಲ್ ನೆಹರೂ ಕುರಿತು ಏನೆಲ್ಲ ಸುಳ್ಳುಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದರೂ, ನೆಹರೂ ಕೊಡುಗೆ ಈ ದೇಶಕ್ಕೆ ಅಪಾರ ಎಂಬುದನ್ನು ಅವರಿಂದ ಮುಚ್ಚಿಡಲಾಗುತ್ತಿಲ್ಲ. 1964ರಲ್ಲಿ ನೆಹರೂ ಮಡಿದಾಗ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯು ‘ಆಧುನಿಕ ಭಾರತದ ನಿಮ್ರಾತೃ’ ಎಂದು ಬಣ್ಣಿಸುತ್ತದೆ. ‘ದಿ ಎಕನಾಮಿಸ್ಟ್’ ಪತ್ರಿಕೆಯು ‘ನೆಹರೂ ಇಲ್ಲದ ಜಗತ್ತು’ ಎಂಬ ಕವರ್ಸ್ಟೋರಿಯನ್ನು ಪ್ರಕಟಿಸುತ್ತದೆ. ಆ ಹೊತ್ತಿಗಾಗಲೇ ನೆಹರೂ ತೃತೀಯ ರಾಷ್ಟ್ರಗಳಲ್ಲಿ ಹೊಸ ಭರವಸೆ ಮೂಡಿಸಿದ್ದರು.

ಸಂಸತ್ತಿನಲ್ಲಿ ಇಂತಹ ನೆಹರೂ ಕುರಿತು ಮಾತನಾಡುವ ನಮ್ಮ ದಿ ಗ್ರೇಟ್ ಪ್ರಧಾನ ಮಂತ್ರಿಯವರು, ‘ಸ್ವಾಂತಂತ್ರ್ಯ ಹೋರಾಟಕ್ಕೆ ನೆಹರೂ ಕೊಡುಗೆ ಏನಿಲ್ಲ’ ಎಂದು ಮೂರ್ಖನಂತೆ ಮಾತಾಡುತ್ತಾರೆ. ಹಾಗಾದರೆ ಮೋದಿಯವರ ಆದರ್ಶಗಳಾದ ಹೆಡಗೆವಾರ್, ಸಾವರ್ಕರ್, ಗೋಳ್ವಾಲ್ಕರ್-ಈ ತರಿವಳಿಗಳ ಕೊಡುಗೆ ಏನು? ಇವರು ಪುಟ್ಟಾಪೂರಾ ಬ್ರಿಟಿಷರ ಚೇಲಾಗಳಂತೆ ವರ್ತಿಸಿದ್ದಕ್ಕೆ ಇತಿಹಾಸದಲ್ಲಿ ದಾಖಲೆಗಳಿವೆ. ಅದಿರಲಿ, ಇವರ ಕುರಿತು ಮೋದಿ ಸಾಹೇಬರೇಕೆ ಮಾತೇ ಆಡಲ್ಲ? ಈ ತ್ರಿವಳಿಗಳನ್ನು ಆರೆಸ್ಸೆಸ್ ಆರಾಧಿಸುತ್ತದೆ, ಮೋದಿಗೂ ಕೂಡ ಈ ಮೂವರು ಆದರ್ಶರೇ. ಬಟ್, ಬಾಹ್ಯವಾಗಿ ಮೋದಿ ಎಂದೂ ಇವರ ಪರ ಮಾತಾಡುತ್ತಿಲ್ಲ. ಮಾತಾಡುವ ಧಮ್ಮೂ ಇಲ್ಲ. ಯಾಕೆಂದರೆ ಈ ಮೂವರೂ ಮೋದಿಯಷ್ಟೇ ದೇಶದ್ರೋಹಿಗಳಾಗಿದ್ದರು!

