Homeಅಂಕಣಗಳುಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

ಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

- Advertisement -
- Advertisement -

| ಯಾಹೂ |

ಹಿಂದೂ ಧರ್ಮಕ್ಕಂಟಿದ ಜಾತಿ ಎಂಬ ಶಾಪದ ಕಾಯಿಲೆ ಉಲ್ಬಣಿಸಿದೆಯಂತಲ್ಲಾ. ಒಂದು ಕಲಸಿದ ಪದಾರ್ಥ ಶೇಖರಗೊಂಡ ತುದಿ, ಕುತುರೆ ಎನ್ನಿಸಿಕೊಳ್ಳುತ್ತದೆ. ಜಾತಿಗಳ ಮೇಲೆ ಕುಳಿತ ಸ್ವಾಮಿಗಳೂ ಈ ಕುತುರೆಯೇ, ಅದಕ್ಕೆ ಯಾವಾಗಲೂ ಊಧ್ರ್ವ ಮುಖವಿರಬೇಕು. ಒಳ್ಳೆ ಭಾಷೆ, ನಡವಳಿಕೆ ಬಹಳ ಮುಖ್ಯ. ಅದರಲ್ಲೂ ಭಾಷೆ ಬಸವಣ್ಣ ಹೇಳಿದಂತೆ ಸ್ಪಟಿಕದ ಸಲಾಕೆಯಂತಿರಬೇಕು. ಕಬ್ಬಿಣದ ರಾಡು ಅಥವಾ ಚೂರಿಯಂತಿರಬಾರದು. ಆದರೆ, ಈ ಆಧುನಿಕ ಯುಗದ ಸ್ವಾಮಿಗಳನ್ನು ನೋಡಿದರೆ, ಬಗಲಲ್ಲಿ ಚೂರಿ ಇಟ್ಟುಕೊಂಡವರಂತೆ ಕಾಣುತ್ತಾರಲ್ಲಾ. ಈಚೆಗೆ ವಾಲ್ಮೀಕಿ ಜನಾಂಗ ಮೀಸಲಾತಿ ಬೇಡಿಕೆಗಾಗಿ ಸಂಘಟಿತಗೊಂಡು, ನೂರಾರು ಮೈಲಿ ಕಾಲ್ನಡಿಗೆ ಮಾಡಿ ಬೆಂಗಳೂರು ತಲುಪಿತು. ಸಾವಿರಾರು ಜನರ ತಲೆ ನೋಡಿದ ಪ್ರಸನ್ನಾನಂದ ಪುರಿಯವರ ತಲೆ ತಿರುಗಿತು. ನಾಲಿಗೆ ಹೊರಳಿತು, “ನಮ್ಮ ಜನಾಂಗದ 17 ಶಾಸಕರು ಕೈಕೊಟ್ಟರೆ ಕುಮಾರಸ್ವಾಮಿ ಗೊಟಕ್ ಅಂತಾರೆ, ಇಲ್ಲಿಗೆ ಕುಮಾರಸ್ವಾಮಿನೂ ಬರಬೇಕು, ಅವರಪ್ಪನೂ ಬರಬೇಕು ಎಂದರು”. ಅಲ್ಲಿಗೆ ಪಾದಯಾತ್ರೆಯ ಸಾಧನೆ ಗೊಟಕ್ ಅಂತು. ಕುಂಬಾರನಿಗೆ ನೂರು ದಿವಸ, ದೊಣ್ಣೆ ನಾಯಕನಿಗೆ ಮೂರು ನಿಮಿಷ ಎಂಬಂತೆ ಮಾಡಿದ ಪ್ರಸನ್ನಾನಂದ ಪುರಿ ಸ್ವಾಮಿಗೆ ಯಾರಾದರೂ `ಪ್ರಸನ್ನ’ ಅಂದರೇನೆಂದು ಹೇಳಿಕೊಡಬೇಕಾಗಿದೆಯಲ್ಲಾ, ಥೂತ್ತೇರಿ!

