Homeಅಂಕಣಗಳುಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

ಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

- Advertisement -
- Advertisement -

| ಯಾಹೂ |

ಹಿಂದೂ ಧರ್ಮಕ್ಕಂಟಿದ ಜಾತಿ ಎಂಬ ಶಾಪದ ಕಾಯಿಲೆ ಉಲ್ಬಣಿಸಿದೆಯಂತಲ್ಲಾ. ಒಂದು ಕಲಸಿದ ಪದಾರ್ಥ ಶೇಖರಗೊಂಡ ತುದಿ, ಕುತುರೆ ಎನ್ನಿಸಿಕೊಳ್ಳುತ್ತದೆ. ಜಾತಿಗಳ ಮೇಲೆ ಕುಳಿತ ಸ್ವಾಮಿಗಳೂ ಈ ಕುತುರೆಯೇ, ಅದಕ್ಕೆ ಯಾವಾಗಲೂ ಊಧ್ರ್ವ ಮುಖವಿರಬೇಕು. ಒಳ್ಳೆ ಭಾಷೆ, ನಡವಳಿಕೆ ಬಹಳ ಮುಖ್ಯ. ಅದರಲ್ಲೂ ಭಾಷೆ ಬಸವಣ್ಣ ಹೇಳಿದಂತೆ ಸ್ಪಟಿಕದ ಸಲಾಕೆಯಂತಿರಬೇಕು. ಕಬ್ಬಿಣದ ರಾಡು ಅಥವಾ ಚೂರಿಯಂತಿರಬಾರದು. ಆದರೆ, ಈ ಆಧುನಿಕ ಯುಗದ ಸ್ವಾಮಿಗಳನ್ನು ನೋಡಿದರೆ, ಬಗಲಲ್ಲಿ ಚೂರಿ ಇಟ್ಟುಕೊಂಡವರಂತೆ ಕಾಣುತ್ತಾರಲ್ಲಾ. ಈಚೆಗೆ ವಾಲ್ಮೀಕಿ ಜನಾಂಗ ಮೀಸಲಾತಿ ಬೇಡಿಕೆಗಾಗಿ ಸಂಘಟಿತಗೊಂಡು, ನೂರಾರು ಮೈಲಿ ಕಾಲ್ನಡಿಗೆ ಮಾಡಿ ಬೆಂಗಳೂರು ತಲುಪಿತು. ಸಾವಿರಾರು ಜನರ ತಲೆ ನೋಡಿದ ಪ್ರಸನ್ನಾನಂದ ಪುರಿಯವರ ತಲೆ ತಿರುಗಿತು. ನಾಲಿಗೆ ಹೊರಳಿತು, “ನಮ್ಮ ಜನಾಂಗದ 17 ಶಾಸಕರು ಕೈಕೊಟ್ಟರೆ ಕುಮಾರಸ್ವಾಮಿ ಗೊಟಕ್ ಅಂತಾರೆ, ಇಲ್ಲಿಗೆ ಕುಮಾರಸ್ವಾಮಿನೂ ಬರಬೇಕು, ಅವರಪ್ಪನೂ ಬರಬೇಕು ಎಂದರು”. ಅಲ್ಲಿಗೆ ಪಾದಯಾತ್ರೆಯ ಸಾಧನೆ ಗೊಟಕ್ ಅಂತು. ಕುಂಬಾರನಿಗೆ ನೂರು ದಿವಸ, ದೊಣ್ಣೆ ನಾಯಕನಿಗೆ ಮೂರು ನಿಮಿಷ ಎಂಬಂತೆ ಮಾಡಿದ ಪ್ರಸನ್ನಾನಂದ ಪುರಿ ಸ್ವಾಮಿಗೆ ಯಾರಾದರೂ `ಪ್ರಸನ್ನ’ ಅಂದರೇನೆಂದು ಹೇಳಿಕೊಡಬೇಕಾಗಿದೆಯಲ್ಲಾ, ಥೂತ್ತೇರಿ!

