Homeರಾಜಕೀಯಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

- Advertisement -
- Advertisement -

ಪಿ.ಕೆ. |

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶೀಘ್ರ ಶುರುವಾಗಬೇಕು’……

ಇದೊಂದು ವ್ಯವಸ್ಥಿತ ಸಂಚು, ಮತಬೇಟೆಯ ಷಡ್ಯಂತ್ರ. ಮೇಲುನೋಟಕ್ಕೆ ಎಲ್ಲ ಬಿಡಿ ಬಿಡಿ ಘಟನೆ, ಬಿಡಿ ಬಿಡಿ ಹೇಳಿಕೆಗಳು ಎನಿಸುತ್ತವೆ. ಆದರೆ ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಸ್ಕ್ರಿಪ್ಟ್ ಮೊದಲೇ ಸಿದ್ಧವಾಗಿದೆ.

ಈ ಎಲ್ಲದರ ಅಂತಿಮ ಗುರಿ: ಏನೇನೂ ಜನಪರ ಕೆಲಸ ಮಾಡದ, ಅದೂಅಲ್ಲದೇ ಮೂರ್ಖ, ಮುಠ್ಠಾಳತನದ ನಿರ್ಧಾರಗಳಿಂದ ದೇಶದ ಅರ್ಥವ್ಯವಸ್ಥೆಯನ್ನೇ ಶಿಥಿಲಗೊಳಿಸಿರುವ ಮೋದಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವುದು. ಅದಕ್ಕಿಂತ ಮುಖ್ಯವಾಗಿ, ಈ ನಾಲ್ಕೂವರೆ ವರ್ಷಗಳಲ್ಲಿ ಹುಟ್ಟಿಸಿರುವ ಅಸಹನೆಯ, ಕ್ರೌರ್ಯದ ವಾತಾವರಣವನ್ನು ಶಾಶ್ವತವಾಗಿ ನಿರ್ಮಿಸುವುದು, ಈಗ ಶಿಥಿಲಗೊಳಿಸಲ್ಪಟ್ಟಿರುವ ಸಾಂವಿಧಾನಿಕ ಸಂಸ್ಥೆಗಳನ್ನು ನಿರ್ನಾಮ ಮಾಡುವುದು. ಆ ಮೂಲಕ ಸಂವಿಧಾನವನ್ನೇ ನಗಣ್ಯವಾಗಿಸಿ, ಚುನಾವಣೆಗಳನ್ನು ಪ್ರಹಸನಗಳನ್ನಾಗಿ ಪರಿವರ್ತಿಸಿ, ಒಂದು ಅರಾಜಕ ಸ್ಥಿತಿ ನಿರ್ಮಾಣ ಮಾಡುವುದು. ಅವರ ಮಟ್ಟಿಗೆ ಅದು ‘ಹಿಂದೂ ರಾಷ್ಟ್ರ’….ಅಲ್ಲಿಗೆ ಭಾರತ ದೇಶವು ಪಾಕಿಸ್ತಾನದ ಮಾದರಿಯಲ್ಲಿ ಸಾಗುವುದಂತೂ ಖಂಡಿತ.

ಆದರೆ, ಇದು ಅಷ್ಟು ಸುಲಭವಲ್ಲೆಂಬುದು ಮೋದಿ, ಶಾಗಳು ಸೇರಿದಂತೆ ಇಡೀ ಸಂಘಪರಿವಾರಕ್ಕೆ ಮನವರಿಕೆಯಾಗಿದೆ. ದೇಶದ ರೈತರು, ಕಾರ್ಮಿಕರು, ಯುವಕರು ಸ್ಪಷ್ಟವಾಗಿಯೇ ತಮ್ಮ ಖಚಿತ ವಿರೋಧಗಳನ್ನು ದಾಖಲಿಸುತ್ತಿದ್ದಾರೆ. ಇದು ಸಂಘದ ಮುಂದಿರುವ ಸವಾಲು.

ಜನರ ಬಳಿ ಹೇಳಿಕೊಳ್ಳಲು ಯಾವ ಸಾಧನೆಯೂ ಇಲ್ಲ, ಮಣ್ಣಾಂಗಟ್ಟಿಯೂ ಇಲ್ಲ. ನಾಕೂವರೆ ವರ್ಷ ‘ಇಮೇಜ್’ ಕಾಪಾಡಲು ಹೆಣಗಿದ ಮಾಧ್ಯಮಗಳು ಸುಸ್ತಾಗಿವೆ, ವಿಶ್ವಾಸ ಕಳೆದುಕೊಳ್ಳುತ್ತಿವೆ. ಸುಳ್ಳು ಸುದ್ದಿಗಳನ್ನು ಹರಡುತ್ತ ಬಂದವರಿಗೇ ನಾಚಿಕೆಯಾಗಿದೆ.

