Homeಅಂಕಣಗಳುಹಂಪಿ ವಿಶ್ವವಿದ್ಯಾಲಯ ಘನತೆ, ವೈಚಾರಿಕತೆಯ ಅಳಿವು-ಉಳಿವು

ಹಂಪಿ ವಿಶ್ವವಿದ್ಯಾಲಯ ಘನತೆ, ವೈಚಾರಿಕತೆಯ ಅಳಿವು-ಉಳಿವು

- Advertisement -
- Advertisement -

ಬಿ. ಶ್ರೀಪಾದ ಬಟ್ |

ಹಂಪಿ ವಿಶ್ವವಿದ್ಯಾಲಯದಲ್ಲಿನ ಇತ್ತೀಚಿನ ವಿವಾದವನ್ನು ಗಮನಿಸಿದಾಗ ಅಲ್ಲಿನ ಕುಲಪತಿಗಳಾದ ಮಲ್ಲಿಕಾ ಘಂಟಿಯವರಿಗೆ ಯಾರು ವಿದ್ಯಾಸಾದಕರು, ಯಾರು ವಿ

ದ್ವಂಸಕರು ಎಂಬುದರ ಅರಿವು ಇಲ್ಲದೆ ಹೋಯಿತೆ ಎನ್ನುವ ಪ್ರಶ್ನೆ ಮೂಡುತ್ತದೆ. ವಿಶಯವೇನೆಂದರೆ ಕನ್ನಡ ವಿವಿಯ ನುಡಿಹಬ್ಬದ ಪ್ರಯುಕ್ತ ಡಿಸೆಂಬರ್ 31, 2018-ಜನವರಿ 1, 2019 ರಂದು ಆಯೋಜಿಸಲಾಗಿದ್ದ ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಬಕ್ಕೆ ಸುಳ್ಳು ಬಿತ್ತಿ ದ್ವೇಶವನ್ನು ಬೆಳೆಸಿದ ಪತ್ರಕರ್ತ ವಿಶ್ವೇಶ್ವರ ಭಟ್ಟರನ್ನು ಅತಿಥಿಗಳನ್ನಾಗಿ ಕರೆದಿದ್ದು ಇಡೀ ವಿವಾದದ ಕೇಂದ್ರವಾಗಿದೆ. ಸದರಿ ಪತ್ರಕರ್ತರನ್ನು ಯಾವ ಅರ್ಹತೆಯ ಮೇಲೆ ಆಹ್ವಾನಿಸಿದ್ದೀರಿ ಎಂದು ಪ್ರಜ್ನಾವಂತರು ಪ್ರಶ್ನಿಸಿ

ಹಂಪಿ ವಿಶ್ವವಿದ್ಯಾಲಯ

ದ್ದಾರೆ. ಏಕೆಂದರೆ ವಿಶ್ವೇಶ್ವರ ಭಟ್ಟ ಎನ್ನುವ ಪತ್ರಕರ್ತ ಕನ್ನಡ ಪತ್ರಿಕೋದ್ಯಮವನ್ನು ಅದೋಗತಿಗಿಳಿಸಿದ, ಮಹಿಳೆಯರ ಕುರಿತು ಅತ್ಯಂತ ಕೀಳು ಮಟ್ಟದಲ್ಲಿ, ತುಚ್ಚವಾಗಿ ಬರೆದಂತಹ ವ್ಯಕ್ತಿ. ಹಿಂದುತ್ವ ಮತಾಂದತೆಯ ವಿಶವನ್ನು ತ