ಈ ಸ್ವಾಮಿಗಳ ಅವಾಂತರಗಳು ಇನ್ನ ಭವಿಷ್ಯದಲ್ಲಿ ಭೀಕರವಾಗಿವೆಯಂತಲ್ಲಾ. ಹವ್ಯಕ ಜನಾಂಗದ ವಿದ್ವಾಂಸರನ್ನ ಕೇಳಿದರೆ, ನಮ್ಮ ಜನಾಂಗದ ಗುರುಗಳ ಸಾಧನೆ ಯಾರಿಂದಲೂ ಸಾಧ್ಯವಿಲ್ಲ ಬಿಡಿ. ಅವರು ಮಾಡಿದ್ದು ರೇಪಲ್ಲ ಒಪ್ಪಿತ ಸಂಭೋಗ ಎಂಬ ಕೋರ್ಟ್ ತೀರ್ಪನ್ನೇ ಮಠೋಪಜೀವಿಗಳು “ಹುರ್ರೇ ನಮ್ಮ ಸ್ವಾಮಿಗಳು ರೇಪು ಮಾಡಿಲ್ಲವಂತೆ ಬರೀ ಸಂಭೋಗವಂತೆ” ಎಂದು ಪಟಾಕಿ ಸಿಡಿಸಿ ಮಲೆನಾಡೇ ಮಾರ್ದನಿಗೊಳ್ಳುವಂತೆ ಮಾಡಿದರು. ಅದಷ್ಟೇ ಅಲ್ಲ, ಸ್ವಾಮಿಗಳಾದವರಿಗೆ ಸಂಭೋಗ ಕಡ್ಡಾಯ; ಅದರಲ್ಲಿ ಯಾವ ಅಪಮಾನವೂ ಇಲ್ಲ, ಅಂಜಿಕೆಯೂ ಇಲ್ಲ ಎಂಬಂತೆ ಕುಣಿದು ಕುಪ್ಪಳಿಸಿವೆ. ಸ್ವಾಮಿಗಳ ಹಿಂಬಾಲಕರ ಎದುರು ನೈತಿಕತೆ ಉಳಿಸಿಕೊಂಡ ಜನ ನೆಮ್ಮದಿಯಿಂದ ಬದುಕುವುದೇ ದುಸ್ತರವಾಗಿದೆ. ಅಂತೂ ನಮ್ಮ ರಘುಪತಿ ರಾಘವನ ಸಾಧನೆ ಸರಿಗಟ್ಟುವ ಸ್ವಾಮಿ ಇನ್ನು ಬರಲಾರ ಎಂದರಲ್ಲಾ. “ಸ್ವಲ್ಪ ಇರಿ ಉಡುಪಿಯ ಮಠೋಪಜೀವಿಗಳ ಬಗ್ಗೆ ಏನು ಹೇಳತ್ತೀರಿ” ಎಂದಾಗ, ಉಡುಪಿ ಬಿಡಿ ಅಲ್ಲಿ ವ್ಯಭಿಚಾರ ಕಡ್ಡಾಯ, ಮಕ್ಕಳಾದರೆ ಅಲ್ಲಿ ಇಲ್ಲಿ ಬಿಟ್ಟು ಓದಿಸಬಹುದು. ಇಂತದೊಂದು ಆಪಾದನೆಗೆ ಬಲರಾಮನ ಗೋವಿನಂತಹ ಪೇಜಾವರರೇ ಗುರಿಯಾಗಿರುವಾಗ ಉಳಿದವರ ಬಗ್ಗೆ ಮಾತನಾಡುವುದೇ ಮಹಾಪರಾಧ ಎಂದರಲ್ಲಾ, ಥೂತ್ತೇರಿ!!

ಇನ್ನ ಸಿದ್ದರಾಮಯ್ಯನ ಅಭಿಮಾನಿ ಸ್ವಾಮಿಯೊಬ್ಬರು ಆಗಾಗ್ಗೆ ಸುದ್ದಿ ಮಾಡುತ್ತಲೇ ಇರುತ್ತಾರೆ. ಅದಕ್ಕೂ ಮೊದಲು `ಆ ಸಿದ್ದರಾಮಯ್ಯ ನನಗೆ ಬರೀ ನಮಸ್ಕಾರ ಮಾಡುತ್ತಾನೆಯೇ ಹೊರತು, ಕಾಲಿಗೆ ಬೀಳುವುದಿಲ್ಲ’ ಎಂದು ಗುಟುರು ಹಾಕಿದ್ದ ಆ ಗುರುಗಳು, `ಸಿದ್ದು ಮತ್ತೆ ಮುಖ್ಯಮಂತ್ರಿಯಾಗಬೇಕು. ನನ್ನ ಆಶೀರ್ವಾದ ಸದಾ ಅವರ ಜೊತೆಯಲ್ಲಿರುತ್ತದೆ’ ಎಂದಿದ್ದರು. ಈ ಆಶೀರ್ವಾದ ಅಂದರೇನು, ಅದು ಸದಾ ಜೊತೆಯಲ್ಲಿರಬೇಕಾದರೆ ಅದರ ಆಕಾರ ಏನು ಎಂಬುದನ್ನು ಗುರುಗಳು ವಿವರಿಸಿಲ್ಲ. ಏಕೆಂದರೆ ಅವರಾಡಿದ ಮಾತನ್ನೇ ಭಕ್ತಾದಿಗಳು ತಮಗೆ ತಿಳಿದಂತೆ ಅರ್ಥೈಸಿಕೊಳ್ಳಬೇಕು. ಇದೆಲ್ಲಕ್ಕಿಂತ ಮುಖ್ಯವಾಗಿ ಸದರಿ ಗುರುಗಳು ಕುರಿ ರಾಷ್ಟ್ರೀಯ ಪ್ರಾಣಿ. ಅದರ ಹತ್ಯೆ ನಿಲ್ಲಿಸಿ ಗೌರವ ಸಲ್ಲಿಸಬೇಕೆಂದು ಕರೆಕೊಟ್ಟಿದ್ದರು. ಈ ವಿಷಯವಾಗಿ ಕುರಿಗಳ ಕಡೆಯಿಂದ ಯಾವ ಬೆಂಬಲ ಬರದಿದ್ದರೂ, ಕುರಿ ಕೂದು ಧರ್ಮ ಸುಲಿದು ದುಗ್ಗಾಣಿಗೆ ತೆಗೆದುಕೊಂಡು ಹೋಗುವ ಸಾಬರು, ಬೋಟಿಪ್ರಿಯರು, ಚಾಪೀಸ್ ಭಕ್ಷುಗಳು, ಕೈಮಾಕಾಂಕ್ಷಿಗಳು ಮತ್ತೆ ತಲೆಕಾಲು ಸೂಪಿನ ವ್ಯಸನಿಗಳು ಒಕ್ಕೊರಲಿನಿಂದ ಪ್ರತಿಭಟಿಸಿದಾಗ ಕುರಿಗಳೇ ತಲೆಯಲ್ಲಾಡಿಸಿ ಬೆಂಬಲ ಸೂಚಿಸಿದವಲ್ಲಾ, ಥೂತ್ತೇರಿ!!!