ಸಂಘ ಪರಿವಾರದ ಒಳಗಡೆ ಹತಾಶೆ ಗಿಜಿಗಿಟ್ಟಿ ತುಳುಕಾಡುತ್ತಿದೆ. 2019ರ ಚುನಾವಣೆ ಸುಲಭವಲ್ಲ ಎಂಬುದು ಅದಕ್ಕೆ ಪಕ್ಕಾ ಆಗಿದೆ. ಅದಕ್ಕಾಗಿ ಅದು ಭಿನ್ನ ವೇದಿಕೆಗಳಿಂದ ಭಿನ್ನ ಸ್ತರಗಳಲ್ಲಿ ‘ಶೀಘ್ರವೇ ರಾಮ ಮಂದಿರ ನಿರ್ಮಾಣ ಆಗಬೇಕು’ ಎಂದು ಹುಯಿಲು ಎಬ್ಬಿಸಲು ಯತ್ನಿಸುತ್ತಿದೆ. ನಾಲ್ಕೂವರೆ ವರ್ಷದ ನಂತರ ಅದಕ್ಕೆ ದಿಢೀರ್ ಶ್ರೀರಾಮ ನೆನಪಾಗಿದ್ದಾನೆ.

ಖಂಡಿತ, ಅದರ ಗುರಿ ರಾಮಮಂದಿರ ನಿರ್ಮಾಣ ಅಲ್ಲವೇ ಅಲ್ಲ, ಶ್ರೀರಾಮನ ಅಪ್ಪನಾಣೆಗೂ ಅದಕ್ಕೆ ರಾಮ ಮಂದಿರ ನಿರ್ಮಾಣ ಮುಖ್ಯವೇ ಅಲ್ಲ. ರಾಮನ ಹೆಸರಲ್ಲಿ ಸಮಾಜದಲ್ಲಿ ಬಿರುಕು ಮೂಡಿಸಬೇಕು, ನಂತರ ಸಣ್ಣಪುಟ್ಟ ಗಲಾಟೆಗಳು ನಡೆಯಬೇಕು. ಮುಸ್ಲಿಮರನ್ನು ಮಂಇರ ವಿರೋಧಿಗಳು ಎಂದು ಬಿಂಬಿಸಬೇಕು, ಇದಕ್ಕೆ ವಿಪಕ್ಷಗಳನ್ನು ಹೊಣೆಗಾರರನ್ನಾಗಿ ಮಾಡಬೇಕು…… ಇದನ್ನೇ ಮುಂದಿಟ್ಟುಕೊಂಡು ದೊಡ್ಡ ಪ್ರಮಾಣದಲ್ಲಿ ಗಲಭೆ, ಹಿಂಸಾಚಾರ ಎಬ್ಬಿಸುವುದು ಅದರ ಮೊಡರೆಸ್ ಅಪರೆಂಡಿ-ಕಾರ್ಯವಿಧಾನ…ಹೆಣಗಳು ಬೀಳಬೇಕು, ಮುಸ್ಲಿಮರದು, ಹಿಂದೂಗಳದು….ಒಟ್ಟು ಹೆಣಗಳು ಬೀಳಬೇಕು, ರಕ್ತಪಾತವಾಗಬೇಕು…’ಹಿಂದೂಗಳು ಅಪಾಯದಲ್ಲಿ’ ಎಂದೆಲ್ಲ ಹುಯಿಲೆಬ್ಬಿಸಿ ಹಿಂದೂ-ಮುಸ್ಲಿಂ ಧ್ರುವೀಕರಣ ನಡೆಯಬೇಕು, ೨೦೧೯ರ ಚುನಾವಣೆ ಇದರ ಆಧಾರದ ಮೇಲೇ ನಡೆದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು…..
* * * *

ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನಡೆದ ‘ರಾಮ ಮಂದಿರಕ್ಕಾಗಿ ಜನಾಗ್ರಹ’ ಸಭೆಯಲ್ಲಿ ಪೇಜಾವರ ಶ್ರೀಗಳು ಮಾತಾಡಿ, ‘ರಾಮಮಂದಿರಕ್ಕಾಗಿ ಮುಸ್ಲಿಮರು ಮತ್ತು ಕ್ರೈಸ್ತರು ಕೈ ಜೋಡಿಸಬೇಕು’ ಎಂದು ಫರ್ಮಾನು ಹೊರಿಸಿದ್ದಾರೆ. ಮುಂದುವರೆದು, ‘ಹಿಂದೂ-ಮುಸ್ಲಿಂ ಸೌಹಾರ್ದತೆ ಕಾಪಾಡಲು ಮುಸ್ಲಿಮರಿಗೆ ಇದೊಂದು ಒಳ್ಳೆಯ ಅವಕಾಶ’ ಎನ್ನುತ್ತಾರೆ. ಕೇಳಲಿಕ್ಕೆ ಹಿತ ಎನಿಸಬಹುದಾದ ಈ ಮಾತಿನ ಹಿಂದೆ ಸಂಘದ ಅಜೆಂಡಾ ಇದೆ. ಅಂದರೆ ಈ ದೇಶದಲ್ಲಿ ಹಿಂದೂ-ಮುಸ್ಲಿಮರ ನಡುವೆ ಸೌಹಾರ್ದತೆ ಕೆಡಲು ಮುಸ್ಲಿಮರ ತಪ್ಪುಗಳೇ ಕಾರಣ ಎಂದು ಸುಳ್ಳು ಆರೋಪವನ್ನು ಮುಸ್ಲಿಮರ ತಲೆಗೆ ಕಟ್ಟುವ ಹುನ್ನಾರ ಮತ್ತೆ ಪ್ರವರ್ಧಮಾನಕ್ಕೆ ಬಂದಿದೆ. 1992, 2002 ರ ಹಿಂಸಾಚಾರಗಳಿಗೂ ಮೊದಲು ಇದೇ ರೀತಿ ವ್ಯವಸ್ಥಿತ ಅಪಪ್ರಚಾರ ಮಾಡಲಾಗಿತ್ತು ಎಂಬುದನ್ನು ಮರೆಯದಿರೋಣ.

ಬರುವ ತಿಂಗಳು ಸುಪ್ರಿಂ ಕೋರ್ಟ್ ವಿಚಾರಣೆಯ ಸ್ವರೂಪವನ್ನು ನಿರ್ಧರಿಸುವುದು ಗೊತ್ತಿದ್ದೂ ಪೇಜಾವರಶ್ರೀಗಳು ಸುಗ್ರೀವಾಜ್ಞೆಗೆ ಆಗ್ರಹಿಸುವುದರ ಹಿಂದೆ ಮಸಲತ್ತಿದೆ. ನಿರ್ಣಾಯಕ ಘಟ್ಟಗಳಲ್ಲಿ ಇಂತಹ ಪಾತ್ರ ನಿರ್ವಹಿಸುತ್ತಲೇ ಬಂದಿರುವ ಅವರು ಈಗ ತಮ್ಮ ಪಾತ್ರದ ಅಂತಿಮ ದೃಶ್ಯಕ್ಕೆ ರೆಡಿಯಾದಂತಿದೆ.

ಇದೇ ಹೊತ್ತಲ್ಲಿ, ಅಖಿಲ ಭಾರತ್ ಅಖಾಡ ಪರಿಷತ್ ಎನ್ನುವ ಸಾಧು ಸಂತರ ಗುಂಪು ಮುಸ್ಲಿಮರ ಜೊತೆ ಮಾತುಕತೆ ನಡೆಸುವ ಮೂಲಕ ಮಂದಿರ ಕಟ್ಟುತ್ತೇವೆ ಎನ್ನುತ್ತದೆ. ಮುಖ್ಯವಾಹಿನಿ ಮಾಧ್ಯಮಗಳು, ‘ಹಿಂದೂತ್ವ ಗುಂಪುಗಳಲ್ಲಿ ಭಿನ್ನಮತ’ ಎಂದು ಬರೆದು, ಮತ್ತದೇ ಹಿಂದಿನ ತಪ್ಪನ್ನು (ಬೇಕೆಂತಲೇ) ಮಾಡಿವೆ. ಈ ಅಖಾಡದ ಉದ್ದೇಶವೂ ಮುಸ್ಲಿಮರನ್ನು ಬಲಿಪಶು ಮಾಡುವುದೇ ಆಗಿದೆ ಮತ್ತು ಇದು ಆರ್‌ಎಸ್‌ಎಸ್ ಸ್ಕ್ರಿಪ್ಟ್‌ನ ಭಾಗವೇ ಆಗಿದೆ ಎಂಬುದರಲ್ಲಿ ಸಂಶಯವಿಲ್ಲ.