ಹೀಗಾಗಿ ಐದು ವರ್ಷಗಳಲ್ಲಿ ನೀವೇನು ಮಾಡಿದಿರಾ ಎಂಬ ಪ್ರಶ್ನೆಗೆ ಉತ್ತರಿಸುವ ಯೋಗ್ಯತೆಯನ್ನೇ ಕಳೆದುಕೊಂಡಿರುವ ಪ್ರಧಾನಿ, ನೆಹರೂ ಈ ದೇಶಕ್ಕೆ ಏನು ಮಾಡಿದರು, ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿತು ಎಂದು ವಿಷಯಾಂತರ ಮಾಡುತ್ತಿದ್ದಾರೆ. ನೆಹರು ವ್ಯಕ್ತಿತ್ವವನ್ನು ಮಸುಕಾಗಿಸುವ ಉದ್ದೇಶದಿಂದಲೇ ಹಲವಾರು ಮಿಥ್ಯಗಳನ್ನು, ಮತ್ತೆ ಕೆಲವು ತಪ್ಪು ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಪಾಲು ಏನಿಲ್ಲ ಎಂಬುದು ತೀರಾ ಬಾಲಿಶತನದ ಹೇಳಿಕೆಯಷ್ಟೇ. 1921ರಿಂದ 1945ರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕಾರಣಕ್ಕೆ ನೆಹರು 9 ಸಲ ಜೈಲಿಗೆ ತಳ್ಳಲ್ಪಡುತ್ತಾರೆ. 12 ದಿನಗಳಿಂದ ಹಿಡಿದು, 1041ಗಳ ಅವಧಿಯ ಜೈಲು ಶಿಕ್ಷೆ ಅನುಭವಿಸಿದರು. ಒಟ್ಟು 3,259 ದಿನಗಳನ್ನು ನೆಹರು ಜೈಲಿನಲ್ಲಿ ಕಳೆದರು. ಅಂದರೆ ತಮ್ಮ ಜೀವನದ ಒಂಭತ್ತು ವರ್ಷಗಳಷ್ಟು ಅವಧಿಯನ್ನು ನೆಹರು ಜೈಲಿನಲ್ಲೇ ಕಳೆದರು. ಜೈಲು ಶಿಕ್ಷೆಯನ್ನು ನೆಹರು ತಮ್ಮ ಓದಿಗೆ ಬಳಸಿಕೊಂಡರು. ಸಾಕಷ್ಟು ವೈವಿಧ್ಯಮಯ ಪುಸ್ತಕಗಳನ್ನು ಓದುತ್ತ ನಿಜವಾದ ಭಾರತದ ರೂಪುರೇಷೆ ಹೇಗಿರಬೇಕೆಂಬುದನ್ನು ಅರಿಯುತ್ತ ಹೋದರು. ಫೆಬ್ರುವರಿ 1934 ಮತ್ತು ಸೆಪ್ಟೆಂಬರ್ 1935- ಈ ಅವಧಿಯಲ್ಲಿ ನೆಹರು 188 ಪುಸ್ತಕಗಳನ್ನು ಜೈಲಿನಲ್ಲಿ ಓದಿದ್ದರು.

ಆದರೆ ಸಂಘ ಪರಿವಾರದ ಕೇಂದ್ರಸ್ಥಾನದಲ್ಲಿರುವ ಮತ್ತು ಇಡೀ ಸಂಘ ಪರಿವಾರವನ್ನು ನಿರ್ದೇಶಿಸುವ, ನಿಯಂತ್ರಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮಾತ್ರ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದಿದ್ದಷ್ಟೇ ಅಲ್ಲ, ಅದು ಬ್ರಿಟಿಷರ ಪರವಾದ ನಿಲುವುಗಳನ್ನು ಹೊಂದಿತ್ತು. ಅದರ ನಾಯಕ ಕೇಶವ ಹೆಡಗೆವಾರ್ ಸ್ವಾತಂತ್ರ್ಯ ಚಳುವಳಿಯಿಂದ ದೂರ ಇರುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದರು. ಹಿಂದೂತ್ವದ ಇನ್ನೊಬ್ಬ ನಾಯಕ ಸಾವರ್ಕರ್ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಅಂಡಮಾನ್ ಜೈಲು ಸೇರಿದ್ದು ನಿಜ. ಹಾಗೆಯೇ ಬ್ರಿಟಿಷರೊಂದಿಗೆ ರಾಜಿಯಾಗಿ ಶಿಕ್ಷೆಯಿಂದ ಮುಕ್ತಿ ಪಡೆದಿದ್ದೂ ನಿಜ.

ಸ್ವಾತಂತ್ರ್ಯ ಚಳುವಳಿಯಿಂದ ದೂರವೇ ಉಳಿದ ಸಂಘಟನೆಯಿಂದ ರೂಪುಗೊಂಡ ನರೇಂದ್ರ ಮೋದಿಯವರು, ಸುಮಾರು 9 ವರ್ಷಗಳಷ್ಟು ಕಾಲ ಜೈಲಿನಲ್ಲಿ ಕಳೆದ ನೆಹರುರ ಹೋರಾಟದ ಪಾತ್ರವನ್ನು ಕಡೆಗಣಿಸಿ ಮಾತಾಡುತ್ತಿರುವುದೇ ಹಾಸ್ಯಾಸ್ಪದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...