Homeಅಂಕಣಗಳುಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

ಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

- Advertisement -
- Advertisement -

ಮಿಥ್ಯ: ಸ್ವಾತಂತ್ರಯ ಸಿಗಲು ನೆಹರೂ ಕೊಡುಗೆ ಏನಿಲ್ಲ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದರು. ಬಿಜೆಪಿಯ ಐಟಿ ಸೆಲ್ ಕೂಡ ನೆಹರು ಕುರಿತು ಸಾಕಷ್ಟು ಫೇಕ್ ಸ್ಟೋರಿಗಳನ್ನು ಹರಡುತ್ತಲೇ ಬಂದಿದೆ.

ಸತ್ಯ: ಇವತ್ತು ಖರೀದಿಸಿದ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, ಜವಾಹರಲಾಲ್ ನೆಹರೂ ಕುರಿತು ಏನೆಲ್ಲ ಸುಳ್ಳುಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದರೂ, ನೆಹರೂ ಕೊಡುಗೆ ಈ ದೇಶಕ್ಕೆ ಅಪಾರ ಎಂಬುದನ್ನು ಅವರಿಂದ ಮುಚ್ಚಿಡಲಾಗುತ್ತಿಲ್ಲ. 1964ರಲ್ಲಿ ನೆಹರೂ ಮಡಿದಾಗ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯು ‘ಆಧುನಿಕ ಭಾರತದ ನಿಮ್ರಾತೃ’ ಎಂದು ಬಣ್ಣಿಸುತ್ತದೆ. ‘ದಿ ಎಕನಾಮಿಸ್ಟ್’ ಪತ್ರಿಕೆಯು ‘ನೆಹರೂ ಇಲ್ಲದ ಜಗತ್ತು’ ಎಂಬ ಕವರ್ಸ್ಟೋರಿಯನ್ನು ಪ್ರಕಟಿಸುತ್ತದೆ. ಆ ಹೊತ್ತಿಗಾಗಲೇ ನೆಹರೂ ತೃತೀಯ ರಾಷ್ಟ್ರಗಳಲ್ಲಿ ಹೊಸ ಭರವಸೆ ಮೂಡಿಸಿದ್ದರು.

ಸಂಸತ್ತಿನಲ್ಲಿ ಇಂತಹ ನೆಹರೂ ಕುರಿತು ಮಾತನಾಡುವ ನಮ್ಮ ದಿ ಗ್ರೇಟ್ ಪ್ರಧಾನ ಮಂತ್ರಿಯವರು, ‘ಸ್ವಾಂತಂತ್ರ್ಯ ಹೋರಾಟಕ್ಕೆ ನೆಹರೂ ಕೊಡುಗೆ ಏನಿಲ್ಲ’ ಎಂದು ಮೂರ್ಖನಂತೆ ಮಾತಾಡುತ್ತಾರೆ. ಹಾಗಾದರೆ ಮೋದಿಯವರ ಆದರ್ಶಗಳಾದ ಹೆಡಗೆವಾರ್, ಸಾವರ್ಕರ್, ಗೋಳ್ವಾಲ್ಕರ್-ಈ ತರಿವಳಿಗಳ ಕೊಡುಗೆ ಏನು? ಇವರು ಪುಟ್ಟಾಪೂರಾ ಬ್ರಿಟಿಷರ ಚೇಲಾಗಳಂತೆ ವರ್ತಿಸಿದ್ದಕ್ಕೆ ಇತಿಹಾಸದಲ್ಲಿ ದಾಖಲೆಗಳಿವೆ. ಅದಿರಲಿ, ಇವರ ಕುರಿತು ಮೋದಿ ಸಾಹೇಬರೇಕೆ ಮಾತೇ ಆಡಲ್ಲ? ಈ ತ್ರಿವಳಿಗಳನ್ನು ಆರೆಸ್ಸೆಸ್ ಆರಾಧಿಸುತ್ತದೆ, ಮೋದಿಗೂ ಕೂಡ ಈ ಮೂವರು ಆದರ್ಶರೇ. ಬಟ್, ಬಾಹ್ಯವಾಗಿ ಮೋದಿ ಎಂದೂ ಇವರ ಪರ ಮಾತಾಡುತ್ತಿಲ್ಲ. ಮಾತಾಡುವ ಧಮ್ಮೂ ಇಲ್ಲ. ಯಾಕೆಂದರೆ ಈ ಮೂವರೂ ಮೋದಿಯಷ್ಟೇ ದೇಶದ್ರೋಹಿಗಳಾಗಿದ್ದರು!

