Homeಅಂಕಣಗಳುಹಂಪಿ ವಿಶ್ವವಿದ್ಯಾಲಯ ಘನತೆ, ವೈಚಾರಿಕತೆಯ ಅಳಿವು-ಉಳಿವು

ಹಂಪಿ ವಿಶ್ವವಿದ್ಯಾಲಯ ಘನತೆ, ವೈಚಾರಿಕತೆಯ ಅಳಿವು-ಉಳಿವು

- Advertisement -
- Advertisement -

ಬಿ. ಶ್ರೀಪಾದ ಬಟ್ |

ಹಂಪಿ ವಿಶ್ವವಿದ್ಯಾಲಯದಲ್ಲಿನ ಇತ್ತೀಚಿನ ವಿವಾದವನ್ನು ಗಮನಿಸಿದಾಗ ಅಲ್ಲಿನ ಕುಲಪತಿಗಳಾದ ಮಲ್ಲಿಕಾ ಘಂಟಿಯವರಿಗೆ ಯಾರು ವಿದ್ಯಾಸಾದಕರು, ಯಾರು ವಿ

ದ್ವಂಸಕರು ಎಂಬುದರ ಅರಿವು ಇಲ್ಲದೆ ಹೋಯಿತೆ ಎನ್ನುವ ಪ್ರಶ್ನೆ ಮೂಡುತ್ತದೆ. ವಿಶಯವೇನೆಂದರೆ ಕನ್ನಡ ವಿವಿಯ ನುಡಿಹಬ್ಬದ ಪ್ರಯುಕ್ತ ಡಿಸೆಂಬರ್ 31, 2018-ಜನವರಿ 1, 2019 ರಂದು ಆಯೋಜಿಸಲಾಗಿದ್ದ ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಬಕ್ಕೆ ಸುಳ್ಳು ಬಿತ್ತಿ ದ್ವೇಶವನ್ನು ಬೆಳೆಸಿದ ಪತ್ರಕರ್ತ ವಿಶ್ವೇಶ್ವರ ಭಟ್ಟರನ್ನು ಅತಿಥಿಗಳನ್ನಾಗಿ ಕರೆದಿದ್ದು ಇಡೀ ವಿವಾದದ ಕೇಂದ್ರವಾಗಿದೆ. ಸದರಿ ಪತ್ರಕರ್ತರನ್ನು ಯಾವ ಅರ್ಹತೆಯ ಮೇಲೆ ಆಹ್ವಾನಿಸಿದ್ದೀರಿ ಎಂದು ಪ್ರಜ್ನಾವಂತರು ಪ್ರಶ್ನಿಸಿ

ಹಂಪಿ ವಿಶ್ವವಿದ್ಯಾಲಯ

ದ್ದಾರೆ. ಏಕೆಂದರೆ ವಿಶ್ವೇಶ್ವರ ಭಟ್ಟ ಎನ್ನುವ ಪತ್ರಕರ್ತ ಕನ್ನಡ ಪತ್ರಿಕೋದ್ಯಮವನ್ನು ಅದೋಗತಿಗಿಳಿಸಿದ, ಮಹಿಳೆಯರ ಕುರಿತು ಅತ್ಯಂತ ಕೀಳು ಮಟ್ಟದಲ್ಲಿ, ತುಚ್ಚವಾಗಿ ಬರೆದಂತಹ ವ್ಯಕ್ತಿ. ಹಿಂದುತ್ವ ಮತಾಂದತೆಯ ವಿಶವನ್ನು ತ