ನ್ನ ಪತ್ರಿಕೆಯಲ್ಲಿ ದಿನನಿತ್ಯ ಪ್ರಚಾರ ಮಾಡಿದ, ಆ ಮೂಲಕ ಸಮಾಜದ ಸ್ವಾಸ್ಥ್ಯ ಕೆಡೆಸಿದ ಈ ಭಟ್ಟರನ್ನು ವಿಶಭಟ್ಟ ಎಂದು ಅಡ್ಡ ಹೆಸರಿನಿಂದ ಕರೆಯುತ್ತಾರೆ. ಈ ಮುಂಚೆ ಕನ್ನಡ ವಿವಿಯ ಕುಲಪತಿಗಳಾಗಿದ್ದ ಎಂ.ಎಂ. ಕಲ್ಬುರ್ಗಿಯವರ ವಿರುದ್ದ ಸುಳ್ಳುಗಳನ್ನು ಅಪಪ್ರಚಾರ ಮಾಡಲು ತಾನು ಸಂಪಾದಕನಾಗಿದ್ದ ದಿನಪತ್ರಿಕೆ ಮತ್ತು ಟಿವಿ ಚಾನಲ್ ನಲ್ಲಿ ಮತಾಂದರಿಗೆ ಸಂಪೂರ್ಣ ಅವಕಾಶವನ್ನು ಕೊಟ್ಟ ಈ ವಿ.ಭಟ್ಟರಿಗೆ ಸಂವಿದಾನ ಮೇಲೆಯೂ ಗೌರವವಿಲ್ಲ. ಸಂವಿದಾನದ ನೀತಿಸಂಹಿತೆಗಳಿಗೆ ಬದ್ದರಾಗಿ ಕಾರ್ಯನಿರ್ವಹಿಸುತ್ತಿರುವ ಹಂಪಿ ವಿವಿಯು ಸಂವಿದಾನ ವಿರೋದಿಯಾದಂತಹ ವಿಶ್ವೇಶ್ವರ ಭಟ್ಟರನ್ನು ಅತಿಥಿಯನ್ನಾಗಿ ಆಯ್ಕೆ ಮಾಡುವುದು ಸಹ ಪ್ರಜಾತಾಂತ್ರಿಕ ವಿರೋದಿ ಎನಿಸಿಕೊಳ್ಳುತ್ತದೆ

ಆದರೆ ಮಲ್ಲಿಕಾ ಘಂಟಿಯವರು ಸಿಂಡಿಕೇಟ್ ಸದಸ್ಯರ ಸಬೆ ನಡೆಸದೆ, ಹಿರಿಯ ಪ್ರಾದ್ಯಾಪಕರೊಂದಿಗೆ ಸಮಾಲೋಚಿಸದೆ ಏಕಪಕ್ಷೀಯವಾಗಿ ಈ ನಿರ್ಣಯವನ್ನು ತೆಗೆದುಕೊಂಡರು ಎಂದು ಹೇಳಲಾಗುತ್ತಿದೆ. ಸ್ವತಃ ಉಪಕುಲಪತಿಗಳೆ ಒಂದೆಡೆ ಇದು ನನ್ನ ನಿರ್ದಾರ ಎಂದು ಹೇಳಿದ್ದಾರೆ. ಅಕ್ಕ ಮಹಾದೇವಿ “ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ ಹೊಕ್ಕಡೆಂತಯ್ಯ, ಬೆಟ್ಟದ ತುದಿಯ ಮೆಟ್ಟಲೆಂದು ಹಳ್ಳಕೊಳ್ಳಂಗಳಲ್ಲಿ ಇಳಿದಡೆಂತಯ್ಯ” ಎಂದು ಕೇಳುತ್ತಾಳೆ. ಪ್ರಜ್ನಾವಂತರು ಇದೇ ಪ್ರಶ್ನೆಯನ್ನು ಇಂದು ಕುಲಪತಿಗಳಿಗೆ ಕೇಳುತ್ತಿದ್ದಾರೆ.