ಹೀಗಾಗಿ ಐದು ವರ್ಷಗಳಲ್ಲಿ ನೀವೇನು ಮಾಡಿದಿರಾ ಎಂಬ ಪ್ರಶ್ನೆಗೆ ಉತ್ತರಿಸುವ ಯೋಗ್ಯತೆಯನ್ನೇ ಕಳೆದುಕೊಂಡಿರುವ ಪ್ರಧಾನಿ, ನೆಹರೂ ಈ ದೇಶಕ್ಕೆ ಏನು ಮಾಡಿದರು, ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿತು ಎಂದು ವಿಷಯಾಂತರ ಮಾಡುತ್ತಿದ್ದಾರೆ. ನೆಹರು ವ್ಯಕ್ತಿತ್ವವನ್ನು ಮಸುಕಾಗಿಸುವ ಉದ್ದೇಶದಿಂದಲೇ ಹಲವಾರು ಮಿಥ್ಯಗಳನ್ನು, ಮತ್ತೆ ಕೆಲವು ತಪ್ಪು ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಪಾಲು ಏನಿಲ್ಲ ಎಂಬುದು ತೀರಾ ಬಾಲಿಶತನದ ಹೇಳಿಕೆಯಷ್ಟೇ. 1921ರಿಂದ 1945ರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕಾರಣಕ್ಕೆ ನೆಹರು 9 ಸಲ ಜೈಲಿಗೆ ತಳ್ಳಲ್ಪಡುತ್ತಾರೆ. 12 ದಿನಗಳಿಂದ ಹಿಡಿದು, 1041ಗಳ ಅವಧಿಯ ಜೈಲು ಶಿಕ್ಷೆ ಅನುಭವಿಸಿದರು. ಒಟ್ಟು 3,259 ದಿನಗಳನ್ನು ನೆಹರು ಜೈಲಿನಲ್ಲಿ ಕಳೆದರು. ಅಂದರೆ ತಮ್ಮ ಜೀವನದ ಒಂಭತ್ತು ವರ್ಷಗಳಷ್ಟು ಅವಧಿಯನ್ನು ನೆಹರು ಜೈಲಿನಲ್ಲೇ ಕಳೆದರು. ಜೈಲು ಶಿಕ್ಷೆಯನ್ನು ನೆಹರು ತಮ್ಮ ಓದಿಗೆ ಬಳಸಿಕೊಂಡರು. ಸಾಕಷ್ಟು ವೈವಿಧ್ಯಮಯ ಪುಸ್ತಕಗಳನ್ನು ಓದುತ್ತ ನಿಜವಾದ ಭಾರತದ ರೂಪುರೇಷೆ ಹೇಗಿರಬೇಕೆಂಬುದನ್ನು ಅರಿಯುತ್ತ ಹೋದರು. ಫೆಬ್ರುವರಿ 1934 ಮತ್ತು ಸೆಪ್ಟೆಂಬರ್ 1935- ಈ ಅವಧಿಯಲ್ಲಿ ನೆಹರು 188 ಪುಸ್ತಕಗಳನ್ನು ಜೈಲಿನಲ್ಲಿ ಓದಿದ್ದರು.

ಆದರೆ ಸಂಘ ಪರಿವಾರದ ಕೇಂದ್ರಸ್ಥಾನದಲ್ಲಿರುವ ಮತ್ತು ಇಡೀ ಸಂಘ ಪರಿವಾರವನ್ನು ನಿರ್ದೇಶಿಸುವ, ನಿಯಂತ್ರಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮಾತ್ರ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದಿದ್ದಷ್ಟೇ ಅಲ್ಲ, ಅದು ಬ್ರಿಟಿಷರ ಪರವಾದ ನಿಲುವುಗಳನ್ನು ಹೊಂದಿತ್ತು. ಅದರ ನಾಯಕ ಕೇಶವ ಹೆಡಗೆವಾರ್ ಸ್ವಾತಂತ್ರ್ಯ ಚಳುವಳಿಯಿಂದ ದೂರ ಇರುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದರು. ಹಿಂದೂತ್ವದ ಇನ್ನೊಬ್ಬ ನಾಯಕ ಸಾವರ್ಕರ್ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಅಂಡಮಾನ್ ಜೈಲು ಸೇರಿದ್ದು ನಿಜ. ಹಾಗೆಯೇ ಬ್ರಿಟಿಷರೊಂದಿಗೆ ರಾಜಿಯಾಗಿ ಶಿಕ್ಷೆಯಿಂದ ಮುಕ್ತಿ ಪಡೆದಿದ್ದೂ ನಿಜ.

ಸ್ವಾತಂತ್ರ್ಯ ಚಳುವಳಿಯಿಂದ ದೂರವೇ ಉಳಿದ ಸಂಘಟನೆಯಿಂದ ರೂಪುಗೊಂಡ ನರೇಂದ್ರ ಮೋದಿಯವರು, ಸುಮಾರು 9 ವರ್ಷಗಳಷ್ಟು ಕಾಲ ಜೈಲಿನಲ್ಲಿ ಕಳೆದ ನೆಹರುರ ಹೋರಾಟದ ಪಾತ್ರವನ್ನು ಕಡೆಗಣಿಸಿ ಮಾತಾಡುತ್ತಿರುವುದೇ ಹಾಸ್ಯಾಸ್ಪದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...