ನ್ನ ಪತ್ರಿಕೆಯಲ್ಲಿ ದಿನನಿತ್ಯ ಪ್ರಚಾರ ಮಾಡಿದ, ಆ ಮೂಲಕ ಸಮಾಜದ ಸ್ವಾಸ್ಥ್ಯ ಕೆಡೆಸಿದ ಈ ಭಟ್ಟರನ್ನು ವಿಶಭಟ್ಟ ಎಂದು ಅಡ್ಡ ಹೆಸರಿನಿಂದ ಕರೆಯುತ್ತಾರೆ. ಈ ಮುಂಚೆ ಕನ್ನಡ ವಿವಿಯ ಕುಲಪತಿಗಳಾಗಿದ್ದ ಎಂ.ಎಂ. ಕಲ್ಬುರ್ಗಿಯವರ ವಿರುದ್ದ ಸುಳ್ಳುಗಳನ್ನು ಅಪಪ್ರಚಾರ ಮಾಡಲು ತಾನು ಸಂಪಾದಕನಾಗಿದ್ದ ದಿನಪತ್ರಿಕೆ ಮತ್ತು ಟಿವಿ ಚಾನಲ್ ನಲ್ಲಿ ಮತಾಂದರಿಗೆ ಸಂಪೂರ್ಣ ಅವಕಾಶವನ್ನು ಕೊಟ್ಟ ಈ ವಿ.ಭಟ್ಟರಿಗೆ ಸಂವಿದಾನ ಮೇಲೆಯೂ ಗೌರವವಿಲ್ಲ. ಸಂವಿದಾನದ ನೀತಿಸಂಹಿತೆಗಳಿಗೆ ಬದ್ದರಾಗಿ ಕಾರ್ಯನಿರ್ವಹಿಸುತ್ತಿರುವ ಹಂಪಿ ವಿವಿಯು ಸಂವಿದಾನ ವಿರೋದಿಯಾದಂತಹ ವಿಶ್ವೇಶ್ವರ ಭಟ್ಟರನ್ನು ಅತಿಥಿಯನ್ನಾಗಿ ಆಯ್ಕೆ ಮಾಡುವುದು ಸಹ ಪ್ರಜಾತಾಂತ್ರಿಕ ವಿರೋದಿ ಎನಿಸಿಕೊಳ್ಳುತ್ತದೆ

ಆದರೆ ಮಲ್ಲಿಕಾ ಘಂಟಿಯವರು ಸಿಂಡಿಕೇಟ್ ಸದಸ್ಯರ ಸಬೆ ನಡೆಸದೆ, ಹಿರಿಯ ಪ್ರಾದ್ಯಾಪಕರೊಂದಿಗೆ ಸಮಾಲೋಚಿಸದೆ ಏಕಪಕ್ಷೀಯವಾಗಿ ಈ ನಿರ್ಣಯವನ್ನು ತೆಗೆದುಕೊಂಡರು ಎಂದು ಹೇಳಲಾಗುತ್ತಿದೆ. ಸ್ವತಃ ಉಪಕುಲಪತಿಗಳೆ ಒಂದೆಡೆ ಇದು ನನ್ನ ನಿರ್ದಾರ ಎಂದು ಹೇಳಿದ್ದಾರೆ. ಅಕ್ಕ ಮಹಾದೇವಿ “ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ ಹೊಕ್ಕಡೆಂತಯ್ಯ, ಬೆಟ್ಟದ ತುದಿಯ ಮೆಟ್ಟಲೆಂದು ಹಳ್ಳಕೊಳ್ಳಂಗಳಲ್ಲಿ ಇಳಿದಡೆಂತಯ್ಯ” ಎಂದು ಕೇಳುತ್ತಾಳೆ. ಪ್ರಜ್ನಾವಂತರು ಇದೇ ಪ್ರಶ್ನೆಯನ್ನು ಇಂದು ಕುಲಪತಿಗಳಿಗೆ ಕೇಳುತ್ತಿದ್ದಾರೆ.