ಈ ಸ್ವಾಮಿಗಳ ಅವಾಂತರಗಳು ಇನ್ನ ಭವಿಷ್ಯದಲ್ಲಿ ಭೀಕರವಾಗಿವೆಯಂತಲ್ಲಾ. ಹವ್ಯಕ ಜನಾಂಗದ ವಿದ್ವಾಂಸರನ್ನ ಕೇಳಿದರೆ, ನಮ್ಮ ಜನಾಂಗದ ಗುರುಗಳ ಸಾಧನೆ ಯಾರಿಂದಲೂ ಸಾಧ್ಯವಿಲ್ಲ ಬಿಡಿ. ಅವರು ಮಾಡಿದ್ದು ರೇಪಲ್ಲ ಒಪ್ಪಿತ ಸಂಭೋಗ ಎಂಬ ಕೋರ್ಟ್ ತೀರ್ಪನ್ನೇ ಮಠೋಪಜೀವಿಗಳು “ಹುರ್ರೇ ನಮ್ಮ ಸ್ವಾಮಿಗಳು ರೇಪು ಮಾಡಿಲ್ಲವಂತೆ ಬರೀ ಸಂಭೋಗವಂತೆ” ಎಂದು ಪಟಾಕಿ ಸಿಡಿಸಿ ಮಲೆನಾಡೇ ಮಾರ್ದನಿಗೊಳ್ಳುವಂತೆ ಮಾಡಿದರು. ಅದಷ್ಟೇ ಅಲ್ಲ, ಸ್ವಾಮಿಗಳಾದವರಿಗೆ ಸಂಭೋಗ ಕಡ್ಡಾಯ; ಅದರಲ್ಲಿ ಯಾವ ಅಪಮಾನವೂ ಇಲ್ಲ, ಅಂಜಿಕೆಯೂ ಇಲ್ಲ ಎಂಬಂತೆ ಕುಣಿದು ಕುಪ್ಪಳಿಸಿವೆ. ಸ್ವಾಮಿಗಳ ಹಿಂಬಾಲಕರ ಎದುರು ನೈತಿಕತೆ ಉಳಿಸಿಕೊಂಡ ಜನ ನೆಮ್ಮದಿಯಿಂದ ಬದುಕುವುದೇ ದುಸ್ತರವಾಗಿದೆ. ಅಂತೂ ನಮ್ಮ ರಘುಪತಿ ರಾಘವನ ಸಾಧನೆ ಸರಿಗಟ್ಟುವ ಸ್ವಾಮಿ ಇನ್ನು ಬರಲಾರ ಎಂದರಲ್ಲಾ. “ಸ್ವಲ್ಪ ಇರಿ ಉಡುಪಿಯ ಮಠೋಪಜೀವಿಗಳ ಬಗ್ಗೆ ಏನು ಹೇಳತ್ತೀರಿ” ಎಂದಾಗ, ಉಡುಪಿ ಬಿಡಿ ಅಲ್ಲಿ ವ್ಯಭಿಚಾರ ಕಡ್ಡಾಯ, ಮಕ್ಕಳಾದರೆ ಅಲ್ಲಿ ಇಲ್ಲಿ ಬಿಟ್ಟು ಓದಿಸಬಹುದು. ಇಂತದೊಂದು ಆಪಾದನೆಗೆ ಬಲರಾಮನ ಗೋವಿನಂತಹ ಪೇಜಾವರರೇ ಗುರಿಯಾಗಿರುವಾಗ ಉಳಿದವರ ಬಗ್ಗೆ ಮಾತನಾಡುವುದೇ ಮಹಾಪರಾಧ ಎಂದರಲ್ಲಾ, ಥೂತ್ತೇರಿ!!

ಇನ್ನ ಸಿದ್ದರಾಮಯ್ಯನ ಅಭಿಮಾನಿ ಸ್ವಾಮಿಯೊಬ್ಬರು ಆಗಾಗ್ಗೆ ಸುದ್ದಿ ಮಾಡುತ್ತಲೇ ಇರುತ್ತಾರೆ. ಅದಕ್ಕೂ ಮೊದಲು `ಆ ಸಿದ್ದರಾಮಯ್ಯ ನನಗೆ ಬರೀ ನಮಸ್ಕಾರ ಮಾಡುತ್ತಾನೆಯೇ ಹೊರತು, ಕಾಲಿಗೆ ಬೀಳುವುದಿಲ್ಲ’ ಎಂದು ಗುಟುರು ಹಾಕಿದ್ದ ಆ ಗುರುಗಳು, `ಸಿದ್ದು ಮತ್ತೆ ಮುಖ್ಯಮಂತ್ರಿಯಾಗಬೇಕು. ನನ್ನ ಆಶೀರ್ವಾದ ಸದಾ ಅವರ ಜೊತೆಯಲ್ಲಿರುತ್ತದೆ’ ಎಂದಿದ್ದರು. ಈ ಆಶೀರ್ವಾದ ಅಂದರೇನು, ಅದು ಸದಾ ಜೊತೆಯಲ್ಲಿರಬೇಕಾದರೆ ಅದರ ಆಕಾರ ಏನು ಎಂಬುದನ್ನು ಗುರುಗಳು ವಿವರಿಸಿಲ್ಲ. ಏಕೆಂದರೆ ಅವರಾಡಿದ ಮಾತನ್ನೇ ಭಕ್ತಾದಿಗಳು ತಮಗೆ ತಿಳಿದಂತೆ ಅರ್ಥೈಸಿಕೊಳ್ಳಬೇಕು. ಇದೆಲ್ಲಕ್ಕಿಂತ ಮುಖ್ಯವಾಗಿ ಸದರಿ ಗುರುಗಳು ಕುರಿ ರಾಷ್ಟ್ರೀಯ ಪ್ರಾಣಿ. ಅದರ ಹತ್ಯೆ ನಿಲ್ಲಿಸಿ ಗೌರವ ಸಲ್ಲಿಸಬೇಕೆಂದು ಕರೆಕೊಟ್ಟಿದ್ದರು. ಈ ವಿಷಯವಾಗಿ ಕುರಿಗಳ ಕಡೆಯಿಂದ ಯಾವ ಬೆಂಬಲ ಬರದಿದ್ದರೂ, ಕುರಿ ಕೂದು ಧರ್ಮ ಸುಲಿದು ದುಗ್ಗಾಣಿಗೆ ತೆಗೆದುಕೊಂಡು ಹೋಗುವ ಸಾಬರು, ಬೋಟಿಪ್ರಿಯರು, ಚಾಪೀಸ್ ಭಕ್ಷುಗಳು, ಕೈಮಾಕಾಂಕ್ಷಿಗಳು ಮತ್ತೆ ತಲೆಕಾಲು ಸೂಪಿನ ವ್ಯಸನಿಗಳು ಒಕ್ಕೊರಲಿನಿಂದ ಪ್ರತಿಭಟಿಸಿದಾಗ ಕುರಿಗಳೇ ತಲೆಯಲ್ಲಾಡಿಸಿ ಬೆಂಬಲ ಸೂಚಿಸಿದವಲ್ಲಾ, ಥೂತ್ತೇರಿ!!!