ಜಗದ್ಗುರುಗಳೇ ದಿಕ್ಕು ತಪ್ಪಿದ ಭಾಷೆ ಬಳಸಿ, ಅಸಂಬದ್ದ ಮಾತನಾಡುತ್ತಿರುವಾಗ, ಇನ್ನ ಅವರ ಕಾಲಿಗೆ ಬೀಳುತ್ತಿರುವ ರಾಜಕಾರಣಿಗಳ ಮಾತು ಕೇಳಬೇಕೆ, ಅದರಲ್ಲೂ ನಮ್ಮ ಈಶ್ವರಪ್ಪನ ನಾಲಿಗೆಯಂತೂ ಬಳ್ಳಾರಿ ಜಾಲಿ ಮುಳ್ಳಿನಂತೆ. ಎಷ್ಟೇ ಆಗಲಿ ಅಲ್ಲಿಂದಲೇ ಶಿವಮೊಗ್ಗದ ಕಡೆ ಹೋದವರಲ್ಲವೇ. ಆದರೂ ಕಲೆ, ಸಾಹಿತ್ಯ, ಸಂಗೀತ, ಸಂಸ್ಕøತಿಗಳನ್ನ ಪೋಷಿಸಿಕೊಂಡು ಬರುತ್ತಿರುವ ಆ ಶಿವಮೊಗ್ಗದ ಸಂಸ್ಕøತಿಯ ಕಿಂಚಿತ್ ಸ್ಪರ್ಶವೂ ತಮ್ಮ ಮೇಲಾಗದಂತೆ ಎಚ್ಚರಿಕೆ ವಹಿಸಿ ಮೇಲೇರಿದ ಈಶ್ವರಪ್ಪನ ಒರಿಜಿನಾಲಿಟಿಯನ್ನ ಮೆಚ್ಚಲೇಬೇಕಂತಲ್ಲಾ. ಯಾರೇ ಆಗಲಿ ತಮ್ಮ ಮೂಲ ಸಂಸ್ಕøತಿ ಬಿಟ್ಟುಕೊಟ್ಟರೆ ವ್ಯಕ್ತಿತ್ವವೇ ನಾಶವಾಗಿ ಹೋದಂತೆ, ಇದನ್ನ ಇಟ್ಟುಕೊಂಡರೆ “ಪಾಪ ಅವನೆಡ್ತಿ ಸರಿಯಿಲ್ಲ ಇನ್ನೇನು ಮಾಡ್ತನೆ” ಎನ್ನುತ್ತಾರೆ. ಯಾರಾದರೂ ಹೆಣ್ಣು ಮಗಳು ರೇಪಿಗೆ ಒಳಗಾದರೆ “ಕೇಳಿದ ಕೂಡ್ಳೆ ಕೊಟ್ಟಿದ್ರೆ ರೇಪ್ಯಾಕಾಗದು” ಎನ್ನುತ್ತಾರೆ. ಹಾಗೆಯೇ “ಮಂತ್ರಿಯಾಗಿ ಇಷ್ಟು ಆಸ್ತಿ ಮಾಡಿಕೊಂಡಿರಲ್ಲಾ” ಎಂದರೆ, ಮಿನಿಸ್ಟರಾಗಿ ಪಾರ್ಟಿ ಜನಗಳನ್ನ ಸಾಕಬೇಕಲ್ಲ ಏಣು ಮಾಡ್ಳಿ ಎಂದು ಇನ್ನ ಅಂದಿಲ್ಲವಂತಲ್ಲಾ, ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...