ವಿವಿಯ ಆಡಳಿತ ಮಂಡಳಿ ಮತ್ತು ಕುಲಪತಿಗಳ ಈ ಆಯ್ಕೆಯನ್ನು ವಿರೋದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋದ ವ್ಯಕ್ತವಾಯಿತು. ಸಾಹಿತಿ, ಲೇಖಕ, ಪತ್ರಕರ್ತರು, ಹೋರಾಟಗಾರರು ವಿಶ್ವೇಶ್ವರ ಬಟ್ಟರಂತಹ ಜೀವವಿರೋದಿ ಪತ್ರಕರ್ತರನ್ನು ಆಹ್ವಾನಿಸಿದ್ದನ್ನು ಸಾಮೂಹಿಕವಾಗಿ ಖಂಡಿಸಿ ಪತ್ರವನ್ನು ಬರೆದರು. ವಿವಿಯ ಈ ನಡೆಯು ಕೆಟ್ಟ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ವಿಶ್ವೇಶ್ವರ ಭಟ್ಟರ ಆಯ್ಕೆಯ ಈ ನಿರ್ದಾರವನ್ನ ಕೈಬಿಡಬೇಕು ಎಂದು ಆಗ್ರಹಿಸಿದರು. ಕವಿಗಳಿಗೆ ಕವಿ-ಕಾವ್ಯ ಗೋಶ್ಟಿಯಲ್ಲಿ ಬಾಗವಹಿಸಬಾರದೆಂದು ಮನವಿಯನ್ನು ಸಹ ಮಾಡಲಾಯಿತು.

ಮಲ್ಲಿಕಾ ಘಂಟಿ

ಕವಿ, ಲೇಖಕರಾದ ಲಕ್ಷ್ಮೀಪತಿ ಕೋಲಾರ, ಹನುಮಂತ ಹಾಲಗೇರಿ, ಕೆ.ಪಿ.ನಟರಾಜ, ರಮೇಶ್ ಗಬ್ಬೂರು, ಜಾಜಿ ದೇವೆಂದ್ರಪ್ಪ, ಅರುಣ್ ಜೋಳದ ಕೂಡ್ಲಿಗಿ ಅವರು ಕವಿಗೋಶ್ಟಿಯಲ್ಲಿ ಭಾಗವಹಿಸದಿರಲು ನಿರ್ದರಿಸಿದರು.

ಹಂಪಿ ವಿವಿಯ ಬಯಲು ಚಿಂತನ ಸಂಶೋದನ ವಿದ್ಯಾರ್ಥಿ ಬಳಗದವರು ಕುಲಪತಿ ಕಚೇರಿ ಎದುರು ಪ್ರತಿಬಟಿಸಿದರು. ಮುಂದೊದಗಬಹುದಾದ ಯಾವುದೇ ವ್ಯತಿರಿಕ್ತ ಪರಿಣಾಮಗಳನ್ನು ಲೆಕ್ಕಿಸದೆ ನ್ಯಾಯದ ಪರವಾಗಿ ಬೆಂಬಲಿಸಿದ ಅಲ್ಲಿನ ಸ್ನಾತಕೋತ್ತರ, ಸಂಶೋದನ ವಿದ್ಯಾರ್ಥಿಗಳ ಈ ದಿಟ್ಟತೆ ಇಡೀ ವಿವಾದಕ್ಕೆ ಹೊಸ ತಿರುವನ್ನು ತಂದಿತು. ಮೌನವಾಗಿದ್ದೀರಿ ಯಾಕೆ ಎನ್ನುವ ಪ್ರಶ್ನೆಗೆ ಗುರಿಯಾಗಿದ್ದ ವಿ.ವಿ.ಯ ಪ್ರಾದ್ಯಾಪಕರು ಕುಲಪತಿಗಳ ಏಕಪಕ್ಷೀಯ ನಿರ್ದಾರದ ವಿರುದ್ದ ತಮ್ಮ ಪ್ರತಿಭಟನೆ ದಾಖಲಿಸಿದರು. (ಆದರೆ ಕೆಲ ಪ್ರಾದ್ಯಾಪಕರು ವಿ.ಭಟ್ಟನನ್ನು ಆಹ್ವಾನಿಸಿದ್ದು ಗೊತ್ತಾದ ತಕ್ಷಣ ಕುಲಪತಿಗಳಿಗೆ ತಮ್ಮ ವಿರೋದವನ್ನು ವ್ಯಕ್ತಪಡಿಸಿದ್ದರು)