ವಿವಿಯ ಆಡಳಿತ ಮಂಡಳಿ ಮತ್ತು ಕುಲಪತಿಗಳ ಈ ಆಯ್ಕೆಯನ್ನು ವಿರೋದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋದ ವ್ಯಕ್ತವಾಯಿತು. ಸಾಹಿತಿ, ಲೇಖಕ, ಪತ್ರಕರ್ತರು, ಹೋರಾಟಗಾರರು ವಿಶ್ವೇಶ್ವರ ಬಟ್ಟರಂತಹ ಜೀವವಿರೋದಿ ಪತ್ರಕರ್ತರನ್ನು ಆಹ್ವಾನಿಸಿದ್ದನ್ನು ಸಾಮೂಹಿಕವಾಗಿ ಖಂಡಿಸಿ ಪತ್ರವನ್ನು ಬರೆದರು. ವಿವಿಯ ಈ ನಡೆಯು ಕೆಟ್ಟ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ವಿಶ್ವೇಶ್ವರ ಭಟ್ಟರ ಆಯ್ಕೆಯ ಈ ನಿರ್ದಾರವನ್ನ ಕೈಬಿಡಬೇಕು ಎಂದು ಆಗ್ರಹಿಸಿದರು. ಕವಿಗಳಿಗೆ ಕವಿ-ಕಾವ್ಯ ಗೋಶ್ಟಿಯಲ್ಲಿ ಬಾಗವಹಿಸಬಾರದೆಂದು ಮನವಿಯನ್ನು ಸಹ ಮಾಡಲಾಯಿತು.

ಮಲ್ಲಿಕಾ ಘಂಟಿ

ಕವಿ, ಲೇಖಕರಾದ ಲಕ್ಷ್ಮೀಪತಿ ಕೋಲಾರ, ಹನುಮಂತ ಹಾಲಗೇರಿ, ಕೆ.ಪಿ.ನಟರಾಜ, ರಮೇಶ್ ಗಬ್ಬೂರು, ಜಾಜಿ ದೇವೆಂದ್ರಪ್ಪ, ಅರುಣ್ ಜೋಳದ ಕೂಡ್ಲಿಗಿ ಅವರು ಕವಿಗೋಶ್ಟಿಯಲ್ಲಿ ಭಾಗವಹಿಸದಿರಲು ನಿರ್ದರಿಸಿದರು.

ಹಂಪಿ ವಿವಿಯ ಬಯಲು ಚಿಂತನ ಸಂಶೋದನ ವಿದ್ಯಾರ್ಥಿ ಬಳಗದವರು ಕುಲಪತಿ ಕಚೇರಿ ಎದುರು ಪ್ರತಿಬಟಿಸಿದರು. ಮುಂದೊದಗಬಹುದಾದ ಯಾವುದೇ ವ್ಯತಿರಿಕ್ತ ಪರಿಣಾಮಗಳನ್ನು ಲೆಕ್ಕಿಸದೆ ನ್ಯಾಯದ ಪರವಾಗಿ ಬೆಂಬಲಿಸಿದ ಅಲ್ಲಿನ ಸ್ನಾತಕೋತ್ತರ, ಸಂಶೋದನ ವಿದ್ಯಾರ್ಥಿಗಳ ಈ ದಿಟ್ಟತೆ ಇಡೀ ವಿವಾದಕ್ಕೆ ಹೊಸ ತಿರುವನ್ನು ತಂದಿತು. ಮೌನವಾಗಿದ್ದೀರಿ ಯಾಕೆ ಎನ್ನುವ ಪ್ರಶ್ನೆಗೆ ಗುರಿಯಾಗಿದ್ದ ವಿ.ವಿ.ಯ ಪ್ರಾದ್ಯಾಪಕರು ಕುಲಪತಿಗಳ ಏಕಪಕ್ಷೀಯ ನಿರ್ದಾರದ ವಿರುದ್ದ ತಮ್ಮ ಪ್ರತಿಭಟನೆ ದಾಖಲಿಸಿದರು. (ಆದರೆ ಕೆಲ ಪ್ರಾದ್ಯಾಪಕರು ವಿ.ಭಟ್ಟನನ್ನು ಆಹ್ವಾನಿಸಿದ್ದು ಗೊತ್ತಾದ ತಕ್ಷಣ ಕುಲಪತಿಗಳಿಗೆ ತಮ್ಮ ವಿರೋದವನ್ನು ವ್ಯಕ್ತಪಡಿಸಿದ್ದರು)