ವಿವಾದಿತ ಪ್ರದೇಶ ತನ್ನ ಆಸ್ತಿ ಎಂದು ಭ್ರಮಿಸಿರುವ ವಿಎಚ್‌ಪಿ, ಆ ಜಾಗವನ್ನು ತನ್ನ ಸುಪರ್ದಿಗೆ ಒಪ್ಪಿಸಿ ಮಂದಿರ ನಿರ್ಮಾಣ ಆರಂಭಿಸಲು ಅನುವು ಮಾಡಿ ಕೊಡಬೇಕು ಎನ್ನುತ್ತಿದೆ. ಕೇಂದ್ರ ಸಚಿವ ಗಿರಿರಾಜ್‌ಸಿಂಗ್ ಮಂದಿರ ನಿರ್ಮಾಣಕ್ಕೆ ಅವಕಾಶ ಸಿಗದಿದ್ದರೆ ಅನಾಹುತಗಳು ಸಂಭವಿಸಲಿವೆ ಎಂದು ಎಚ್ಚರಿಸಿದ್ದಾನೆ. ರಾಜ್ಯಸಭಾ ಸದಸ್ಯ ಮತ್ತು ಆರ್‌ಎಸ್‌ಎಸ್ ಸಿದ್ದಾಂತಿ ರಾಕೇಶ್ ಶರ್ಮಾ ಚಳಿಗಾಲ ಅಧಿವೇಶನದಲ್ಲಿ ಮಂದಿರಕ್ಕಾಗಿ ಖಾಸಗಿ ಮಸೂದೆ ಮಂಡಿಸುತ್ತಾನಂತೆ. ಈ ಬಗ್ಗೆ ಟ್ವೀಟ್ ಮಾಡಿರುವ ಆತ, ‘ನೀವು ಮಂದಿರದ ಪರವೋ, ವಿರೋಧವೋ’ ಎಂಬುದನ್ನು ಹೇಳಬೇಕು ಎಂದು ರಾಹುಲ್ ಗಾಂಧಿ, ಸೀತಾರಾಮ್ ಯೆಚೂರಿ, ಮಾಯಾವತಿ ಮುಂತಾದ ವಿಪಕ್ಷ ನಾಯಕರನ್ನು ಆಗ್ರಹಿಸಿದ್ದಾನೆ. ಮಂದಿರ ನಿರ್ಮಾಣಕ್ಕೆ ವಿಪಕ್ಷಗಳೇ ಮುಖ್ಯವಾಗಿ ಕಾಂಗ್ರೆಸ್ಸೇ ಅಡ್ಡಿ ಎಂಬ ಭಾವ ಸೃಷ್ಟಿಸುವ ಭಾಗವಾಗಿ ಈ ‘ಮಸೂದೆ’ ಡ್ರಾಮಾ ತಯ್ಯಾರಿ ನಡೆಯುತ್ತಿದೆ.

ಈ ಅಜೆಂಡಾದ ಪ್ರಮುಖ ಭಾಗವಾಗಿರುವ ಫಲಾನುಭವಿ ಪ್ರಧಾನಿ, ಮಂದಿರ ವಿಷಯ ಬೇಗ ಇತ್ಯರ್ಥ ಆಗದಂತೆ ನ್ಯಾಯಾಲಯದ ಮೇಲೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದು ಚುನಾವಣಾ ಪ್ರಚಾರದಲ್ಲಿ ನಿರ್ಲಜ್ಜವಾಗಿ ಹೇಳಿದ್ದಾರೆ. ಹೇಳಿಕೊಳ್ಳಲೂ ಯಾವ ಸಾಧನೆಯೂ ಇಲ್ಲ, ಜನರ ದೈನಂದಿನ ಬದುಕು ಹದಗೆಡಲು ಮಾಡಿದ ಕೆಲಸಗಳಿಗೆ ಲೆಕ್ಕವಿಲ್ಲ. ಹೀಗಾಗಿ ಪ್ರಧಾನಿಗೆ ರಾಮನ ಪಾದ ಬಿಟ್ಟರೆ ಗತಿಯಿಲ್ಲ. ಅವರ ಅಜೆಂಡಾದ ಪ್ರಕಾರ ಕೋಮು ಧ್ರುವೀಕರಣ ಆಗಬೇಕು, ಅದಾಗಬೇಕೆಂದರೆ 1992 ಮತ್ತು 2002ರ ಹಿಂಸಾಚಾರಗಳು ಸಂಭವಿಸಬೇಕು… ಈಗ ನಡೆಯುತ್ತಿರುವುದು ಇದಕ್ಕೆ ಬೇಕಾದ ಪೂರ್ವಸಿದ್ದತೆಗಳು ಅಷ್ಟೇ.

ಈಗಲೇ ಜನರು ಇದನ್ನು ಅರಿತುಕೊಂಡರೆ, ಭೀಕರ ಅನಾಹುತವನ್ನು ತಪ್ಪಿಸಬಹುದು. ದೆಹಲಿಯಲ್ಲಿ ನಡೆದ ರೈತರ ರ‍್ಯಾಲಿ ಈ ದಿಸೆಯಲ್ಲಿನ ಆಶಾದಾಯಕ ಬೆಳವಣಿಗೆ. ಧರ್ಮದ ವಿಚಾರ ಬಿಟ್ಟು ಬದುಕಿನ ಸಂಕಟಗಳ ಕುರಿತು, ಅವುಗಳ ಪರಿಹಾರ ದಾರಿಗಳ ಕುರಿತು ಜನ ಯೋಚಿಸತೊಡಗಿದರೆ ಸಂಘದ ಸಂಚು ಮಣ್ಣುಪಾಲಾಗುವುದು ಖಚಿತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...