ಮೇಲಿನ ಎಲ್ಲಾ ಒತ್ತಡಗಳಿಗೆ ಮಣಿದ ಮಲ್ಲಿಕಾ ಘಂಟಿಯವರು ಎರಡು ದಿನದ ಸಮಾರೋಪ ಸಮಾರಂಬವನ್ನೆ ರದ್ದುಗೊಳಿಸಲಾಗಿದೆ ಎಂದು ಪ್ರಕಟಿಸಿದರು. ಆದರೂ ಸಹ ತಮ್ಮದೇನು ತಪ್ಪಿಲ್ಲ ಎಂಬಂತೆ ವಿ.ಭಟ್ಟರನ್ನು ಕರೆಸುವ ತಮ್ಮ ನಿರ್ದಾರವನ್ನು ಪದೆ ಪದೆ ಸಮರ್ಥಿಸಿಕೊಂಡರು. ಈ ಸಮರ್ಥನೆಯ ಭರದಲ್ಲಿ ಇಡೀ ವಿವಾದವನ್ನು ಎಡಪಂಥೀಯ ವರ್ಸಸ್ ಬಲಪಂಥೀಯ ಎಂದು ಶರಾ ಬರೆದುಬಿಟ್ಟರು. ತಮ್ಮ ಈ ಹತಾಶ ಹೇಳಿಕೆಯ ಮೂಲಕ ಜನತೆಯನ್ನು ತಪ್ಪು ದಾರಿಗೆಳೆಯುವ ಪ್ರಯತ್ನವನ್ನು ಮಾಡಿದರು. ಆದರೆ ಪತ್ರಕರ್ತ ವೇಶದ ಒಬ್ಬ ಜೀವವಿರೋದಿ ವ್ಯಕ್ತಿಯನ್ನು ಹಂಪಿ ವಿವಿಯಂತಹ ಉನ್ನತ ಶಿಕ್ಷಣ ಸಂಸ್ಥೆಗೆ ಅತಿಥಿಯಾಗಿ ಆಹ್ವಾನಿಸುವುದರ ವಿರುದ್ದ ಮಾತ್ರ ಇಲ್ಲಿ ಪ್ರತಿಬಟನೆ ಇತ್ತು ಹೊರತಾಗಿ ಯಾವುದೆ ಸಿದ್ದಾಂತಗಳ ನಡುವಿನ ಜಗಳವಂತೂ ಅಲ್ಲವೆ ಅಲ್ಲ . ಕನ್ನಡ ವಿವಿಯ ಘನತೆ ಮತ್ತು ವೈಚಾರಿಕ ಪರಂಪರೆಯನ್ನು ಕಾಪಾಡುವ ಕಳಕಳಿಯೂ ಇಲ್ಲಿನ ಪ್ರಜ್ನಾವಂತರ ಪ್ರತಿಭಟನೆಯ ಮೂಲ ಆಶಯವಾಗಿತ್ತು. ಮುಂದಿನ ಪೀಳಿಗೆಗೆ ಕನ್ನಡ ವಿವಿ ಒಂದು ಅರ್ಥಪೂರ್ಣ ಮಾದರಿಯಾಗಿರಬೇಕು ಎಂಬುದೆ ಈ ಪ್ರತಿರೋದದ ಪ್ರಜ್ನೆಯಾಗಿತ್ತು. ಬಲಪಂಥೀಯರನ್ನು ಕರೆಸುವುದಕ್ಕೆ ಯಾವುದೆ ಬಗೆಯ ವಿರೋದ ವ್ಯಕ್ತಪಡಿಸುವುದು ಪ್ರಜಾಪ್ರಬುತ್ವ ವಿರೋದಿ ನಡವಳಿಕೆಯಾಗುತ್ತದೆ ಎನ್ನುವ ಸ್ಪಶ್ಟ ತಿಳುವಳಿಕೆ ಮೇಲಿನ ಪ್ರಜ್ನಾವಂತರಿಗಿದೆ. ಮತ್ತು ಇಂತಹ ಫ್ಯಾಸಿಸ್ಟ್ ವರ್ತನೆಯನ್ನು ಕಾಲಕಾಲಕ್ಕೆ ಖಂಡಿಸುತ್ತಲೆ ಬಂದಿದ್ದಾರೆ.

ಕಡೆಗೂ ಕಾಡುವುದೇನೆಂದರೆ “ಎಲ್ಲಾ ಬಿಟ್ಟ ಮಗ ಭಂಗಿ ಯಾಕೆ ನೆಟ್ಟ” ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...