ಜಗದ್ಗುರುಗಳೇ ದಿಕ್ಕು ತಪ್ಪಿದ ಭಾಷೆ ಬಳಸಿ, ಅಸಂಬದ್ದ ಮಾತನಾಡುತ್ತಿರುವಾಗ, ಇನ್ನ ಅವರ ಕಾಲಿಗೆ ಬೀಳುತ್ತಿರುವ ರಾಜಕಾರಣಿಗಳ ಮಾತು ಕೇಳಬೇಕೆ, ಅದರಲ್ಲೂ ನಮ್ಮ ಈಶ್ವರಪ್ಪನ ನಾಲಿಗೆಯಂತೂ ಬಳ್ಳಾರಿ ಜಾಲಿ ಮುಳ್ಳಿನಂತೆ. ಎಷ್ಟೇ ಆಗಲಿ ಅಲ್ಲಿಂದಲೇ ಶಿವಮೊಗ್ಗದ ಕಡೆ ಹೋದವರಲ್ಲವೇ. ಆದರೂ ಕಲೆ, ಸಾಹಿತ್ಯ, ಸಂಗೀತ, ಸಂಸ್ಕøತಿಗಳನ್ನ ಪೋಷಿಸಿಕೊಂಡು ಬರುತ್ತಿರುವ ಆ ಶಿವಮೊಗ್ಗದ ಸಂಸ್ಕøತಿಯ ಕಿಂಚಿತ್ ಸ್ಪರ್ಶವೂ ತಮ್ಮ ಮೇಲಾಗದಂತೆ ಎಚ್ಚರಿಕೆ ವಹಿಸಿ ಮೇಲೇರಿದ ಈಶ್ವರಪ್ಪನ ಒರಿಜಿನಾಲಿಟಿಯನ್ನ ಮೆಚ್ಚಲೇಬೇಕಂತಲ್ಲಾ. ಯಾರೇ ಆಗಲಿ ತಮ್ಮ ಮೂಲ ಸಂಸ್ಕøತಿ ಬಿಟ್ಟುಕೊಟ್ಟರೆ ವ್ಯಕ್ತಿತ್ವವೇ ನಾಶವಾಗಿ ಹೋದಂತೆ, ಇದನ್ನ ಇಟ್ಟುಕೊಂಡರೆ “ಪಾಪ ಅವನೆಡ್ತಿ ಸರಿಯಿಲ್ಲ ಇನ್ನೇನು ಮಾಡ್ತನೆ” ಎನ್ನುತ್ತಾರೆ. ಯಾರಾದರೂ ಹೆಣ್ಣು ಮಗಳು ರೇಪಿಗೆ ಒಳಗಾದರೆ “ಕೇಳಿದ ಕೂಡ್ಳೆ ಕೊಟ್ಟಿದ್ರೆ ರೇಪ್ಯಾಕಾಗದು” ಎನ್ನುತ್ತಾರೆ. ಹಾಗೆಯೇ “ಮಂತ್ರಿಯಾಗಿ ಇಷ್ಟು ಆಸ್ತಿ ಮಾಡಿಕೊಂಡಿರಲ್ಲಾ” ಎಂದರೆ, ಮಿನಿಸ್ಟರಾಗಿ ಪಾರ್ಟಿ ಜನಗಳನ್ನ ಸಾಕಬೇಕಲ್ಲ ಏಣು ಮಾಡ್ಳಿ ಎಂದು ಇನ್ನ ಅಂದಿಲ್ಲವಂತಲ್ಲಾ, ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...