ಮೇಲಿನ ಎಲ್ಲಾ ಒತ್ತಡಗಳಿಗೆ ಮಣಿದ ಮಲ್ಲಿಕಾ ಘಂಟಿಯವರು ಎರಡು ದಿನದ ಸಮಾರೋಪ ಸಮಾರಂಬವನ್ನೆ ರದ್ದುಗೊಳಿಸಲಾಗಿದೆ ಎಂದು ಪ್ರಕಟಿಸಿದರು. ಆದರೂ ಸಹ ತಮ್ಮದೇನು ತಪ್ಪಿಲ್ಲ ಎಂಬಂತೆ ವಿ.ಭಟ್ಟರನ್ನು ಕರೆಸುವ ತಮ್ಮ ನಿರ್ದಾರವನ್ನು ಪದೆ ಪದೆ ಸಮರ್ಥಿಸಿಕೊಂಡರು. ಈ ಸಮರ್ಥನೆಯ ಭರದಲ್ಲಿ ಇಡೀ ವಿವಾದವನ್ನು ಎಡಪಂಥೀಯ ವರ್ಸಸ್ ಬಲಪಂಥೀಯ ಎಂದು ಶರಾ ಬರೆದುಬಿಟ್ಟರು. ತಮ್ಮ ಈ ಹತಾಶ ಹೇಳಿಕೆಯ ಮೂಲಕ ಜನತೆಯನ್ನು ತಪ್ಪು ದಾರಿಗೆಳೆಯುವ ಪ್ರಯತ್ನವನ್ನು ಮಾಡಿದರು. ಆದರೆ ಪತ್ರಕರ್ತ ವೇಶದ ಒಬ್ಬ ಜೀವವಿರೋದಿ ವ್ಯಕ್ತಿಯನ್ನು ಹಂಪಿ ವಿವಿಯಂತಹ ಉನ್ನತ ಶಿಕ್ಷಣ ಸಂಸ್ಥೆಗೆ ಅತಿಥಿಯಾಗಿ ಆಹ್ವಾನಿಸುವುದರ ವಿರುದ್ದ ಮಾತ್ರ ಇಲ್ಲಿ ಪ್ರತಿಬಟನೆ ಇತ್ತು ಹೊರತಾಗಿ ಯಾವುದೆ ಸಿದ್ದಾಂತಗಳ ನಡುವಿನ ಜಗಳವಂತೂ ಅಲ್ಲವೆ ಅಲ್ಲ . ಕನ್ನಡ ವಿವಿಯ ಘನತೆ ಮತ್ತು ವೈಚಾರಿಕ ಪರಂಪರೆಯನ್ನು ಕಾಪಾಡುವ ಕಳಕಳಿಯೂ ಇಲ್ಲಿನ ಪ್ರಜ್ನಾವಂತರ ಪ್ರತಿಭಟನೆಯ ಮೂಲ ಆಶಯವಾಗಿತ್ತು. ಮುಂದಿನ ಪೀಳಿಗೆಗೆ ಕನ್ನಡ ವಿವಿ ಒಂದು ಅರ್ಥಪೂರ್ಣ ಮಾದರಿಯಾಗಿರಬೇಕು ಎಂಬುದೆ ಈ ಪ್ರತಿರೋದದ ಪ್ರಜ್ನೆಯಾಗಿತ್ತು. ಬಲಪಂಥೀಯರನ್ನು ಕರೆಸುವುದಕ್ಕೆ ಯಾವುದೆ ಬಗೆಯ ವಿರೋದ ವ್ಯಕ್ತಪಡಿಸುವುದು ಪ್ರಜಾಪ್ರಬುತ್ವ ವಿರೋದಿ ನಡವಳಿಕೆಯಾಗುತ್ತದೆ ಎನ್ನುವ ಸ್ಪಶ್ಟ ತಿಳುವಳಿಕೆ ಮೇಲಿನ ಪ್ರಜ್ನಾವಂತರಿಗಿದೆ. ಮತ್ತು ಇಂತಹ ಫ್ಯಾಸಿಸ್ಟ್ ವರ್ತನೆಯನ್ನು ಕಾಲಕಾಲಕ್ಕೆ ಖಂಡಿಸುತ್ತಲೆ ಬಂದಿದ್ದಾರೆ.

ಕಡೆಗೂ ಕಾಡುವುದೇನೆಂದರೆ “ಎಲ್ಲಾ ಬಿಟ್ಟ ಮಗ ಭಂಗಿ ಯಾಕೆ ನೆಟ್ಟ” ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...